Featured

ಮಂಗಳೂರು:  ಪಣಂಬೂರಿನಲ್ಲಿ ಭೀಕರ ಸರಣಿ ರಸ್ತೆ ಅಪಘಾತ ; ಮೂವರು ಸ್ಥಳದಲ್ಲೇ ಮೃತ್ಯು – vishwanews24

ಮಂಗಳೂರು:  ಪಣಂಬೂರಿನಲ್ಲಿ ಭೀಕರ ಸರಣಿ ರಸ್ತೆ ಅಪಘಾತ ; ಮೂವರು ಸ್ಥಳದಲ್ಲೇ ಮೃತ್ಯು

ಸುರತ್ಕಲ್: ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದ ಸರಣಿ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ.

ಪಣಂಬೂರು ಸಿಗ್ನಲ್ ಬಳಿ ಈ ಅಪಘಾತ ಸಂಭವಿಸಿದೆ. ಸಿಗ್ನಲ್ ನಲ್ಲಿ ಸರತಿಯಲ್ಲಿದ್ದ ವೇಳೆ ಎರಡು ಟ್ಯಾಂಕರ್, ಆಟೊ ರಿಕ್ಷಾ ಮತ್ತು ಕಾರು ಅಪಘಾತಕ್ಕೀಡಾಗಿವೆ.

ಸಿಗ್ನಲ್ ನಲ್ಲಿ ನಿಂತಿದ್ದ ಟ್ಯಾಂಕರ್ ವೊಂದರ ಹಿಂಭಾಗದಲ್ಲಿ ಕಾರು ಮತ್ತು ಆಟೊ ರಿಕ್ಷಾ ನಿಂತಿತ್ತು. ಈ ವೇಳೆ ಹಿಂದಿನಿಂದ ಬಂದ ಇನ್ನೊಂದು ಟ್ಯಾಂಕರ್ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ರಿಕ್ಷಾ ಎದುರಿನಲ್ಲಿ ನಿಂತಿದ್ದ ಕಾರಿಗೆ ಅಪ್ಪಳಿಸಿ ಬಳಿಕ ಅದರ ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕರ್ ಗೆ ಢಿಕ್ಕಿ ಹೊಡೆದಿದೆ.

ಈ ವೇಳೆ ಆಟೊ ರಿಕ್ಷಾ ಎರಡು ಟ್ಯಾಂಕರ್ ಗಳ ಮಧ್ಯೆ ಸಿಲುಕಿ ಅಪ್ಪಚ್ಚಿಯಾಗಿದೆ. ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಮತ್ತು ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಡಿ ನೀಡಿ ಪರಿಶೀಲಿಸಿದ್ದಾರೆ ಎಂದು ತಿಳಿದು ಬಂದಿದೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

14 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

15 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

15 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

16 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

17 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

17 hours ago