ಮಂಗಳೂರು: ಪೌರತ್ವ ಕಾಯಿದೆ ವಿರುದ್ದ ಬೃಹತ್ ಸಮಾವೇಶದಲ್ಲಿ ಮೈದಾನದಲ್ಲಿ ಹಾರಾಡಿದ ತ್ರಿವರ್ಣ ಧ್ವಜ -Vishwanews24

ಮಂಗಳೂರು: ಕೇಂದ್ರದ ಪೌರತ್ವ ಕಾಯಿದೆ ವಿರುದ್ದ ಮಂಗಳೂರಿನಲ್ಲಿ ಭಾರೀ ಜನಾಕ್ರೋಶ ವ್ಯಕ್ತವಾಗಿದೆ. ಮಂಗಳೂರು ನಗರ ಹೊರವಲಯದ ಅಡ್ಯಾರ್ ಮೈದಾನದಲ್ಲಿ ಮುಸ್ಲಿಂ ಸಂಘಟನೆಗಳ ಕಾರ್ಯಕರ್ತರು ಶಕ್ತಿ ಪ್ರದರ್ಶನ ಮಾಡಿದ್ದು, ಒಂದು ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಸೇರಿದ ಪ್ರತಿಭಟನಾಕಾರರು ಕೇಂದ್ರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಡ್ಯಾರ್ ಮೈದಾನದ ತುಂಬಾ ತ್ರಿವರ್ಣ ಧ್ವಜ ಹಾರಾಡಿದ್ದು,‌ಪೌರತ್ವ ಕಾಯಿದೆ ಜಾರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಮಂಗಳೂರು ಗೋಲಿಬಾರ್ ಪ್ರಕರಣದ ನಂತರ ಮೊದಲ ಬಾರಿಗೆ ಮಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆದಿದ್ದು, ಪೊಲೀಸರ ವಿರುದ್ಧವೂ ಫ್ಲೇ ಕಾರ್ಡ್ ಪ್ರದರ್ಶನ ಮಾಡಲಾಗಿದೆ. ಮಂಗಳೂರು ನಗರ ಪೊಲೀಸ್ ಕಮೀಷನರ್ ಡಾ.ಪಿ ಎಸ್ ಹರ್ಷ ವಿರುದ್ಧವೂ ಸಮಾವೇಶ ದಲ್ಲಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಧ್ಯಾಹ್ನ3 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕಾರ್ಯಕ್ರಮ ನಡೆದಿದ್ದು,ಕೇಂದ್ರದ ವಿರುದ್ದ ಗುಡುಗಿದ್ದಾರೆ. ಮಾಜಿ‌ IAS ಅಧಿಕಾರಿ, ಹರ್ಷ ಮಂದರ್, ಕೇರಳದ ಕಣ್ಣನ್ ಗೋಪಿನಾಥನ್ ಸೇರಿದಂತೆ ಮುಸ್ಲಿಂ ಸಂಘಟನೆಗಳ ಪ್ರಮುಖರು ಭಾಷಣ ಮಾಡಿ ಜನಾಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಸ್ಲಿಂ ಸಂಘಟನೆಗಳ ಬೃಹತ್ ಸಮಾವೇಶದ ಹಿನ್ನಲೆ ಮಂಗಳೂರು ನಗರದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿತ್ತು. ಕಾನೂನು ಸುವ್ಯವಸ್ಥೆ ವಿಭಾಗದ ADGP ಅಮರ್ ಕುಮಾರ್ ಪಾಂಡೆ ಮಂಗಳೂರಿನಲ್ಲೇ ಬೀಡು ಬಿಟ್ಟಿದ್ದು, ಒಟ್ಟು 5 ಸಾವಿರ ಪೊಲೀಸರಿಂದ ಭಧ್ರತೆ ನೀಡಲಾಗಿತ್ತು.

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ75ಕ್ಕೆ ತಾಗಿಕೊಂಡಿರುವ ಮೈದಾನದಲ್ಲಿ ಕಾರ್ಯಕ್ರಮ ನಡೆದಿದ್ದು, ಮಧ್ಯಾಹ್ನದ ನಂತರ ಹೆದ್ದಾರಿಯಲ್ಲಿ ವಾಹನ ಸಂಚಾರ ನಿರ್ಬಂಧ ಮಾಡಲಾಗಿತ್ತು. ಕೇರಳದಿಂದ ಪ್ರತಿಭಟನೆಗೆ ಕಿಡಿಗೇಡಿಗಳು ಬರುವ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು, ರೈಲ್ವೇ ನಿಲ್ದಾಣ, ಗಡಿ ಭಾಗದ ಚೆಕ್ ಪೋಸ್ಟ್ ಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ.‌ ಅಲ್ಲದೆ ನದಿಯಲ್ಲಿ ತೆಪ್ಪದ ಮೂಲಕವೂ ಬರುವ ಸುಳಿವು ಇದ್ದಿದ್ದರಿಂದ ನೇತ್ರಾವತಿ ನದಿ ದಡದಲ್ಲೂ ಪೊಲೀಸರು ಪಹರೆ ಕಾದಿದ್ದಾರೆ.

ಒಟ್ಟಿನ್ನಲ್ಲಿ ಪೊಲೀಸರ ತಲೆನೋವಾಗಿದ್ದ ಮುಸ್ಲಿಂ ಸಂಘಟನೆಗಳ ಪ್ರತಿಭಟನಾ ಸಮಾವೇಶ ಶಾಂತವಾಗಿ ನಡೆದಿದ್ದು ಪೊಲೀಸರು ನಿರಳರಾಗಿದ್ದಾರೆ‌‌.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

17 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago