ಮಂಗಳೂರು: ಸಹಕಾರಿ ಕ್ಷೇತ್ರದಲ್ಲಿ ಯಾವುದೇ ರಾಜಕೀಯ ಬರಬಾರದು ಎಂಬ ಸಿದ್ಧಾಂತವನ್ನು ಪ್ರತಿಪಾದಿಸುತ್ತಾ ಸಹಕಾರಿಗಳೆಲ್ಲರ ಪ್ರೀತಿ ವಿಶ್ವಾಸವನ್ನು ಗಳಿಸಿಕೊಂಡಿರುವ ಸಹಕಾರಿ ಕ್ಷೇತ್ರದ ನಾಯಕರಾದ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಅವರು ಡಿಸೆಂಬರ್ 10ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಿಂದ ದೂರ ಸರಿದಿದ್ದಾರೆ.
ಸಹಕಾರಿ ಕ್ಷೇತ್ರದ ಪ್ರಮುಖರ ಹಾಗೂ ನವೋದಯ ಸ್ವಸಹಾಯ ಸಂಘಗಳ ಸದಸ್ಯರೆಲ್ಲರ ಆಶಯ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಅವರು ಸಹಕಾರಿ ಕ್ಷೇತ್ರದಲ್ಲಿ ಪಕ್ಷಾತೀತ ನಾಯಕರಾಗಿ ಉಳಿಯಬೇಕು, ರಾಜಕೀಯ ಪ್ರವೇಶದಿಂದ ಸಹಕಾರಿಗಳೆಲ್ಲರಿಂದ ದೂರ ಉಳಿಯುವ ಸಾಧ್ಯತೆ ಇರುವುದರಿಂದ ಅವರು ಸಹಕಾರಿ ನಾಯಕರಾಗಿಯೇ ಇರಬೇಕು ಎಂಬ ಆಶಯವನ್ನು ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ ಅವರು ಸ್ಪರ್ಧಾಕಣದಿಂದ ದೂರಸರಿಯಲು ನಿರ್ಧರಿಸಿದ್ದಾರೆ.
ಸಹಕಾರಿಗಳೆಲ್ಲರ ಆಶಯದಂತೆ ಅವರು ಈ ನಿರ್ಧಾರವನ್ನು ಕೈಗೊಂಡಿದ್ದು, ಯಾವುದೇ ಕಾರಣಕ್ಕೂ ರಾಜಕೀಯಕ್ಕೆ ಪ್ರವೇಶ ಮಾಡುವುದಿಲ್ಲ. ಸಹಕಾರ ಕ್ಷೇತ್ರದಿಂದಲೇ ತಾನು ಗುರುತಿಸಿಕೊಳ್ಳಬೇಕು ಹಾಗೂ ಸಹಕಾರ ಕ್ಷೇತ್ರಕ್ಕೆ ತನ್ನಿಂದಾದ ಉತ್ತಮ ಕೆಲಸವನ್ನು ಮುಂದುವರಿಸುವ ಉದ್ದೇಶ ಅವರಲ್ಲಿದೆ. ಹಾಗಾಗಿ ಸಹಕಾರಿಗಳ ಆಶಯಕ್ಕೆ ಸ್ಪಂದಿಸುವ ಉದ್ದೇಶದಿಂದ ಅವರು ವಿಧಾನ ಪರಿಷತ್ ಚುನಾವಣಾ ಪ್ರಕ್ರಿಯೆಯಿಂದ ಹಿಂದೆ ಸರಿದಿದ್ದಾರೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…