Featured

ಮಂಗಳೂರು ಪಬ್‌ ದಾಳಿ : ಬಜರಂಗದಳದವರಿಗೆ ಪೊಲೀಸ್‌ ಗಿರಿ ಮಾಡುವುದಕ್ಕೆ ಅಧಿಕಾರ ಕೊಟ್ಟವರ್ಯಾರು ? : ಅಕ್ಷಿತ್‌ ಸುವರ್ಣ – Vishwanews24

ಸಮಾಜಘಾತುಕ ಸಂಘಟನೆಗಳನ್ನು ನಿಷೇಧಿಸಬೇಕು..

ಅವರನ್ನು ಕೇಳಲು ಹೆತ್ತವರಿಲ್ಲವೇ, ಪೋಷಕರಿಲ್ಲವೇ ಅಥವಾ ಪೊಲೀಸ್‌ ಇಲಾಖೆ ಇಲ್ಲವೇ..

ಎಲೆಕ್ಷನ್‌ ಹತ್ತಿರ ಬರುವಾಗವೇ ಇಂತಹ ಕೃತ್ಯಗಳು ಯಾಕೆ ನಡೆಯುತ್ತಿವೆ..

ಇಂತಹ ಕೃತ್ಯಗಳಿಂದ ಮಂಗಳೂರಿಗೆ ಮಕ್ಕಳನ್ನು ಕಳುಹಿಸಲು ಹೆತ್ತವರಿಗೆ ಹೆದರಿಕೆಯಾಗುತ್ತಿದೆ..

ಪಬ್‌ ದಾಳಿಗೆ ಬಂದವರ ಮೇಲೆ ಎಷ್ಟು ಕೇಸ್‌ ಇದೆ ಎಂಬುವುದನ್ನು ತನಿಖೆ ನಡೆಸಬೇಕು..

ವಿದ್ಯಾರ್ಥಿ ಸಂಘಟನೆಗಳನ್ನು ಸೇರಿಸಿ ದೊಡ್ಡ ಮಟ್ಟದ ಪ್ರತಿಭಟನೆ ಮಾಡುತ್ತೇವೆ..

ಜೆಡಿಎಸ್‌ ದಕ್ಷಿಣ ಕನ್ನಡ ಯುವ ಜಿಲ್ಲಾಧ್ಯಕ್ಷ ಅಕ್ಷಿತ್‌ ಸುವರ್ಣ

ಮಂಗಳೂರು: ಬಜರಂಗದಳದವರಿಗೆ ಪಬ್‌ ಮೇಲೆ ದಾಳಿ ನಡೆಸುವುದಕ್ಕೆ, ಪೊಲೀಸ್‌ ಗಿರಿ ಮಾಡ್ಲಿಕ್ಕೆ ಅಧಿಕಾರ ಕೊಟ್ಟವರ್ಯಾರು?. ಇಂತಹ ಸಮಾಜಘಾತುಕ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಜೆಡಿಎಸ್‌ ದಕ್ಷಿಣ ಕನ್ನಡ ಯುವ ಜಿಲ್ಲಾಧ್ಯಕ್ಷ ಅಕ್ಷಿತ್‌ ಸುವರ್ಣ ಒತ್ತಾಯಿಸಿದ್ದಾರೆ.

ನಿನ್ನೆ ಬಲ್ಮಠದಲ್ಲಿರುವ ಪಬ್‌ ದಾಳಿಗೆ ಸಂಬಂಧಿಸಿದಂತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಿನ್ನೆ ನಡೆದ ಪಬ್‌ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇವೆ. 2009 ರಲ್ಲಿ ಬಿಜೆಪಿ ಸರ್ಕಾರವಿದ್ದಾಗ ಇದೇ ಪಬ್‌ಗೆ ದಾಳಿ ನಡೆದಿತ್ತು.

ಇದೀಗ ಮತ್ತೆ ಇಂದು ಬಿಜೆಪಿ ಸರ್ಕಾರದ ಅವಧಿಯಲ್ಲೇ ದಾಳಿ ನಡೆದಿದೆ. ಬಜರಂಗದಳದವರಿಗೆ ಪೊಲೀಸ್‌ ಗಿರಿ ಮಾಡುವುದಕ್ಕೆ ಅಧಿಕಾರ ಕೊಟ್ಟವರ್ಯಾರು.

ಅವರನ್ನು ಕೇಳಲು ಹೆತ್ತವರಿಲ್ಲವೇ, ಪೋಷಕರಿಲ್ಲವೇ ಅಥವಾ ಪೊಲೀಸ್‌ ಇಲಾಖೆ ಇಲ್ಲವೇ ಎಂದು ಪ್ರಶ್ನಿಸಿದ ಅವರು ಅಲ್ಲಿ ಅನೈತಿಕ ಚಟುವಟಿಕೆ ಅಥವಾ ಕಾನೂನು ಉಲ್ಲಂಘನೆ ನಡೆಯುತ್ತಿದ್ದರೆ ಪೊಲೀಸ್‌ ಇಲಾಖೆಗೆ ಮಾಹಿತಿ ನೀಡಿ.

ಇದನ್ನೂ ಓದಿ : ಚೆನ್ನೈ: ಕಬಡ್ಡಿ ಆಟವಾಡುತ್ತಿರುವ ವೇಳೆ ಹೃದಯಾಘಾತ 

ಮಂಗಳೂರಿನಲ್ಲಿ ಬೇರೆ ಪಬ್‌ಗಳೇ ಇಲ್ಲವೇ? ಎಲೆಕ್ಷನ್‌ ಹತ್ತಿರ ಬರುವಾಗವೇ ಇಂತಹ ಕೃತ್ಯಗಳು ಯಾಕೆ ನಡೆಯುತ್ತಿವೆ ಎಂದು ಪ್ರಶ್ನಿಸಿದರು.

ಇಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಇವರನ್ನು ಯಾರು ಕೇಳುವರ್ಯಾರು ಇಲ್ಲ ಅಂತ ಎನಿಸಿದ್ದಾರೆಯೇ? ಇಂತಹ ಕೃತ್ಯಗಳಿಂದ ಮಂಗಳೂರಿಗೆ ಮಕ್ಕಳನ್ನು ಕಳುಹಿಸಲು ಹೆತ್ತವರಿಗೆ ಹೆದರಿಕೆಯಾಗುತ್ತಿದೆ.

ನಿನ್ನೆ ಪಬ್‌ ದಾಳಿಗೆ ಬಂದವರ ಹಿನ್ನೆಲೆ, ಯಾರು ಕಳುಹಿಸಿದ್ದಾರೆ ಹಾಗೂ ಬಂದವರ ಮೇಲೆ ಎಷ್ಟು ಕೇಸ್‌ ಇದೆ ಎಂಬುವುದನ್ನು ತನಿಖೆ ನಡೆಸಬೇಕು.

ಇಲ್ಲದಿದ್ದರೆ ವಿದ್ಯಾರ್ಥಿ ಸಂಘಟನೆಗಳನ್ನು ಸೇರಿಸಿ ದೊಡ್ಡ ಮಟ್ಟದ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ : ಉಡುಪಿ : ಪಿಎಸ್​ಐ ಹಗರಣ – ನನಗೆ ಮೊದಲೇ ಗೊತ್ತಿತ್ತು: ಮಾಜಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ – Vishwanews24 

 

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

8 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

9 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

9 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

9 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago