ಮಂಗಳೂರು: ಪಟಾಕಿ ಮಳಿಗೆ ಹಾಕಲು ಸರ್ಕಾರ ಹೊಸ ನಿಯಮಾವಳಿ ಜಾರಿ ಮಾಡಿದ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ವಿಶ್ವ ಹಿಂದೂ ಪರಿಷತ್ ಕಿಡಿಕಾರಿದೆ.
ಸಿದ್ದರಾಮಯ್ಯ ಸರ್ಕಾರವೇ ಹಿಂದೂ ವಿರೋಧಿಯಾಗಿದೆ. ಹಿಂದೂಗಳ ಹಬ್ಬದ ಸಂದರ್ಭದಲ್ಲಿ ಬೇಡದ ನಿಯಮ ಜಾರಿ ತರಲಾಗುತ್ತಿದೆ. ಹಬ್ಬದ ಆಚರಣೆಗಳಿಗೆ ಅಡ್ಡಿ ಪಡಿಸಲಾಗುತ್ತಿದೆ. ಗಣೇಶ ಹಬ್ಬದ ಸಂದರ್ಭದಲ್ಲಿಯೂ ಬಾಂಡ್ ಸೇರಿದಂತೆ ಹಲವು ನಿಯಮ ತರಲಾಯಿತು. ಅಲ್ಲೂ ಸಹ ಅಡ್ಡಿಪಡಿಸುವ ಕೆಲಸವಾಗಿದೆ. ಈಗ ವಿಶ್ವಾದ್ಯಂತ ಹಿಂದೂಗಳು ಆಚರಿಸುವ ದೀಪಾವಳಿ ಹಬ್ಬಕ್ಕೆ ಅಡ್ಡಿಪಡಿಸಲಾಗುತ್ತಿದೆ.
ಮಂಗಳೂರಿನ ಮೂರು ಮೈದಾನದಲ್ಲಿ ಮಾತ್ರ ಪಟಾಕಿ ಮಾರಬೇಕೆಂದು ಹೇಳಲಾಗಿದೆ. ಹಿಂದೂಗಳನ್ನು ಧಮನ ಮಾಡಬೇಕೆಂದು ಈ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಇಷ್ಟು ಬಲವಾಗಿ ನಿಯಮ ಜಾರಿ ಮಾಡುವುದಾದರೆ ಮೈಕ್ ನಿಯಮ ಜಾರಿಯಾಗಲಿ. ಮಸೀದಿಗಳಲ್ಲಿ ಮೈಕ್ ಗಳನ್ನು ಜೋರಾಗಿ ಕೂಗಲಾಗುತ್ತಿದೆ. ಅದನ್ನು ನಿಲ್ಲಿಸುವ ಕೆಲಸ ಆಗಿದೆಯಾ..? ಸುಪ್ರೀಂ ಕೋರ್ಟ್ ನಿಯಮ ಪಾಲನೆ ಆಗಿದೆಯಾ.. ಹಿಂದೂಗಳ ಹಬ್ಬ ಆಚರಣೆ ಅಡ್ಡಿ ಮಾಡಬೇಕೆಂಬ ಧೋರಣೆ ಸರ್ಕಾರದ್ದಾಗಿದೆ. ಜಿಲ್ಲಾಡಳಿತ ಈ ಬಗ್ಗೆ ಮರು ಪರಿಶೀಲನೆ ಮಾಡಬೇಕು ಎಂದು ವಿ.ಎಚ್.ಪಿ ಮುಖಂಡ ಪ್ರದೀಪ್ ಸರಿಪಳ್ಳ ಆಗ್ರಹಿಸಿದರು.
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…
ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…