ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಯಾವುದೇ ರಾಜಕೀಯ ಬರಬಾರದು ಎಂಬ ಸಿದ್ಧಾಂತವನ್ನು ಪ್ರತಿಪಾದಿಸುತ್ತಾ ಸಹಕಾರಿಗಳೆಲ್ಲರ ಪ್ರೀತಿ ವಿಶ್ವಾಸವನ್ನು ಗಳಿಸಿಕೊಂಡಿರುವ ಸಹಕಾರಿ ಕ್ಷೇತ್ರದ ನಾಯಕರಾದ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಅವರು ಡಿಸೆಂಬರ್ 10ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಿಂದ ದೂರ ಸರಿದಿದ್ದಾರೆ.
ಸಹಕಾರಿ ಕ್ಷೇತ್ರದ ಪ್ರಮುಖರ ಹಾಗೂ ನವೋದಯ ಸ್ವಸಹಾಯ ಸಂಘಗಳ ಸದಸ್ಯರೆಲ್ಲರ ಆಶಯ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಅವರು ಸಹಕಾರಿ ಕ್ಷೇತ್ರದಲ್ಲಿ ಪಕ್ಷಾತೀತ ನಾಯಕರಾಗಿ ಉಳಿಯಬೇಕು, ರಾಜಕೀಯ ಪ್ರವೇಶದಿಂದ ಸಹಕಾರಿಗಳೆಲ್ಲರಿಂದ ದೂರ ಉಳಿಯುವ ಸಾಧ್ಯತೆ ಇರುವುದರಿಂದ ಅವರು ಸಹಕಾರಿ ನಾಯಕರಾಗಿಯೇ ಇರಬೇಕು ಎಂಬ ಆಶಯವನ್ನು ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ ಅವರು ಸ್ಪರ್ಧಾಕಣದಿಂದ ದೂರಸರಿಯಲು ನಿರ್ಧರಿಸಿದ್ದಾರೆ.
ಸಹಕಾರಿಗಳೆಲ್ಲರ ಆಶಯದಂತೆ ಅವರು ಈ ನಿರ್ಧಾರವನ್ನು ಕೈಗೊಂಡಿದ್ದು, ಯಾವುದೇ ಕಾರಣಕ್ಕೂ ರಾಜಕೀಯಕ್ಕೆ ಪ್ರವೇಶ ಮಾಡುವುದಿಲ್ಲ. ಸಹಕಾರ ಕ್ಷೇತ್ರದಿಂದಲೇ ತಾನು ಗುರುತಿಸಿಕೊಳ್ಳಬೇಕು ಹಾಗೂ ಸಹಕಾರ ಕ್ಷೇತ್ರಕ್ಕೆ ತನ್ನಿಂದಾದ ಉತ್ತಮ ಕೆಲಸವನ್ನು ಮುಂದುವರಿಸುವ ಉದ್ದೇಶ ಅವರಲ್ಲಿದೆ. ಹಾಗಾಗಿ ಸಹಕಾರಿಗಳ ಆಶಯಕ್ಕೆ ಸ್ಪಂದಿಸುವ ಉದ್ದೇಶದಿಂದ ಅವರು ವಿಧಾನ ಪರಿಷತ್ ಚುನಾವಣಾ ಪ್ರಕ್ರಿಯೆಯಿಂದ ಹಿಂದೆ ಸರಿದಿದ್ದಾರೆ.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…