ಮಂಗಳೂರು:  ಪಿಲಿಕುಳ ಮೃಗಾಲಯಕ್ಕೆ ಹೊಸ ಅತಿಥಿಯಾಗಿ ಆಗಮಿಸಿರುವ  ಬಿಳಿ ಹೆಣ್ಣು ಹುಲಿ ಕಾವೇರಿ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು:  ಪಿಲಿಕುಳ ಮೃಗಾಲಯಕ್ಕೆ ಹೊಸ ಅತಿಥಿಯಾಗಿ ಆಗಮಿಸಿರುವ  ಬಿಳಿ ಹೆಣ್ಣು ಹುಲಿ ಕಾವೇರಿ

ಮಂಗಳೂರು: ಕೇಂದ್ರ ಮೃಗಾಲಯ ಪ್ರಾಧಿಕಾರದ ಪ್ರಾಣಿ ವಿನಿಮಯ ಯೋಜನೆಯಡಿ ಚೆನ್ನೈನ ಅರಿಗ್ನಾರ್ ಅಣ್ಣಾ ಮೃಗಾಲಯದಿಂದ ಪಿಲಿಕುಳ ಮೃಗಾಲಯಕ್ಕೆ ಒಂದು ಬಿಳಿ ಹೆಣ್ಣು ಹುಲಿ ಕಾವೇರಿ ಮತ್ತು ಹೆಣ್ಣು ಉಷ್ಟ್ರ ಪಕ್ಷಿಯನ್ನು ತರಿಸಿಕೊಳ್ಳಲಾಗಿದೆ.

ಬದಲಾಗಿ ಮಂಗಳೂರಿನ ಪಿಲಿಕುಳ ಮೃಗಾಲಯದಿಂದ ಒಂದು ಬೆಂಗಾಲ್‌ ಹುಲಿ ಸಂಜಯ್‌, ನಾಲ್ಕು ಕಾಡುನಾಯಿಗಳು ಮತ್ತು ಕೆಲವು ಉರಗಗಳನ್ನು ಕಳುಹಿಸಿಕೊಡಲಾಗಿದೆ. ಪಿಲಿಕುಳದಲ್ಲಿ ಈಗಾಗಲೇ ಹನ್ನೊಂದು ಹುಲಿಗಳು (ಏಳು ಗಂಡು, ನಾಲ್ಕು ಹೆಣ್ಣು) ಮತ್ತು ಎರಡು ಗಂಡು ಉಷ್ಟ್ರ ಪಕ್ಷಿಗಳು ಇವೆ.

ಜೂನ್ 1 ರಿಂದ ಜೂನ್ 10 – ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ – VIshwanews24

ಹೊಸ ಅತಿಥಿಯಾಗಿ ಆಗಮಿಸಿರುವ ಬಿಳಿ ಹುಲಿಯನ್ನು ಕ್ವಾರಂಟೈನ್‌ನಲ್ಲಿ ಪ್ರತ್ಯೇಕಿಸಿ ಇಡಲಾಗಿದ್ದು, ಸ್ಥಳೀಯ ಪರಿಸರಕ್ಕೆ ಒಗ್ಗಿದ ನಂತರ ವಾರದೊಳಗಾಗಿ ಸಾರ್ವಜನಿಕ ವೀಕ್ಷಣೆಗೆ ಅವಕಾಶ ನೀಡಲಾಗುತ್ತದೆ.

ಗುಜರಾತ್‌ನ ರಾಜಕೋಟ್‌ ಮೃಗಾಲಯದಿಂದ ಏಷ್ಯಾಟಿಕ್‌ ಸಿಂಹ, ಭಾರತೀಯ ತೋಳಗಳು ಮತ್ತು ಕೆಲವು ಅಪರೂಪದ ಪಕ್ಷಿಗಳನ್ನು ಮಹಾರಾಷ್ಟ್ರದ ಗೋರವಾದ ಮೃಗಾಲಯದಿಂದ, ಬಿಳಿ ಕೃಷ್ಣಮೃಗಗಳು ಮತ್ತು ಕರಡಿಗಳನ್ನು ಹಾಗೂ ಒಡಿಶಾದ ನಂದನಕಾನನ ಮೃಗಾಲಯದಿಂದ ಅಪರೂಪದ ಹೋಗ್‌ ಜಿಂಕೆ, ನೀಲಗಾಯಿಗಳು ಮತ್ತು ಪಕ್ಷಿಗಳನ್ನು ಪ್ರಾಣಿ ವಿನಿಮಯ ಯೋಜನೆಯಡಿ ತರಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗಿದ್ದು ಕೇಂದ್ರ ಮೃಗಾಲಯ ಪ್ರಾಧಿಕಾರದ ಒಪ್ಪಿಗೆ ದೊರಕಿದ ತಕ್ಷಣ ಕಾರ್ಯರೂಪಕ್ಕೆ ತರಲಾಗುತ್ತದೆ.

ಬಂಟ್ವಾಳ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ – ಪ್ರೀತಿಸಲು ಒತ್ತಾಯಿಸಿದ್ದ ಅನ್ಯಕೋಮಿನ ಯುವಕನ ವಿರುದ್ದ ಪ್ರಕರಣ – Vishwanews24

Leave a Reply