ಮಂಗಳೂರು: ಕೇಂದ್ರ ಮೃಗಾಲಯ ಪ್ರಾಧಿಕಾರದ ಪ್ರಾಣಿ ವಿನಿಮಯ ಯೋಜನೆಯಡಿ ಚೆನ್ನೈನ ಅರಿಗ್ನಾರ್ ಅಣ್ಣಾ ಮೃಗಾಲಯದಿಂದ ಪಿಲಿಕುಳ ಮೃಗಾಲಯಕ್ಕೆ ಒಂದು ಬಿಳಿ ಹೆಣ್ಣು ಹುಲಿ ಕಾವೇರಿ ಮತ್ತು ಹೆಣ್ಣು ಉಷ್ಟ್ರ ಪಕ್ಷಿಯನ್ನು ತರಿಸಿಕೊಳ್ಳಲಾಗಿದೆ.
ಬದಲಾಗಿ ಮಂಗಳೂರಿನ ಪಿಲಿಕುಳ ಮೃಗಾಲಯದಿಂದ ಒಂದು ಬೆಂಗಾಲ್ ಹುಲಿ ಸಂಜಯ್, ನಾಲ್ಕು ಕಾಡುನಾಯಿಗಳು ಮತ್ತು ಕೆಲವು ಉರಗಗಳನ್ನು ಕಳುಹಿಸಿಕೊಡಲಾಗಿದೆ. ಪಿಲಿಕುಳದಲ್ಲಿ ಈಗಾಗಲೇ ಹನ್ನೊಂದು ಹುಲಿಗಳು (ಏಳು ಗಂಡು, ನಾಲ್ಕು ಹೆಣ್ಣು) ಮತ್ತು ಎರಡು ಗಂಡು ಉಷ್ಟ್ರ ಪಕ್ಷಿಗಳು ಇವೆ.
ಹೊಸ ಅತಿಥಿಯಾಗಿ ಆಗಮಿಸಿರುವ ಬಿಳಿ ಹುಲಿಯನ್ನು ಕ್ವಾರಂಟೈನ್ನಲ್ಲಿ ಪ್ರತ್ಯೇಕಿಸಿ ಇಡಲಾಗಿದ್ದು, ಸ್ಥಳೀಯ ಪರಿಸರಕ್ಕೆ ಒಗ್ಗಿದ ನಂತರ ವಾರದೊಳಗಾಗಿ ಸಾರ್ವಜನಿಕ ವೀಕ್ಷಣೆಗೆ ಅವಕಾಶ ನೀಡಲಾಗುತ್ತದೆ.
ಗುಜರಾತ್ನ ರಾಜಕೋಟ್ ಮೃಗಾಲಯದಿಂದ ಏಷ್ಯಾಟಿಕ್ ಸಿಂಹ, ಭಾರತೀಯ ತೋಳಗಳು ಮತ್ತು ಕೆಲವು ಅಪರೂಪದ ಪಕ್ಷಿಗಳನ್ನು ಮಹಾರಾಷ್ಟ್ರದ ಗೋರವಾದ ಮೃಗಾಲಯದಿಂದ, ಬಿಳಿ ಕೃಷ್ಣಮೃಗಗಳು ಮತ್ತು ಕರಡಿಗಳನ್ನು ಹಾಗೂ ಒಡಿಶಾದ ನಂದನಕಾನನ ಮೃಗಾಲಯದಿಂದ ಅಪರೂಪದ ಹೋಗ್ ಜಿಂಕೆ, ನೀಲಗಾಯಿಗಳು ಮತ್ತು ಪಕ್ಷಿಗಳನ್ನು ಪ್ರಾಣಿ ವಿನಿಮಯ ಯೋಜನೆಯಡಿ ತರಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗಿದ್ದು ಕೇಂದ್ರ ಮೃಗಾಲಯ ಪ್ರಾಧಿಕಾರದ ಒಪ್ಪಿಗೆ ದೊರಕಿದ ತಕ್ಷಣ ಕಾರ್ಯರೂಪಕ್ಕೆ ತರಲಾಗುತ್ತದೆ.
ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…
ಬರ್ತ್ಡೇ, ಪ್ರಿವೆಡ್ಡಿಂಗ್ ಫೋಟೋಶೂಟ್ಗಳಿಗೆ ಬಾಡಿಗೆಗೆ ಸಿಗಲಿದೆ ಡಬಲ್ ಡೆಕ್ಕರ್ ಅಂಬಾರಿ ಬಸ್! ಬೆಂಗಳೂರು : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ…
ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…
ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…