ಮಂಗಳೂರು :ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಪಿಜಿಗಳಿಗೆ ಸಂಬಂಧಿಸಿದ ನಿಯಮಗಳನ್ನು ಬಿಗಿಗೊಳಿಸಲು ಪೊಲೀಸರು ಮುಂದಾಗಿದ್ದು, ಶೀಘ್ರದಲ್ಲಿ ಸಮಗ್ರ ನಿಯಮಾವಳಿ ರೂಪುಗೊಳ್ಳುವ ಸಾಧ್ಯತೆ ಇದೆ.
ಪಿಜಿ ಆರಂಭಿಸಲು ಸ್ಥಳೀಯಾಡಳಿತ ಸಂಸ್ಥೆಗಳ ಪರವಾನಿಗೆ ಹಾಗೂ ಪೊಲೀಸ್ ಆಯುಕ್ತರ ಕಚೇರಿಯಿಂದಲೂ ನಿರಾಕ್ಷೇಪಣ ಪತ್ರ (ಎನ್ಒಸಿ) ಪಡೆಯುವುದು ಮತ್ತು ಪಿಜಿ ನಿವಾಸಿಗಳಿಗೆ ಪೊಲೀಸ್ ದೃಢೀಕರಣ ಪ್ರಮಾಣಪತ್ರ (ಪಿಸಿಸಿ)ವನ್ನು ಕಡ್ಡಾಯ ಮಾಡಲಾಗುತ್ತಿದೆ.
ಜತೆಗೆ ಸ್ಥಳೀಯ ಆಗುಹೋಗುಗಳ ಮೇಲೆ ಸಾರ್ವಜನಿಕರು ನಿಗಾ ಇಡುವಂತಹ “ನೇಬರ್ಹುಡ್ ವಾಚ್’ ಪರಿಕಲ್ಪನೆಯನ್ನೂ ಜಾರಿಗೊಳಿಸಲು ಪೊಲೀಸರು ಮುಂದಾಗಿದ್ದಾರೆ.
ಮಂಗಳೂರಿನಲ್ಲಿ ನ.19ರಂದು ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮಹಮ್ಮದ್ ಶಾರೀಕ್ ಮೈಸೂರಿನಲ್ಲಿ ನಕಲಿ ಗುರುತು ಚೀಟಿ ನೀಡಿ ಬಾಡಿಗೆಗೆ ಮನೆ ಪಡೆದುಕೊಂಡಿದ್ದ. ಅನಂತರ ಮೈಸೂರಿನಲ್ಲಿ ಬಾಡಿಗೆ ಮನೆ ಪಡೆಯಲು ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ ಕಡ್ಡಾಯಗೊಳಿಸಲಾಗಿತ್ತು. ಈಗಾಗಲೇ ಹಲವು ನಗರಗಳಲ್ಲಿ ಇಂತಹ ಬಿಗಿ ನಿಯಮ ಜಾರಿಗೊಳಿಸಲಾಗಿದ್ದು, ಶೀಘ್ರದಲ್ಲೇ ಮಂಗಳೂರು ಕೂಡಾ ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…