Featured

ಮಂಗಳೂರು: ಪಾರ್ಟ್ ಟೈಮ್ ಜಾಬ್‌ ಆಮಿಷ : ಲಿಂಕ್ ಕಳುಹಿಸಿ  5.31 ಲಕ್ಷ ರೂ. ವಂಚನೆ – Vishwanews24

ಮಂಗಳೂರು: ಪಾರ್ಟ್ ಟೈಮ್ ಜಾಬ್‌ ಆಮಿಷ : ಲಿಂಕ್ ಕಳುಹಿಸಿ  5.31 ಲಕ್ಷ ರೂ. ವಂಚನೆ

ಮಂಗಳೂರು : ಪಾರ್ಟ್ ಟೈಮ್ ಜಾಬ್‌ ಆಯ್ಕೆಯಾಗಿರುವುದಾಗಿ ಅಪರಿಚಿತನಿಂದ ಬಂದ ಸಂದೇಶಕ್ಕೆ ಸ್ಪಂದಿಸಿದ ವ್ಯಕ್ತಿಯೊಬ್ಬರು ತನ್ನ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ 5,31,200 ರೂ. ಕಳೆದುಕೊಂಡು ವಂಚನೆಗೊಳಗಾದ ಬಗ್ಗೆ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರರ ಮೊಬೈಲ್ ಗೆ ನ.26ರಂದು ಅಪರಿಚಿತ ವ್ಯಕ್ತಿಯಿಂದ ಸಂದೇಶವೊಂದು ಬಂದಿತ್ತು. ಪಾರ್ಟ್ ಟೈಮ್ ಜಾಬ್‌ಗೆ ತಾವು ಆಯ್ಕೆಯಾಗಿರುವುದಾಗಿ ಸಂದೇಶ ಕಳುಹಿಸಿದ್ದ ಅಪರಿಚಿತ ವ್ಯಕ್ತಿಯು ಅದರಲ್ಲಿ ಒಂದು ಲಿಂಕ್ ಕಳುಹಿಸಿದ್ದ. ಲಿಂಕ್ ಕ್ಲಿಕ್ ಮಾಡಿ ವಾಟ್ಸ್‌ಆ್ಯಪ್‌ನಲ್ಲಿ ಅಪರಿಚಿತ ವ್ಯಕ್ತಿಯ ಜತೆ ಆನ್‌ಲೈನ್ ಜಾಬ್ ವಿಷಯವಾಗಿ ಚಾಟ್ ಮಾಡಿದ್ದಾರೆ. ಜಾಬ್‌ನ ಸಂಪೂರ್ಣ ಮಾಹಿತಿ ತಿಳಿಯಲು ಅಪರಿಚಿತ ಟೆಲಿಗ್ರಾಂ ಲಿಂಕ್ ಕಳುಹಿಸಿದ್ದ. ಅದನ್ನು ಕ್ಲಿಕ್ ಮಾಡಿದಾಗ ವೆಬ್‌ಸೈಟ್‌ವೊಂದು ತೆರೆದುಕೊಂಡಿದೆ. ಅದರಲ್ಲಿ ದೂರುದಾರರು ಖಾತೆ ತೆರೆದು ಯೂಸರ್ ಐಡಿ ಮತ್ತು ಪಾಸ್‌ವರ್ಡ್ ಕ್ರಿಯೇಟ್ ಮಾಡಿದ್ದಾರೆ.

ಆನ್‌ಲೈನ್‌ನಲ್ಲಿ ವಸ್ತು ಆರ್ಡರ್ ಮಾಡಿ ಕಮಿಷನ್ ಪಡೆಯಬಹುದು ಎಂದು ಆರೋಪಿ ತಿಳಿಸಿದ್ದಾನೆ. ಡಿ.5ರಂದು ಆಕ್ಸಿಸ್ ಬ್ಯಾಂಕ್ ಖಾತೆಯಿಂದ 200 ರೂ. ಹೂಡಿಕೆ ಮಾಡಿದ್ದಾರೆ. ಡಿ.6ರಂದು 380 ರೂ. ಜಮೆಯಾಗಿದೆ. ನಂತರದಲ್ಲಿ ಹೆಚ್ಚಿನ ಹಣ ತೊಡಗಿಸಿ ಲಾಭ ಗಳಿಸುವ ಉದ್ದೇಶದಿಂದ ದೂರುದಾರರು ಆಕ್ಸಿಸ್ ಬ್ಯಾಂಕ್ ಖಾತೆಯಿಂದ ಅಪರಿಚಿತ ವ್ಯಕ್ತಿ ಕಳುಹಿಸಿದ ಕ್ಯೂಆರ್ ಕೋಡ್ ಮೂಲಕ 86 ಸಾವಿರ ರೂ., ಕೆನರಾ ಬ್ಯಾಂಕ್ ಖಾತೆಯಿಂದ ಯೆಸ್ ಬ್ಯಾಂಕ್ ಖಾತೆಗೆ 50 ಸಾವಿರ ರೂ., ಡಿ. 7ರಂದು ಅಪರಿಚಿತ ವ್ಯಕ್ತಿ ಕಳುಹಿಸಿದ ಕ್ಯೂಆರ್ ಕೋಡ್‌ಗೆ 30 ಸಾವಿರ ರೂ., ಯೆಸ್ ಬ್ಯಾಂಕ್ ಖಾತೆಗೆ 1.50 ಲಕ್ಷ ರೂ. ಹಾಗು ಕ್ಯೂಆರ್ ಕೋಡ್‌ಗೆ 20 ಸಾವಿರ ರೂ., ಐಸಿಐಸಿಐ ಬ್ಯಾಂಕ್ ಖಾತೆಗೆ 1.95 ಲಕ್ಷ ರೂ. ವರ್ಗಾಯಿಸಿದ್ದಾರೆ.

ಅಪರಿಚಿತ ವ್ಯಕ್ತಿ ತಿಳಿಸಿದ ಯೆಸ್ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಮತ್ತು ಕ್ಯೂಆರ್ ಕೋಡ್ ಸ್ಕಾನ್ ಮೂಲಕ ಹಂತ ಹಂತವಾಗಿ 5.31 ಲಕ್ಷ ರೂ. ವರ್ಗಾಯಿಸಿ ವಂಚನೆಗೊಳಗಾಗಿದ್ದಾರೆ. ಈ ಬಗ್ಗೆ ಸೆನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ನಾಳೆ SSLC ಫಲಿತಾಂಶ  ಪ್ರಕಟ – vishwanews24

ನಾಳೆ SSLC ಫಲಿತಾಂಶ  ಪ್ರಕಟ ಬೆಂಗಳೂರು: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ  ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…

7 hours ago

ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್‌ ಢಿಕ್ಕಿ ; ಬಾಲಕಿ ಸಾವು -vishwanews24

ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್‌ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್‌ ರಸ್ತೆಯಿಂದ ರಾಷ್ಟ್ರೀಯ…

15 hours ago

ತಾಂತ್ರಿಕ ದೋಷ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ – vishwanews24

ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…

3 days ago

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ – vishwanews24

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…

3 days ago

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ – vishwanews24

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…

3 days ago

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ – vishwanews24

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…

3 days ago