ಮಂಗಳೂರು: ಕೇಂದ್ರ ಮೃಗಾಲಯ ಪ್ರಾಧಿಕಾರದ ಪ್ರಾಣಿ ವಿನಿಮಯ ಯೋಜನೆಯಡಿ ಚೆನ್ನೈನ ಅರಿಗ್ನಾರ್ ಅಣ್ಣಾ ಮೃಗಾಲಯದಿಂದ ಪಿಲಿಕುಳ ಮೃಗಾಲಯಕ್ಕೆ ಒಂದು ಬಿಳಿ ಹೆಣ್ಣು ಹುಲಿ ಕಾವೇರಿ ಮತ್ತು ಹೆಣ್ಣು ಉಷ್ಟ್ರ ಪಕ್ಷಿಯನ್ನು ತರಿಸಿಕೊಳ್ಳಲಾಗಿದೆ.
ಬದಲಾಗಿ ಮಂಗಳೂರಿನ ಪಿಲಿಕುಳ ಮೃಗಾಲಯದಿಂದ ಒಂದು ಬೆಂಗಾಲ್ ಹುಲಿ ಸಂಜಯ್, ನಾಲ್ಕು ಕಾಡುನಾಯಿಗಳು ಮತ್ತು ಕೆಲವು ಉರಗಗಳನ್ನು ಕಳುಹಿಸಿಕೊಡಲಾಗಿದೆ. ಪಿಲಿಕುಳದಲ್ಲಿ ಈಗಾಗಲೇ ಹನ್ನೊಂದು ಹುಲಿಗಳು (ಏಳು ಗಂಡು, ನಾಲ್ಕು ಹೆಣ್ಣು) ಮತ್ತು ಎರಡು ಗಂಡು ಉಷ್ಟ್ರ ಪಕ್ಷಿಗಳು ಇವೆ.
ಹೊಸ ಅತಿಥಿಯಾಗಿ ಆಗಮಿಸಿರುವ ಬಿಳಿ ಹುಲಿಯನ್ನು ಕ್ವಾರಂಟೈನ್ನಲ್ಲಿ ಪ್ರತ್ಯೇಕಿಸಿ ಇಡಲಾಗಿದ್ದು, ಸ್ಥಳೀಯ ಪರಿಸರಕ್ಕೆ ಒಗ್ಗಿದ ನಂತರ ವಾರದೊಳಗಾಗಿ ಸಾರ್ವಜನಿಕ ವೀಕ್ಷಣೆಗೆ ಅವಕಾಶ ನೀಡಲಾಗುತ್ತದೆ.
ಗುಜರಾತ್ನ ರಾಜಕೋಟ್ ಮೃಗಾಲಯದಿಂದ ಏಷ್ಯಾಟಿಕ್ ಸಿಂಹ, ಭಾರತೀಯ ತೋಳಗಳು ಮತ್ತು ಕೆಲವು ಅಪರೂಪದ ಪಕ್ಷಿಗಳನ್ನು ಮಹಾರಾಷ್ಟ್ರದ ಗೋರವಾದ ಮೃಗಾಲಯದಿಂದ, ಬಿಳಿ ಕೃಷ್ಣಮೃಗಗಳು ಮತ್ತು ಕರಡಿಗಳನ್ನು ಹಾಗೂ ಒಡಿಶಾದ ನಂದನಕಾನನ ಮೃಗಾಲಯದಿಂದ ಅಪರೂಪದ ಹೋಗ್ ಜಿಂಕೆ, ನೀಲಗಾಯಿಗಳು ಮತ್ತು ಪಕ್ಷಿಗಳನ್ನು ಪ್ರಾಣಿ ವಿನಿಮಯ ಯೋಜನೆಯಡಿ ತರಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗಿದ್ದು ಕೇಂದ್ರ ಮೃಗಾಲಯ ಪ್ರಾಧಿಕಾರದ ಒಪ್ಪಿಗೆ ದೊರಕಿದ ತಕ್ಷಣ ಕಾರ್ಯರೂಪಕ್ಕೆ ತರಲಾಗುತ್ತದೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…