ಮಂಗಳೂರು : ಹಿದಾಯ ಫೌಂಡೇಶನ್ ಜುಬೈಲ್ ಘಟಕದ ವತಿಯಂದ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಹೊರಟಿದ್ದ ಅಕ್ಷರ ಸಂತ, ಪದ್ಮಶ್ರೀ ಹರೇಕಳ ಹಾಜಬ್ಬರನ್ನು ವಿಮಾನದ ಸಿಬ್ಬಂದಿ ಅಭಿನಂದಿಸಿ ಗೌರವಿಸಿದರು.
ಹರೇಕಳ ಹಾಜಬ್ಬ ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಮಂಗಳೂರಿನಿಂದ ದಮ್ಮಾಮ್ ಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರನ್ನು ಗುರುತಿಸಿದ ಏರ್ ಇಂಡಿಯ ಎಕ್ಸ್ ಪ್ರೆಸ್ ನ ಸಿಬ್ಬಂದಿ ವಿಮಾನದ ಕ್ಯಾಪ್ಟನ್ ನ ಗಮನಕ್ಕೆ ತಂದರು. ಕ್ಯಾಪ್ಟನ್ ವಿಮಾನದಲ್ಲಿರುವ ಪ್ರಯಾಣಿಕರಿಗೆ ಹಾಜಬ್ಬರನ್ನು ಪರಿಚಯಿಸುತ್ತಾ, “ಶಿಕ್ಷಣ ರಂಗದಲ್ಲಿ ಅಪೂರ್ವ ಸೇವೆ ಸಲ್ಲಿಸಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ನಮ್ಮ ವಿಮಾನದಲ್ಲಿ ಪ್ರಯಾಣಿಸುತ್ತಿರುವುದು ನಮಗೆಲ್ಲ ತುಂಬಾ ಸಂತೋಷ ತಂದಿದೆ. ಅವರಿಗೆ ಹೃದಯ ತುಂಬಿದ ಅಭಿನಂದನೆಗಳು” ಎಂದರು.
ಪ್ರೇರಣಾ ಭಾಷಣಗಾರ ರಫೀಕ್ ಮಾಸ್ಟರ್ ಮಂಗಳೂರು ಹಾಗೂ ಉದ್ಯಮಿ ಫಾರೂಕ್ ಕನ್ಯಾನ ಪೋರ್ಟ್ ವೇ ಈ ವೇಳೆ ಹಾಜಬ್ಬರ ಜೊತೆಗಿದ್ದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…