Judge and gavel in courtroom
ಮಂಗಳೂರು: ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯೋರ್ವಳು ತನ್ನ ಪತಿಯನ್ನೇ ಕೊಲೆ ಮಾಡಿಸಿದ ಪ್ರಕರಣದಲ್ಲಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳವಾರ ತೀರ್ಪು ನೀಡಿದೆ.
ಘಟನೆ 2016ರಲ್ಲಿ ನಡೆದಿತ್ತು. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾವೂರು ನಿವಾಸಿ ಇಸ್ಮಾಯಿಲ್ (59) ಕೊಲೆಯಾದವರು. ಅವರ ಪತ್ನಿ ನೆಬಿಸಾ(40), ಆಕೆಯ ಪ್ರಿಯಕರ ಕುತ್ತಾರುಪದವಿನ ಜಮಾಲ್ ಅಹಮ್ಮದ್ (38), ಉಳ್ಳಾಲದ ಅಬ್ದುಲ್ ಮುನಾಫ್ ಆಲಿಯಾಸ್ ಮುನ್ನ (41), ಉಳ್ಳಾಲದ ಅಬ್ದುಲ್ ರೆಹಮಾನ್ (36) ಮತ್ತು ಬೋಳಿಯಾರ್ನ ಶಬೀರ್ (31) ಶಿಕ್ಷೆಗೊಳಗಾದವರು.
ಅನೈತಿಕ ಸಂಬಂಧ ಕಾರಣ
ಇಸ್ಮಾಯಿಲ್ ಅವರು ನೆಬಿಸಾಳನ್ನು ಎರಡನೇ ವಿವಾಹವಾಗಿದ್ದು ಅವರು ನಾಲ್ವರು ಮಕ್ಕಳನ್ನು ಹೊಂದಿದ್ದರು. ನೆಬಿಸಾ ಮತ್ತು ಜಮಾಲ್ನಿಗೆ ಅನೈತಿಕ ಸಂಬಂಧವಿತ್ತು. ಇದು ಇಸ್ಮಾಯಿಲ್ಗೆ ಗೊತ್ತಾಗಿ ಆಕ್ಷೇಪ ವ್ಯಕ್ತಪಡಿಸುತ್ತಿದ್ದರು. ಇದೇ ಕಾರಣಕ್ಕೆ ಆಗಾಗ್ಗೆ ಪತಿ -ಪತ್ನಿಯರ ನಡುವೆ ಗಲಾಟೆ ನಡೆಯುತ್ತಿತ್ತು. ಇದೇ ಹಿನ್ನೆಲೆಯಲ್ಲಿ ನೆಬಿಸಾ ಸುಪಾರಿ ನೀಡಿ ಪತಿಯನ್ನು ಕೊಲೆ ಮಾಡಿಸಿದ್ದಳು.
ಒಂದೆಡೆ ಸುಪಾರಿಯ ಹಣವನ್ನು ನೀಡುವುದಕ್ಕಾಗಿ ಚಿನ್ನವನ್ನು ಗಿರವಿ ಇಟ್ಟ ನೆಬಿಸಾ, ಇನ್ನೊಂದೆಡೆ ಪತಿ ಇಸ್ಮಾಯಿಲ್ ನಾಪತ್ತೆಯಾಗಿರುವ ಬಗ್ಗೆ ಕೊಣಾಜೆ ಠಾಣೆಗೆ ದೂರು ನೀಡಿದ್ದಳು.
ಪ್ರಕರಣದಲ್ಲಿ ಪ್ರಾಸಿಕ್ಯೂಶನ್ ಪರವಾಗಿ ಆರಂಭದಲ್ಲಿ ಸರಕಾರಿ ಅಭಿಯೋಜಕರಾದ ವಿ.ಶೇಖರ ಶೆಟ್ಟಿ ವಾದ ನಡೆಸಿದ್ದರು. ಅನಂತರ ಸರಕಾರಿ ಅಭಿಯೋಜಕರಾದ ಚೌಧರಿ ಮೋತಿಲಾಲ್ ಅವರು ವಾದ ಮಂಡಿಸಿದ್ದರು. ಸರಕಾರಿ ಅಭಿಯೋಜಕರಾದ ಜುಡಿತ್ ಎಂ.ಒ.ಕ್ರಾಸ್ತಾ ಮತ್ತು ಜ್ಯೋತಿ ಪಿ. ನಾಯಕ್ ಅವರು ಸಾಕ್ಷಿಗಳ ವಿಚಾರಣೆ ನಡೆಸಿದ್ದರು. ಕೊಣಾಜೆ ಠಾಣೆಯ ಇನ್ಸ್ಪೆಕ್ಟರ್ ಅಶೋಕ್ ಪಿ. ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…