Featured

ಮಂಗಳೂರು : ಪಠ್ಯ ಪುಸ್ತಕದಿಂದ ನಾರಾಯಣ ಗುರುಗಳ ಹೆಸರನ್ನು ಕೈ ಬಿಟ್ಟಿರುವುದು ದಾರ್ಶನಿಕನಿಗೆ ಮಾಡಿದ ಅಪಮಾನ : ರಮಾನಾಥ ರೈ ಆಕ್ರೋಶ – Vishwanews24

ಬಿಜೆಪಿ ಹಿಂದುಳಿದ ವರ್ಗಗಳ ವಿರೋಧಿ ಸರ್ಕಾರ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ..

ಮಂಗಳೂರು: ಪಠ್ಯಪುಸ್ತಕ ಮರು ಪರಿಷ್ಕರಣೆ ವೇಳೆ ನಾರಾಯಣ ಗುರುಗಳ ಹೆಸರನ್ನು ಕೈ ಬಿಟ್ಟಿರುವುದು ದಾರ್ಶನಿಕನಿಗೆ ಮಾಡಿದ ಅಪಮಾನವಾಗಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಅಭಿಪ್ರಾಯ ಪಟ್ಟರು‌.

ಶುಕ್ರವಾರ ಇಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ನಾರಾಯಣ ಗುರುಗಳ ಹೆಸರನ್ನು ಪಠ್ಯ ಪುಸ್ತಕದಿಂದ ಕೈ ಬಿಡಲಾಗಿದೆ ಎಂಬುದು ಕಾಂಗ್ರೆಸ್ ನ ಅಪಪ್ರಚಾರ ಎಂದು ಕೆಲವರು ಹೇಳುತ್ತಿದ್ದಾರೆ.

ಆದರೆ, ಈ ಬಗ್ಗೆ ಮಾಧ್ಯಮದವರು, ಚಿಂತಕರು ಮೊದಲು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದರು.

ದಕ್ಷಿಣ‌ ಕನ್ನಡ ಜಿಲ್ಲೆಯಲ್ಲಿ ನಾರಾಯಣ ಗುರುಗಳ ಅನುಯಾಯಿಗಳು ಹೆಚ್ಚು ಇದ್ದಾರೆ. ಇವರದೇ ಸಮುದಾಯಕ್ಕೆ ಸೇರಿದ ಇಬ್ಬರು ಸಚಿವರು ಇದೇ ಜಿಲ್ಲೆಯವರಾಗಿದ್ದಾರೆ. ಇಂತಹ ಪ್ರಮಾದ ನಡೆದಿದ್ದರೆ ಈ ಇಬ್ಬರು ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.‌

ಪರಧರ್ಮ ಸಹಿಷ್ಣುತೆ, ಸರ್ವ ಜನಾಂಗದ ಶಾಂತಿಯ ತೋಟ ಆಗಿರುವ ಕರ್ನಾಟಕದಲ್ಲಿ ಸಾಮರಸ್ಯ ಕ್ಕೆ ಕುಂದು ತರುವ ವಿಚಾರವನ್ನು ಪಠ್ಯ ಪುಸ್ತಕದಲ್ಲಿ ಸೇರಿಸುವುದು ಘೋರ ಅಪರಾಧವಾಗಿದೆ. ಗಾಂಧೀಜಿ ಹತ್ಯೆ ಮಾಡಿರುವ ನಾಥೂರಾಮ ಗೋಡ್ಸೆ ಬಗ್ಗೆಯಾಗಲಿ, ಹೆಡಗೇವಾರ್ ಬಗ್ಗೆಯಾಗಲಿ ಬಿಜೆಪಿಯವರು ವೇದಿಕೆಯಲ್ಲಿ ಮಾತನಾಡಿಕೊಳ್ಳಲಿ. ಆದರೆ ಸಣ್ಣ‌ಮಕ್ಕಳು ಓದುವ ಪಠ್ಯದಲ್ಲಿ ಇಂತಹ ವಿಚಾರ ಸೇರಿಸುವುದರ ಹಿಂದೆ ದುರುದ್ದೇಶ ಇದೆ ಎಂದು ಆರೋಪಿಸಿದರು.

ಈ ಹಿಂದೆ ಗಣರಾಜ್ಯೋತ್ಸವ ದ ಪರೇಡ್ ನಲ್ಲಿ ನಾರಾಯಣ ಗುರುಗಳ ಸ್ಥಬ್ದಚಿತ್ರವನ್ನು ಸರ್ಕಾರ ಕೈ ಬಿಟ್ಟಿತ್ತು.‌ ಈಗ ಪಠ್ಯದಲ್ಲಿ ಇವರ ವಿಚಾರ ಕೈ ಬಿಟ್ಟಿರುವುದು ಹಿಂದುಳಿದವರಿಗೆ ಮಾತ್ರವಲ್ಲ, ಇಡೀ ಮಾನವ ಸಮಾಜಕ್ಕೆ ಮಾಡಿದ ಅವಮಾನವಾಗಿದೆ. ಬಿಜೆಪಿ ಹಿಂದುಳಿದ ವರ್ಗಗಳ ವಿರೋಧಿ ಸರ್ಕಾರ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago