ಮಂಗಳೂರು : ಪಾರ್ಟ್ ಟೈಮ್ ಜಾಬ್ ಆಯ್ಕೆಯಾಗಿರುವುದಾಗಿ ಅಪರಿಚಿತನಿಂದ ಬಂದ ಸಂದೇಶಕ್ಕೆ ಸ್ಪಂದಿಸಿದ ವ್ಯಕ್ತಿಯೊಬ್ಬರು ತನ್ನ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ 5,31,200 ರೂ. ಕಳೆದುಕೊಂಡು ವಂಚನೆಗೊಳಗಾದ ಬಗ್ಗೆ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರರ ಮೊಬೈಲ್ ಗೆ ನ.26ರಂದು ಅಪರಿಚಿತ ವ್ಯಕ್ತಿಯಿಂದ ಸಂದೇಶವೊಂದು ಬಂದಿತ್ತು. ಪಾರ್ಟ್ ಟೈಮ್ ಜಾಬ್ಗೆ ತಾವು ಆಯ್ಕೆಯಾಗಿರುವುದಾಗಿ ಸಂದೇಶ ಕಳುಹಿಸಿದ್ದ ಅಪರಿಚಿತ ವ್ಯಕ್ತಿಯು ಅದರಲ್ಲಿ ಒಂದು ಲಿಂಕ್ ಕಳುಹಿಸಿದ್ದ. ಲಿಂಕ್ ಕ್ಲಿಕ್ ಮಾಡಿ ವಾಟ್ಸ್ಆ್ಯಪ್ನಲ್ಲಿ ಅಪರಿಚಿತ ವ್ಯಕ್ತಿಯ ಜತೆ ಆನ್ಲೈನ್ ಜಾಬ್ ವಿಷಯವಾಗಿ ಚಾಟ್ ಮಾಡಿದ್ದಾರೆ. ಜಾಬ್ನ ಸಂಪೂರ್ಣ ಮಾಹಿತಿ ತಿಳಿಯಲು ಅಪರಿಚಿತ ಟೆಲಿಗ್ರಾಂ ಲಿಂಕ್ ಕಳುಹಿಸಿದ್ದ. ಅದನ್ನು ಕ್ಲಿಕ್ ಮಾಡಿದಾಗ ವೆಬ್ಸೈಟ್ವೊಂದು ತೆರೆದುಕೊಂಡಿದೆ. ಅದರಲ್ಲಿ ದೂರುದಾರರು ಖಾತೆ ತೆರೆದು ಯೂಸರ್ ಐಡಿ ಮತ್ತು ಪಾಸ್ವರ್ಡ್ ಕ್ರಿಯೇಟ್ ಮಾಡಿದ್ದಾರೆ.
ಆನ್ಲೈನ್ನಲ್ಲಿ ವಸ್ತು ಆರ್ಡರ್ ಮಾಡಿ ಕಮಿಷನ್ ಪಡೆಯಬಹುದು ಎಂದು ಆರೋಪಿ ತಿಳಿಸಿದ್ದಾನೆ. ಡಿ.5ರಂದು ಆಕ್ಸಿಸ್ ಬ್ಯಾಂಕ್ ಖಾತೆಯಿಂದ 200 ರೂ. ಹೂಡಿಕೆ ಮಾಡಿದ್ದಾರೆ. ಡಿ.6ರಂದು 380 ರೂ. ಜಮೆಯಾಗಿದೆ. ನಂತರದಲ್ಲಿ ಹೆಚ್ಚಿನ ಹಣ ತೊಡಗಿಸಿ ಲಾಭ ಗಳಿಸುವ ಉದ್ದೇಶದಿಂದ ದೂರುದಾರರು ಆಕ್ಸಿಸ್ ಬ್ಯಾಂಕ್ ಖಾತೆಯಿಂದ ಅಪರಿಚಿತ ವ್ಯಕ್ತಿ ಕಳುಹಿಸಿದ ಕ್ಯೂಆರ್ ಕೋಡ್ ಮೂಲಕ 86 ಸಾವಿರ ರೂ., ಕೆನರಾ ಬ್ಯಾಂಕ್ ಖಾತೆಯಿಂದ ಯೆಸ್ ಬ್ಯಾಂಕ್ ಖಾತೆಗೆ 50 ಸಾವಿರ ರೂ., ಡಿ. 7ರಂದು ಅಪರಿಚಿತ ವ್ಯಕ್ತಿ ಕಳುಹಿಸಿದ ಕ್ಯೂಆರ್ ಕೋಡ್ಗೆ 30 ಸಾವಿರ ರೂ., ಯೆಸ್ ಬ್ಯಾಂಕ್ ಖಾತೆಗೆ 1.50 ಲಕ್ಷ ರೂ. ಹಾಗು ಕ್ಯೂಆರ್ ಕೋಡ್ಗೆ 20 ಸಾವಿರ ರೂ., ಐಸಿಐಸಿಐ ಬ್ಯಾಂಕ್ ಖಾತೆಗೆ 1.95 ಲಕ್ಷ ರೂ. ವರ್ಗಾಯಿಸಿದ್ದಾರೆ.
ಅಪರಿಚಿತ ವ್ಯಕ್ತಿ ತಿಳಿಸಿದ ಯೆಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಮತ್ತು ಕ್ಯೂಆರ್ ಕೋಡ್ ಸ್ಕಾನ್ ಮೂಲಕ ಹಂತ ಹಂತವಾಗಿ 5.31 ಲಕ್ಷ ರೂ. ವರ್ಗಾಯಿಸಿ ವಂಚನೆಗೊಳಗಾಗಿದ್ದಾರೆ. ಈ ಬಗ್ಗೆ ಸೆನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…