ಮಂಗಳೂರು : ಮಂಗಳೂರಿನಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಒಂದು ಸಣ್ಣ ಪಿಕ್ ಪಾಕೆಟ್ ಕೂಡ ನಡೆಯುವುದಿಲ್ಲ, ಪೊಲೀಸರ ಕರ್ತವ್ಯದಲ್ಲಿ ರಾಜಕಾರಣಿಗಳು ಮೂಗುತೂರಿಸದ, ಕಾನೂನು ಮೀರಿ ವರ್ತಿಸದ ಅಪರೂಪದ ನಗರ ಮಂಗಳೂರು ಎಂದು ನಿರ್ಗಮಿತ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಮತ್ತು ಸಾರ್ವಜನಿಕರು ಭಾನುವಾರ ಆಯೋಜಿಸಿದ್ದ ಶಶಿಕುಮಾರ್ ಬೀಳ್ಕೊಡುಗೆ ಮತ್ತು ಹೊಸ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು ದಕ್ಷಿಣಕನ್ನಡ ಜಿಲ್ಲೆಯ ಜನರು ಸುಸಂಸ್ಕೃತರು ಆದರೆ ಪೂರ್ವಗ್ರಹಪೀಡಿತರು ಈ ನಗರಕ್ಕೆ ಕೋಮು ಸೂಕ್ಷ್ಮ ಪ್ರದೇಶವೆಂಬ ಹಣೆಪಟ್ಟಿ ಕೊಟ್ಟಿದ್ದಾರೆ. ಇಲ್ಲಿನ ಜನರು ಇಲಾಖೆಯ ಎಲ್ಲ ಆದೇಶಗಳನ್ನು ಬೇಸರವಿಲ್ಲದೆ ಪಾಲಿಸುತ್ತಾರೆ ಎಂದರು.
ಮಂಗಳೂರಿನಲ್ಲಿದ್ದಾಗ ಕೌಟುಂಬಿಕ ವಾತಾವರಣದಲ್ಲಿ ಇದ್ದಂತೆ ಭಾಸವಾಗುತ್ತಿತ್ತು. ಆರಂಭದ 2 ತಿಂಗಳು ಕೆಲಸಕ್ಕೆ ಹೊಂದಿಕೊಳ್ಳಲು ಸ್ವಲ್ಪ ಕಷ್ಟವಾಯಿತು. ನಂತರ ಎಲ್ಲವೂ ಸುಸೂತ್ರವಾಗಿ ನಡೆಯಿತು. ಇಲಾಖೆಯ ಎಲ್ಲರೂ ಕೈಜೋಡಿಸಿ ನನ್ನ ಕೆಲಸ ಸುಲಭ ಮಾಡಿದರು ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…