Featured

ಮಂಗಳೂರು : ಪಠ್ಯ ಪುಸ್ತಕದಿಂದ ನಾರಾಯಣ ಗುರುಗಳ ಹೆಸರನ್ನು ಕೈ ಬಿಟ್ಟಿರುವುದು ದಾರ್ಶನಿಕನಿಗೆ ಮಾಡಿದ ಅಪಮಾನ : ರಮಾನಾಥ ರೈ ಆಕ್ರೋಶ – Vishwanews24

ಬಿಜೆಪಿ ಹಿಂದುಳಿದ ವರ್ಗಗಳ ವಿರೋಧಿ ಸರ್ಕಾರ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ..

ಮಂಗಳೂರು: ಪಠ್ಯಪುಸ್ತಕ ಮರು ಪರಿಷ್ಕರಣೆ ವೇಳೆ ನಾರಾಯಣ ಗುರುಗಳ ಹೆಸರನ್ನು ಕೈ ಬಿಟ್ಟಿರುವುದು ದಾರ್ಶನಿಕನಿಗೆ ಮಾಡಿದ ಅಪಮಾನವಾಗಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಅಭಿಪ್ರಾಯ ಪಟ್ಟರು‌.

ಶುಕ್ರವಾರ ಇಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ನಾರಾಯಣ ಗುರುಗಳ ಹೆಸರನ್ನು ಪಠ್ಯ ಪುಸ್ತಕದಿಂದ ಕೈ ಬಿಡಲಾಗಿದೆ ಎಂಬುದು ಕಾಂಗ್ರೆಸ್ ನ ಅಪಪ್ರಚಾರ ಎಂದು ಕೆಲವರು ಹೇಳುತ್ತಿದ್ದಾರೆ.

ಆದರೆ, ಈ ಬಗ್ಗೆ ಮಾಧ್ಯಮದವರು, ಚಿಂತಕರು ಮೊದಲು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದರು.

ದಕ್ಷಿಣ‌ ಕನ್ನಡ ಜಿಲ್ಲೆಯಲ್ಲಿ ನಾರಾಯಣ ಗುರುಗಳ ಅನುಯಾಯಿಗಳು ಹೆಚ್ಚು ಇದ್ದಾರೆ. ಇವರದೇ ಸಮುದಾಯಕ್ಕೆ ಸೇರಿದ ಇಬ್ಬರು ಸಚಿವರು ಇದೇ ಜಿಲ್ಲೆಯವರಾಗಿದ್ದಾರೆ. ಇಂತಹ ಪ್ರಮಾದ ನಡೆದಿದ್ದರೆ ಈ ಇಬ್ಬರು ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.‌

ಪರಧರ್ಮ ಸಹಿಷ್ಣುತೆ, ಸರ್ವ ಜನಾಂಗದ ಶಾಂತಿಯ ತೋಟ ಆಗಿರುವ ಕರ್ನಾಟಕದಲ್ಲಿ ಸಾಮರಸ್ಯ ಕ್ಕೆ ಕುಂದು ತರುವ ವಿಚಾರವನ್ನು ಪಠ್ಯ ಪುಸ್ತಕದಲ್ಲಿ ಸೇರಿಸುವುದು ಘೋರ ಅಪರಾಧವಾಗಿದೆ. ಗಾಂಧೀಜಿ ಹತ್ಯೆ ಮಾಡಿರುವ ನಾಥೂರಾಮ ಗೋಡ್ಸೆ ಬಗ್ಗೆಯಾಗಲಿ, ಹೆಡಗೇವಾರ್ ಬಗ್ಗೆಯಾಗಲಿ ಬಿಜೆಪಿಯವರು ವೇದಿಕೆಯಲ್ಲಿ ಮಾತನಾಡಿಕೊಳ್ಳಲಿ. ಆದರೆ ಸಣ್ಣ‌ಮಕ್ಕಳು ಓದುವ ಪಠ್ಯದಲ್ಲಿ ಇಂತಹ ವಿಚಾರ ಸೇರಿಸುವುದರ ಹಿಂದೆ ದುರುದ್ದೇಶ ಇದೆ ಎಂದು ಆರೋಪಿಸಿದರು.

ಈ ಹಿಂದೆ ಗಣರಾಜ್ಯೋತ್ಸವ ದ ಪರೇಡ್ ನಲ್ಲಿ ನಾರಾಯಣ ಗುರುಗಳ ಸ್ಥಬ್ದಚಿತ್ರವನ್ನು ಸರ್ಕಾರ ಕೈ ಬಿಟ್ಟಿತ್ತು.‌ ಈಗ ಪಠ್ಯದಲ್ಲಿ ಇವರ ವಿಚಾರ ಕೈ ಬಿಟ್ಟಿರುವುದು ಹಿಂದುಳಿದವರಿಗೆ ಮಾತ್ರವಲ್ಲ, ಇಡೀ ಮಾನವ ಸಮಾಜಕ್ಕೆ ಮಾಡಿದ ಅವಮಾನವಾಗಿದೆ. ಬಿಜೆಪಿ ಹಿಂದುಳಿದ ವರ್ಗಗಳ ವಿರೋಧಿ ಸರ್ಕಾರ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದರು.

Vishwa News 24

Recent Posts

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ – vishwanews24

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ…

18 hours ago

ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌ – vishwanews24

ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌ ಬೆಂಗಳೂರು: ಸಚಿವ ಸ್ಥಾನ ಸಿಗದ…

19 hours ago

ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ – vishwanews24

ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ ಕಾಪು: ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ ಶ್ರೀ ನಾರಾಯಣಗುರು…

19 hours ago

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ – vishwanews24

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ ಮಣಿಪಾಲ: ಜನನಿ ಬಾರ್ & ರೆಸ್ಟೋರೆಂಟ್ ಎದುರು…

20 hours ago

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ – vishwanews24

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…

22 hours ago

ರಾಜ್ಯದ ಅತಿವೃಷ್ಟಿ / ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ: ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ – vishwanews24

ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ /…

22 hours ago