Judge and gavel in courtroom
ಮಂಗಳೂರು: ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯೋರ್ವಳು ತನ್ನ ಪತಿಯನ್ನೇ ಕೊಲೆ ಮಾಡಿಸಿದ ಪ್ರಕರಣದಲ್ಲಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳವಾರ ತೀರ್ಪು ನೀಡಿದೆ.
ಘಟನೆ 2016ರಲ್ಲಿ ನಡೆದಿತ್ತು. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾವೂರು ನಿವಾಸಿ ಇಸ್ಮಾಯಿಲ್ (59) ಕೊಲೆಯಾದವರು. ಅವರ ಪತ್ನಿ ನೆಬಿಸಾ(40), ಆಕೆಯ ಪ್ರಿಯಕರ ಕುತ್ತಾರುಪದವಿನ ಜಮಾಲ್ ಅಹಮ್ಮದ್ (38), ಉಳ್ಳಾಲದ ಅಬ್ದುಲ್ ಮುನಾಫ್ ಆಲಿಯಾಸ್ ಮುನ್ನ (41), ಉಳ್ಳಾಲದ ಅಬ್ದುಲ್ ರೆಹಮಾನ್ (36) ಮತ್ತು ಬೋಳಿಯಾರ್ನ ಶಬೀರ್ (31) ಶಿಕ್ಷೆಗೊಳಗಾದವರು.
ಅನೈತಿಕ ಸಂಬಂಧ ಕಾರಣ
ಇಸ್ಮಾಯಿಲ್ ಅವರು ನೆಬಿಸಾಳನ್ನು ಎರಡನೇ ವಿವಾಹವಾಗಿದ್ದು ಅವರು ನಾಲ್ವರು ಮಕ್ಕಳನ್ನು ಹೊಂದಿದ್ದರು. ನೆಬಿಸಾ ಮತ್ತು ಜಮಾಲ್ನಿಗೆ ಅನೈತಿಕ ಸಂಬಂಧವಿತ್ತು. ಇದು ಇಸ್ಮಾಯಿಲ್ಗೆ ಗೊತ್ತಾಗಿ ಆಕ್ಷೇಪ ವ್ಯಕ್ತಪಡಿಸುತ್ತಿದ್ದರು. ಇದೇ ಕಾರಣಕ್ಕೆ ಆಗಾಗ್ಗೆ ಪತಿ -ಪತ್ನಿಯರ ನಡುವೆ ಗಲಾಟೆ ನಡೆಯುತ್ತಿತ್ತು. ಇದೇ ಹಿನ್ನೆಲೆಯಲ್ಲಿ ನೆಬಿಸಾ ಸುಪಾರಿ ನೀಡಿ ಪತಿಯನ್ನು ಕೊಲೆ ಮಾಡಿಸಿದ್ದಳು.
ಒಂದೆಡೆ ಸುಪಾರಿಯ ಹಣವನ್ನು ನೀಡುವುದಕ್ಕಾಗಿ ಚಿನ್ನವನ್ನು ಗಿರವಿ ಇಟ್ಟ ನೆಬಿಸಾ, ಇನ್ನೊಂದೆಡೆ ಪತಿ ಇಸ್ಮಾಯಿಲ್ ನಾಪತ್ತೆಯಾಗಿರುವ ಬಗ್ಗೆ ಕೊಣಾಜೆ ಠಾಣೆಗೆ ದೂರು ನೀಡಿದ್ದಳು.
ಪ್ರಕರಣದಲ್ಲಿ ಪ್ರಾಸಿಕ್ಯೂಶನ್ ಪರವಾಗಿ ಆರಂಭದಲ್ಲಿ ಸರಕಾರಿ ಅಭಿಯೋಜಕರಾದ ವಿ.ಶೇಖರ ಶೆಟ್ಟಿ ವಾದ ನಡೆಸಿದ್ದರು. ಅನಂತರ ಸರಕಾರಿ ಅಭಿಯೋಜಕರಾದ ಚೌಧರಿ ಮೋತಿಲಾಲ್ ಅವರು ವಾದ ಮಂಡಿಸಿದ್ದರು. ಸರಕಾರಿ ಅಭಿಯೋಜಕರಾದ ಜುಡಿತ್ ಎಂ.ಒ.ಕ್ರಾಸ್ತಾ ಮತ್ತು ಜ್ಯೋತಿ ಪಿ. ನಾಯಕ್ ಅವರು ಸಾಕ್ಷಿಗಳ ವಿಚಾರಣೆ ನಡೆಸಿದ್ದರು. ಕೊಣಾಜೆ ಠಾಣೆಯ ಇನ್ಸ್ಪೆಕ್ಟರ್ ಅಶೋಕ್ ಪಿ. ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…