Featured

ಮಂಗಳೂರು: ಪೆಟ್ರೋಲ್ ಡೀಸೆಲ್ ದರ ಏರಿಕೆ – ಪೆಟ್ರೋಲ್ ಪಂಪ್‌ನಲ್ಲಿ “100 ನಾಟ್ ಔಟ್”  ಟ್ಯಾಗ್ ಲೈನ್‌ನೊಂದಿಗೆ ಕಾಂಗ್ರೆಸ್  ಪ್ರತಿಭಟನೆ – Vishwanews24

ಮಂಗಳೂರು: ಪೆಟ್ರೋಲ್ ಡೀಸೆಲ್ ದರ ಏರಿಕೆ – ಪೆಟ್ರೋಲ್ ಪಂಪ್‌ನಲ್ಲಿ “100 ನಾಟ್ ಔಟ್”  ಟ್ಯಾಗ್ ಲೈನ್‌ನೊಂದಿಗೆ ಕಾಂಗ್ರೆಸ್  ಪ್ರತಿಭಟನೆ – Vishwanews24

ಮಂಗಳೂರು: ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸುತ್ತಿರುವ ಕೇಂದ್ರ ಸರ್ಕಾರ ವಿರುದ್ಧ ಜಿಲ್ಲಾ ಕಾಂಗ್ರೆಸ್ ಜೂನ್ 11 ರ ಶುಕ್ರವಾರ ಕೆಪಿಟಿ ಪೆಟ್ರೋಲ್ ಪಂಪ್‌ನಲ್ಲಿ “100 ನಾಟ್ ಔಟ್” ಎಂಬ ಟ್ಯಾಗ್ ಲೈನ್‌ನೊಂದಿಗೆ ಪ್ರತಿಭಟನೆ ನಡೆಸಿತು. ಮಾತ್ರವಲ್ಲದೆ ಪ್ರತಿಭಟನಾ ಸ್ಥಳದಲ್ಲಿ ಪೆಟ್ರೋಲ್ ದರ 100 ಗಡಿ ದಾಟಿದ್ದಕ್ಕಾಗಿ ಕಾಂಗ್ರೆಸ್ ಕೇಕ್ ಕತ್ತರಿಸಿ ಪ್ರತಿಭಟನೆ ನಡೆಸಿತು.

ಇದೇ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ‘ಪೆಟ್ರೋಲ್ ಬೆಲೆ ಸೆಂಚುರಿ ದಾಖಲಿಸಿದ್ದು ಇದರಿಂದ ಜನ ಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಓರ್ವ ಸಾಮಾನ್ಯ ಮನುಷ್ಯ ತನ್ನ ವಾಹನಕ್ಕೆ ಒಂದು ಲೀಟರ್ ಪೆಟ್ರೋಲ್ ಹಾಕಿಸಿಕೊಂಡರೆ ವರ್ಷಕ್ಕೆ 25000 ರೂ. ಪಾವತಿಸಬೇಕಾಗುತ್ತದೆ. ಕೋವಿಡ್ ಜನರ ಮೇಲೆ ಪರಿಣಾಮ ಬೀರಿದ್ದು ಇದರ ನಡುವೆ ಈಗ ಇಂಧನ ಬೆಲೆಯ ಗಗನಕ್ಕೇರಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಕ್ಷೇತ್ರಗಳು, ಗ್ರಾಮ ಪಂಚಾಯಿತಿಗಳು, ತಾಲ್ಲೂಕು ಪಂಚಾಯತ್ ಗಳು ಮತ್ತು ಪೆಟ್ರೋಲ್ ಪಂಪ್‌ಗಳಲ್ಲಿ ಮುಂದಿನ 100 ದಿನಗಳವರೆಗೆ ‘100 ನಾಟ್ ಔಟ್’ ಎಂದು ಪ್ರತಿಭಟಿಸುತ್ತೇವೆ ಎಂದು ಹೇಳಿದರು.

