ಮಂಗಳೂರು: ವಿಹಾರಕ್ಕೆ ತೆರಳಿದ್ದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ದುಷ್ಕರ್ಮಿಗಳು ನೈತಿಕ ಪೊಲೀಸ್ಗಿರಿ ಪ್ರದರ್ಶಿಸಿದ ಘಟನೆ ಪಣಂಬೂರಿನ ಬೀಚ್ ಬಳಿ ನಡೆದಿದೆ.
ಮಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಬೀಚ್ಗೆ ತೆರಳಿದ್ದರು. ಈ ವೇಳೆ ದುಷ್ಕರ್ಮಿಗಳ ತಂಡ ಬೈಕ್ನಲ್ಲಿ ವಿದ್ಯಾರ್ಥಿಗಳನ್ನು ಹಿಂಬಾಲಿಸಿತ್ತು. ಬಳಿಕ ವಿದ್ಯಾರ್ಥಿಗಳನ್ನು ನಗರದ ಬಿಜೈ ಕಾಪಿಕಾಡ್ ಎಂಬಲ್ಲಿ ತಡೆದಿದ್ದಾರೆ. ಈ ವೇಳೆ ವಿದ್ಯಾರ್ಥಿ ಮಹಮ್ಮದ್ ಹಫೀಸ್ (20) ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ.
ಬೀಚ್ಗೆ 4 ಜನ ವಿದ್ಯಾರ್ಥಿನಿಯರು ಅನ್ಯಕೋಮಿನ ಇಬ್ಬರು ವಿದ್ಯಾರ್ಥಿಗಳೊಂದಿಗೆ ತೆರಳಿದ್ದರು. ಇದರಿಂದಾಗಿ ಕಿಡಿಗೇಡಿಗಳು ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಳೆದ ಜೂನ್ನಲ್ಲಿ ಸಹ ಸೋಮೇಶ್ವರ ಬೀಚ್ಗೆ ತೆರಳಿದ್ದ ವಿದ್ಯಾರ್ಥಿಗಳ ಮೇಲೆ ಕೆಲವರು ಹಲ್ಲೆ ನಡೆಸಿದ್ದ ವರದಿಯಾಗಿತ್ತು.
ಈ ಸಂಬಂಧ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…