Featured

ಮಂಗಳೂರು: ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ : ಮತ್ತೆ ಮೂವರು ಆರೋಪಿಗಳ ಬಂಧನ -Vishwanews24

ಮಂಗಳೂರು: ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ : ಮತ್ತೆ ಮೂವರು ಆರೋಪಿಗಳ ಬಂಧನ -Vishwanews24

ಮಂಗಳೂರು: ಸಿಎಎ ಪ್ರತಿಭಟನೆ ಸಂದರ್ಭ ನಡೆದ ಗೋಲಿಬಾರ್ ಗೆ ಪ್ರತೀಕಾರವಾಗಿ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮಂಗಳೂರಿನ ಬೋಳಾರದ ಇಬ್ರಾಹಿಂ ಶಾಕೀರ್ (19), ಕುದ್ರೋಳಿಯ ಅಕ್ಬರ್ (30) ಮತ್ತು ಮುಹಮ್ಮದ್ ಹನೀಫ್ (32) ಎಂದು ಗುರುತಿಸಲಾಗಿದ್ದು, ಇವರು ಕಾರ್ಖಾನಾ ಗ್ಯಾಂಗ್ ನ ಸದಸ್ಯರು ಎಂದು ತಿಳಿದು ಬಂದಿದೆ.
2019ರ ಡಿಸೆಂಬರ್ 19ರಂದು ಸಿಎಎ ವಿರುದ್ದ ನಡೆದ ಪ್ರತಿಭಟನೆಯಲ್ಲಿ ಪೊಲೀಸ್ ಗೋಲಿಬಾರ್ ಗೆ ಇಬ್ಬರು ಸಾವನ್ನಪ್ಪಿದ್ದರು.

ಗಣರಾಜ್ಯೋತ್ಸವ ದಿನ ರಾಷ್ಟ್ರಧ್ವಜಕ್ಕೆ ಅಪಮಾನ ದುರದೃಷ್ಟಕರ : ರಾಷ್ಟ್ರಪತಿ ರಾಮನಾಥ್ ಕೋವಿಂದ್ -Vishwanews24

ಗೋಲಿಬಾರ್ ಘಟನೆಗೆ ಪ್ರತಿಕಾರವಾಗಿ ಪೊಲೀಸರ ಮೇಲೆ ಮಾಯಾ ಗ್ಯಾಂಗ್ ಹಾಗೂ ಕಾರ್ಖಾನಾ ಗ್ಯಾಂಗ್ ಎಂಬ ಹೆಸರಿನ ದುಷ್ಕರ್ಮಿಗಳ ತಂಡ ದಾಳಿ ನಡೆಸಲು ಯೋಜನೆ ರೂಪಿಸಿದ್ದವು. ಅದರಂತೆ 2020ರ ಡಿಸೆಂಬರ್ 16ರಂದು ಮಂಗಳೂರಿನ ನ್ಯೂ ಚಿತ್ರಾ ಟಾಕೀಸ್ ಬಳಿಯ ಚೆಕ್​ಪೋಸ್ಟ್​ನಲ್ಲಿ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಗೆ ಚೂರಿ ಇರಿಯಲಾಗಿತ್ತು.

ಮಾಯಾ ಗ್ಯಾಂಗ್​​ ತಮ್ಮ ಟೀಂನಲ್ಲಿದ್ದ ಅಪ್ರಾಪ್ತರಿಗೆ ಮತ್ತೇರಿಸುವ ಮಾತ್ರೆಗಳನ್ನು ನೀಡಿ ಪೊಲೀಸರ ಮೇಲೆ ಹಲ್ಲೆ ನಡೆಸಿತ್ತು. ಆರಂಭದಲ್ಲಿ ಅಪ್ರಾಪ್ತ ಬಾಲಕ ಮತ್ತು ಮತ್ತೋರ್ವನನ್ನು ಬಂಧಿಸಲಾಗಿತ್ತು. ಬಳಿಕ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಇಂದು ಮತ್ತೆ ಮೂವರನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಬಂಧಿತರ ಸಂಖ್ಯೆ 11 ಕ್ಕೆ ಏರಿಕೆಯಾಗಿದೆ.

ಫೆ. 01 ರಿಂದ ಮಂಗಳೂರು – ಪೂನಾ ನಡುವೆ ಅಂಬಾರಿ ಡ್ರೀಮ್ ಕ್ಲಾಸ್ ಮಲ್ಟಿ ಅಕ್ಸಿಲ್ ಎ.ಸಿ. ಸ್ಲೀಪರ್ ಸಾರಿಗೆ ಪ್ರಾರಂಭ -Vishwanews24

 

Vishwa News 24

Recent Posts

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ – vishwanews24

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್‌ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…

1 hour ago

ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ – vishwanews24

ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…

2 hours ago

ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ – vishwanews24

‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್…

2 hours ago

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ – vishwanews24

ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…

2 hours ago

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್,ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ನ ಆಹಾರ ಪರವಾನಗಿ ಅಮಾನತು – vishwanews24

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…

3 hours ago

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  – vishwanews24

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  ಉಡುಪಿ: ಉದ್ಯಮಿ…

3 hours ago