ಮಂಗಳೂರು :ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಪಿಜಿಗಳಿಗೆ ಸಂಬಂಧಿಸಿದ ನಿಯಮಗಳನ್ನು ಬಿಗಿಗೊಳಿಸಲು ಪೊಲೀಸರು ಮುಂದಾಗಿದ್ದು, ಶೀಘ್ರದಲ್ಲಿ ಸಮಗ್ರ ನಿಯಮಾವಳಿ ರೂಪುಗೊಳ್ಳುವ ಸಾಧ್ಯತೆ ಇದೆ.
ಪಿಜಿ ಆರಂಭಿಸಲು ಸ್ಥಳೀಯಾಡಳಿತ ಸಂಸ್ಥೆಗಳ ಪರವಾನಿಗೆ ಹಾಗೂ ಪೊಲೀಸ್ ಆಯುಕ್ತರ ಕಚೇರಿಯಿಂದಲೂ ನಿರಾಕ್ಷೇಪಣ ಪತ್ರ (ಎನ್ಒಸಿ) ಪಡೆಯುವುದು ಮತ್ತು ಪಿಜಿ ನಿವಾಸಿಗಳಿಗೆ ಪೊಲೀಸ್ ದೃಢೀಕರಣ ಪ್ರಮಾಣಪತ್ರ (ಪಿಸಿಸಿ)ವನ್ನು ಕಡ್ಡಾಯ ಮಾಡಲಾಗುತ್ತಿದೆ.
ಜತೆಗೆ ಸ್ಥಳೀಯ ಆಗುಹೋಗುಗಳ ಮೇಲೆ ಸಾರ್ವಜನಿಕರು ನಿಗಾ ಇಡುವಂತಹ “ನೇಬರ್ಹುಡ್ ವಾಚ್’ ಪರಿಕಲ್ಪನೆಯನ್ನೂ ಜಾರಿಗೊಳಿಸಲು ಪೊಲೀಸರು ಮುಂದಾಗಿದ್ದಾರೆ.
ಮಂಗಳೂರಿನಲ್ಲಿ ನ.19ರಂದು ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮಹಮ್ಮದ್ ಶಾರೀಕ್ ಮೈಸೂರಿನಲ್ಲಿ ನಕಲಿ ಗುರುತು ಚೀಟಿ ನೀಡಿ ಬಾಡಿಗೆಗೆ ಮನೆ ಪಡೆದುಕೊಂಡಿದ್ದ. ಅನಂತರ ಮೈಸೂರಿನಲ್ಲಿ ಬಾಡಿಗೆ ಮನೆ ಪಡೆಯಲು ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ ಕಡ್ಡಾಯಗೊಳಿಸಲಾಗಿತ್ತು. ಈಗಾಗಲೇ ಹಲವು ನಗರಗಳಲ್ಲಿ ಇಂತಹ ಬಿಗಿ ನಿಯಮ ಜಾರಿಗೊಳಿಸಲಾಗಿದ್ದು, ಶೀಘ್ರದಲ್ಲೇ ಮಂಗಳೂರು ಕೂಡಾ ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…