ಮಂಗಳೂರು : ಪಾರ್ಟ್ ಟೈಮ್ ಜಾಬ್ ಆಯ್ಕೆಯಾಗಿರುವುದಾಗಿ ಅಪರಿಚಿತನಿಂದ ಬಂದ ಸಂದೇಶಕ್ಕೆ ಸ್ಪಂದಿಸಿದ ವ್ಯಕ್ತಿಯೊಬ್ಬರು ತನ್ನ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ 5,31,200 ರೂ. ಕಳೆದುಕೊಂಡು ವಂಚನೆಗೊಳಗಾದ ಬಗ್ಗೆ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರರ ಮೊಬೈಲ್ ಗೆ ನ.26ರಂದು ಅಪರಿಚಿತ ವ್ಯಕ್ತಿಯಿಂದ ಸಂದೇಶವೊಂದು ಬಂದಿತ್ತು. ಪಾರ್ಟ್ ಟೈಮ್ ಜಾಬ್ಗೆ ತಾವು ಆಯ್ಕೆಯಾಗಿರುವುದಾಗಿ ಸಂದೇಶ ಕಳುಹಿಸಿದ್ದ ಅಪರಿಚಿತ ವ್ಯಕ್ತಿಯು ಅದರಲ್ಲಿ ಒಂದು ಲಿಂಕ್ ಕಳುಹಿಸಿದ್ದ. ಲಿಂಕ್ ಕ್ಲಿಕ್ ಮಾಡಿ ವಾಟ್ಸ್ಆ್ಯಪ್ನಲ್ಲಿ ಅಪರಿಚಿತ ವ್ಯಕ್ತಿಯ ಜತೆ ಆನ್ಲೈನ್ ಜಾಬ್ ವಿಷಯವಾಗಿ ಚಾಟ್ ಮಾಡಿದ್ದಾರೆ. ಜಾಬ್ನ ಸಂಪೂರ್ಣ ಮಾಹಿತಿ ತಿಳಿಯಲು ಅಪರಿಚಿತ ಟೆಲಿಗ್ರಾಂ ಲಿಂಕ್ ಕಳುಹಿಸಿದ್ದ. ಅದನ್ನು ಕ್ಲಿಕ್ ಮಾಡಿದಾಗ ವೆಬ್ಸೈಟ್ವೊಂದು ತೆರೆದುಕೊಂಡಿದೆ. ಅದರಲ್ಲಿ ದೂರುದಾರರು ಖಾತೆ ತೆರೆದು ಯೂಸರ್ ಐಡಿ ಮತ್ತು ಪಾಸ್ವರ್ಡ್ ಕ್ರಿಯೇಟ್ ಮಾಡಿದ್ದಾರೆ.
ಆನ್ಲೈನ್ನಲ್ಲಿ ವಸ್ತು ಆರ್ಡರ್ ಮಾಡಿ ಕಮಿಷನ್ ಪಡೆಯಬಹುದು ಎಂದು ಆರೋಪಿ ತಿಳಿಸಿದ್ದಾನೆ. ಡಿ.5ರಂದು ಆಕ್ಸಿಸ್ ಬ್ಯಾಂಕ್ ಖಾತೆಯಿಂದ 200 ರೂ. ಹೂಡಿಕೆ ಮಾಡಿದ್ದಾರೆ. ಡಿ.6ರಂದು 380 ರೂ. ಜಮೆಯಾಗಿದೆ. ನಂತರದಲ್ಲಿ ಹೆಚ್ಚಿನ ಹಣ ತೊಡಗಿಸಿ ಲಾಭ ಗಳಿಸುವ ಉದ್ದೇಶದಿಂದ ದೂರುದಾರರು ಆಕ್ಸಿಸ್ ಬ್ಯಾಂಕ್ ಖಾತೆಯಿಂದ ಅಪರಿಚಿತ ವ್ಯಕ್ತಿ ಕಳುಹಿಸಿದ ಕ್ಯೂಆರ್ ಕೋಡ್ ಮೂಲಕ 86 ಸಾವಿರ ರೂ., ಕೆನರಾ ಬ್ಯಾಂಕ್ ಖಾತೆಯಿಂದ ಯೆಸ್ ಬ್ಯಾಂಕ್ ಖಾತೆಗೆ 50 ಸಾವಿರ ರೂ., ಡಿ. 7ರಂದು ಅಪರಿಚಿತ ವ್ಯಕ್ತಿ ಕಳುಹಿಸಿದ ಕ್ಯೂಆರ್ ಕೋಡ್ಗೆ 30 ಸಾವಿರ ರೂ., ಯೆಸ್ ಬ್ಯಾಂಕ್ ಖಾತೆಗೆ 1.50 ಲಕ್ಷ ರೂ. ಹಾಗು ಕ್ಯೂಆರ್ ಕೋಡ್ಗೆ 20 ಸಾವಿರ ರೂ., ಐಸಿಐಸಿಐ ಬ್ಯಾಂಕ್ ಖಾತೆಗೆ 1.95 ಲಕ್ಷ ರೂ. ವರ್ಗಾಯಿಸಿದ್ದಾರೆ.
ಅಪರಿಚಿತ ವ್ಯಕ್ತಿ ತಿಳಿಸಿದ ಯೆಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಮತ್ತು ಕ್ಯೂಆರ್ ಕೋಡ್ ಸ್ಕಾನ್ ಮೂಲಕ ಹಂತ ಹಂತವಾಗಿ 5.31 ಲಕ್ಷ ರೂ. ವರ್ಗಾಯಿಸಿ ವಂಚನೆಗೊಳಗಾಗಿದ್ದಾರೆ. ಈ ಬಗ್ಗೆ ಸೆನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…