ಮಾಜಿ ಸಚಿವ ರಾಮನಾಥ್ ರೈ ಮಾತನಾಡಿ, ‘ಇಂಧನ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ತೀವ್ರ ಸಂಕಷ್ಟದಲ್ಲಿದ್ದಾರೆ. ಯುಪಿಎ ಸರ್ಕಾರದ ಅವಧಿಯಲ್ಲಿ ಒಂದು ಬ್ಯಾರೆಲ್‌ಗೆ 140 ಡಾಲರ್ ಮತ್ತು ಪೆಟ್ರೋಲ್ 70 ರೂ.ಗಳನ್ನು ದಾಟಲಿಲ್ಲ. ಬೆಲೆ ಏರಿಕೆ ವಿರುದ್ದ ಎಲ್ಲಾ ನಾಗರಿಕರು ಮತ್ತು ವಿರೋಧ ಪಕ್ಷಗಳು ಒಟ್ಟಾಗಿ ಸೇರಿಕೊಂಡು ಪ್ರತಿಭಟನೆ ನಡೆಸಬೇಕು. ಇದರಿಂದ ಇಂಧನ ಬೆಲೆ ಕುಸಿಯುತ್ತದೆ. ಸಾಂಕ್ರಾಮಿಕ ಸಮಯದಲ್ಲಿ ಬೆಲೆ ಕುಸಿತವು ಸಾಮಾನ್ಯ ಜನರಿಗೆ ಸಹಾಯ ಮಾಡುತ್ತದೆ, ಇಂಧನ ಬೆಲೆ ಕುಸಿತಕಂಡರೆ ತನ್ನಿಂತಾನೆ ಇತರ ಸರಕುಗಳ ಬೆಲೆ ಇಳಿಯುತ್ತದೆ ಎಂದು ಅಭಿಪ್ರಾಯಪಟ್ಟರು.

ಮಾಜಿ ವಿಧಾನಪರಿಷತ್ ಸದಸ್ಯ ಮಾತನಾಡಿ, ಐವನ್ ಡಿಸೋಜಾ ಮಾತನಾಡಿ, ‘ಪೆಟ್ರೋಲ್ ಬೆಲೆಯ ವಿಚಾರದಲ್ಲಿ ಸರ್ಕಾರ ಕಿವುಡ ಮತ್ತು ಮೂಕವಾಗಿದೆ. ಸರ್ಕಾರ ತಮ್ಮ ಮತದಾರರಿಗೆ ಅಮೂಲ್ಯವಾದ 100 ರೂಪಾಯಿ ಪೆಟ್ರೋಲ್ ಅನ್ನು ಉಡುಗೊರೆಯಾಗಿ ನೀಡಿದೆ. ಇಂಧನ ಬೆಲೆ ಏರಿಕೆಯತ್ತ ಸಾಗುತ್ತಿದ್ದಂತೆ ಎಲ್ಲಾ ಬಿಜೆಪಿ ನಾಯಕರು ಮೌನ ಕಾಯ್ದುಕೊಳ್ಳುತ್ತಿದ್ದಾರೆ. ಯುಪಿಎ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ಬೆಲೆ 60 ರಿಂದ 70 ರೂ.ಗಳವರೆಗೆ ಹೆಚ್ಚಿಸಿದಾಗ, ಬಿಜೆಪಿ ನಾಯಕರು ಸೈಕ್ಲಿಂಗ್, ಬೀದಿಗಳಲ್ಲಿ ಅಡುಗೆ ಮಾಡುವ ಮೂಲಕ ಪ್ರತಿಭಟನೆ ನಡೆಸುತ್ತಿರುವುದು ಕಂಡುಬಂದಿತ್ತು ಎಂದು ಹೇಳಿದರು.

ಮಾಜಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮಾತನಾಡಿ, ‘ಈ ಪ್ರತಿಭಟನೆಯೂ ಬಡ ಮತ್ತು ಸಾಮಾನ್ಯ ನಾಗರಿಕರಿಗಾಗಿ ಅದು ಬಿಟ್ಟು ಪೆಟ್ರೋಲ್ 200 ರೂ ತಲುಪಿದರೂ ಮೋದಿಯವರಿಗೆ ಮತ ಚಲಾಯಿಸುವುದಾಗಿ ಹೇಳಿಕೊಳ್ಳುವ ಅಂಧ ಭಕ್ತರಿಗೆ ಅಲ್ಲ ಎಂದು ಹೇಳಿದರು.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

1 hour ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

7 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

7 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

9 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

9 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

9 hours ago