Judge and gavel in courtroom
ಮಂಗಳೂರು: ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯೋರ್ವಳು ತನ್ನ ಪತಿಯನ್ನೇ ಕೊಲೆ ಮಾಡಿಸಿದ ಪ್ರಕರಣದಲ್ಲಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳವಾರ ತೀರ್ಪು ನೀಡಿದೆ.
ಘಟನೆ 2016ರಲ್ಲಿ ನಡೆದಿತ್ತು. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾವೂರು ನಿವಾಸಿ ಇಸ್ಮಾಯಿಲ್ (59) ಕೊಲೆಯಾದವರು. ಅವರ ಪತ್ನಿ ನೆಬಿಸಾ(40), ಆಕೆಯ ಪ್ರಿಯಕರ ಕುತ್ತಾರುಪದವಿನ ಜಮಾಲ್ ಅಹಮ್ಮದ್ (38), ಉಳ್ಳಾಲದ ಅಬ್ದುಲ್ ಮುನಾಫ್ ಆಲಿಯಾಸ್ ಮುನ್ನ (41), ಉಳ್ಳಾಲದ ಅಬ್ದುಲ್ ರೆಹಮಾನ್ (36) ಮತ್ತು ಬೋಳಿಯಾರ್ನ ಶಬೀರ್ (31) ಶಿಕ್ಷೆಗೊಳಗಾದವರು.
ಅನೈತಿಕ ಸಂಬಂಧ ಕಾರಣ
ಇಸ್ಮಾಯಿಲ್ ಅವರು ನೆಬಿಸಾಳನ್ನು ಎರಡನೇ ವಿವಾಹವಾಗಿದ್ದು ಅವರು ನಾಲ್ವರು ಮಕ್ಕಳನ್ನು ಹೊಂದಿದ್ದರು. ನೆಬಿಸಾ ಮತ್ತು ಜಮಾಲ್ನಿಗೆ ಅನೈತಿಕ ಸಂಬಂಧವಿತ್ತು. ಇದು ಇಸ್ಮಾಯಿಲ್ಗೆ ಗೊತ್ತಾಗಿ ಆಕ್ಷೇಪ ವ್ಯಕ್ತಪಡಿಸುತ್ತಿದ್ದರು. ಇದೇ ಕಾರಣಕ್ಕೆ ಆಗಾಗ್ಗೆ ಪತಿ -ಪತ್ನಿಯರ ನಡುವೆ ಗಲಾಟೆ ನಡೆಯುತ್ತಿತ್ತು. ಇದೇ ಹಿನ್ನೆಲೆಯಲ್ಲಿ ನೆಬಿಸಾ ಸುಪಾರಿ ನೀಡಿ ಪತಿಯನ್ನು ಕೊಲೆ ಮಾಡಿಸಿದ್ದಳು.
ಒಂದೆಡೆ ಸುಪಾರಿಯ ಹಣವನ್ನು ನೀಡುವುದಕ್ಕಾಗಿ ಚಿನ್ನವನ್ನು ಗಿರವಿ ಇಟ್ಟ ನೆಬಿಸಾ, ಇನ್ನೊಂದೆಡೆ ಪತಿ ಇಸ್ಮಾಯಿಲ್ ನಾಪತ್ತೆಯಾಗಿರುವ ಬಗ್ಗೆ ಕೊಣಾಜೆ ಠಾಣೆಗೆ ದೂರು ನೀಡಿದ್ದಳು.
ಪ್ರಕರಣದಲ್ಲಿ ಪ್ರಾಸಿಕ್ಯೂಶನ್ ಪರವಾಗಿ ಆರಂಭದಲ್ಲಿ ಸರಕಾರಿ ಅಭಿಯೋಜಕರಾದ ವಿ.ಶೇಖರ ಶೆಟ್ಟಿ ವಾದ ನಡೆಸಿದ್ದರು. ಅನಂತರ ಸರಕಾರಿ ಅಭಿಯೋಜಕರಾದ ಚೌಧರಿ ಮೋತಿಲಾಲ್ ಅವರು ವಾದ ಮಂಡಿಸಿದ್ದರು. ಸರಕಾರಿ ಅಭಿಯೋಜಕರಾದ ಜುಡಿತ್ ಎಂ.ಒ.ಕ್ರಾಸ್ತಾ ಮತ್ತು ಜ್ಯೋತಿ ಪಿ. ನಾಯಕ್ ಅವರು ಸಾಕ್ಷಿಗಳ ವಿಚಾರಣೆ ನಡೆಸಿದ್ದರು. ಕೊಣಾಜೆ ಠಾಣೆಯ ಇನ್ಸ್ಪೆಕ್ಟರ್ ಅಶೋಕ್ ಪಿ. ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…