ಮಂಗಳೂರು: ಪರವಾನಗಿ ಇಲ್ಲದೆ ಕಾರ್ಯಾಚರಣೆ ನಡೆಸುತ್ತಿದ್ದ ನಿಡ್ಡೋಡಿಯ ಕಲ್ಲುಕೋರೆಗಳಿಗೆ ಲೋಕಾಯುಕ್ತ ದಾಳಿ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಪರವಾನಗಿ ಇಲ್ಲದೆ ಕಾರ್ಯಾಚರಣೆ ನಡೆಸುತ್ತಿದ್ದ ನಿಡ್ಡೋಡಿಯ ಕಲ್ಲುಕೋರೆಗಳಿಗೆ ಲೋಕಾಯುಕ್ತ ದಾಳಿ

ನಿಡ್ಡೋಡಿಯ ಕಲ್ಲುಕೋರೆಗಳಿಗೆ ಉಪಲೋಕಾಯುಕ್ತ ಜ.ವೀರಪ್ಪ ದಾಳಿ ನಡೆಸಿದ್ದಾರೆ. ಕಲ್ಲು ಕೋರೆಗಳನ್ನು ಲೈಸೆನ್ಸ್ ಇಲ್ಲದೆ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಪಟ್ಟಾ‌ ಜಮೀನಿನಲ್ಲಿ ಅವಧಿ ಮುಗಿದರೂ ಕಾರ್ಯಾಚರಣೆ ಮಾಡುತ್ತಿದ್ದರು.

ಕಡಬ: ಯುವಕ ನಾಪತ್ತೆ ಪ್ರಕರಣಕ್ಕೆ ತಿರುವು: ಸ್ನೇಹಿತನೇ ಕೊಲೆಗೈದು ಸುಟ್ಟು ಹಾಕಲು ಯತ್ನಿಸಿದ ಅಮಾನವೀಯ ಘಟನೆ – vishwanews24

ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಜೆಸಿಬಿ ಜೊತೆ ಕಾರ್ಮಿಕರು ಓಡಿ ಹೋಗಿದ್ದಾರೆ. ಪ್ರಕರಣ ದಾಖಲಿಸಿ ಯಂತ್ರೋಪಕರಣಗಳ ವಶ ಪಡೆಯಲು ಮೂಡುಬಿದಿರೆ ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ.

ಎರಡು ಕಲ್ಲಿನಕೋರೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ವೀರಪ್ಪ, ಕರ್ತವ್ಯ ಲೋಪ ಎಸಗಿದ ಗಣಿ ಇಲಾಖೆ ಅಧಿಕಾರಿಗಳ‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಡಿಸಿ ಸಂತೋಷ್, ಲೋಕಾಯುಕ್ತ ಎಸ್‌ಪಿ ನಟರಾಜ್, ಕಂದಾಯ ಅಧಿಕಾರಿಗಳು, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಜತೆಗಿದ್ದರು.

ಬೆಳ್ತಂಗಡಿ : ನೇತ್ರಾವತಿ ನದಿಯಲ್ಲಿ ಮುಳುಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

Leave a Reply