Featured

ಮಂಗಳೂರು: ಪ್ರಚೋದನಕಾರಿ ಭಾಷಣ ಮಾಡುವವರನ್ನು ಕೆಲ ಸಂಘಟನೆಗಳು ರಕ್ಷಣೆ ಮಾಡುತ್ತಿವೆ : ದಿನೇಶ್‌ ಗುಂಡೂರಾವ್ – vishwanews24

ಮಂಗಳೂರು: ಪ್ರಚೋದನಕಾರಿ ಭಾಷಣ ಮಾಡುವವರನ್ನು ಕೆಲ ಸಂಘಟನೆಗಳು ರಕ್ಷಣೆ ಮಾಡುತ್ತಿವೆ ..

ಕೋಮು ಭಾಷಣಗಳನ್ನು ಹತ್ತಿಕ್ಕಲು ಒಂದು ಕಾನೂನು ರೂಪಿಸಬೇಕು..

ಎಲ್ಲಾ ಕಾನೂನು ಬಾಹಿರ ಚಟುವಟಿಕೆಗೆ ಇತಿಶ್ರೀ ಹಾಡುತ್ತೇವೆ : ದಿನೇಶ್‌ ಗುಂಡೂರಾವ್

ಮಂಗಳೂರು: ಪ್ರಚೋದನಕಾರಿ ಭಾಷಣ ಮಾಡುವವರನ್ನು ಕೆಲ ಸಂಘಟನೆಗಳು ರಕ್ಷಣೆ ಮಾಡುತ್ತಿವೆ. ಅವರಿಗೆ ವಕೀಲರನ್ನು ಕೊಡುತ್ತಾರೆ, ನ್ಯಾಯಾಧೀಶರ ಹತ್ತಿರ ಮಾತನಾಡಿಸುತ್ತಾರೆ. ಎಫ್ಐಆರ್ ಆದರೂ ಅವರಿಗೆ ಸುಲಭವಾಗಿ ಜಾಮೀನು ಸಿಗುತ್ತಿದೆ ಎಂದು ದ.ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಳವಳ ವ್ಯಕ್ತಪಡಿಸಿದರು.

ಮಂಗಳೂರಿನಲ್ಲಿ ಶನಿವಾರ (ಮೇ 31) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಮು ಭಾಷಣಗಳನ್ನು ಹತ್ತಿಕ್ಕಲು ಒಂದು ಕಾನೂನು ರೂಪಿಸಬೇಕು. ಯತ್ನಾಳ್ ಹಾಗೂ ಈ ಜಿಲ್ಲೆಯ ಶಾಸಕರು ಪ್ರಚೋದನಕಾರಿ ಭಾಷಣ ಮಾಡುತ್ತಾರೆ. ಭಾಷಣ ಮಾಡಿದವರ ಮೇಲೆ ಎಫ್ಐಆರ್ ಆದರೂ ಕೂಡಲೇ ಜಾಮೀನು ಆಗುತ್ತದೆ. ಈ ರೀತಿ ಕೇಸ್ ಆದರೂ ಅವರಿಗೆ ಸಂಘಟನೆಯ ಬೆಂಬಲ ಇದೆ, ರಾಜಕೀಯ ರಕ್ಷಣೆಯೂ ಇದೆ ಎಂದರು.

ಬಜಪೆ ಚಲೋ ವಿಚಾರದಲ್ಲಿ ಪೊಲೀಸರು ಸ್ಟ್ರಿಕ್ಟ್ ಆಗಿ ಇರಬೇಕಾಗಿತ್ತು. ಈಗಾಗಲೇ ವಿಶೇಷ ಕಾರ್ಯಪಡೆ ರಚನೆ ಮಾಡಿದ್ದೇವೆ. ಮಂಗಳೂರು, ಉಡುಪಿ, ಶಿವಮೊಗ್ಗಕ್ಕೆ ರಚನೆ ಮಾಡಲು ಆದೇಶ ಆಗಿದೆ. ಎಲ್ಲಾ ಕಾನೂನು ಬಾಹಿರ ಚಟುವಟಿಕೆಗೆ ಇತಿಶ್ರೀ ಹಾಡುತ್ತೇವೆ. ಏನು ಮಾಡಬೇಕು ಆ ಕ್ರಮ ಕೈಗೊಳ್ಳುತ್ತೇವೆ ಎಂದರು.

ಕೋಮುಗಲಭೆ, ಕೋಮುಭಾವನೆಯನ್ನು ಕೆರಳಿಸುವವರು ಅಪರಾಧಿ ಚಟುವಟಿಕೆಯಲ್ಲಿ ಭಾಗಿಯಾದವರು. ಯಾವುದೇ ಸಂಘಟನೆಯನ್ನು ಬ್ಯಾನ್ ಮಾಡುವುದಕ್ಕೆ ನಮಗೆ ಅಧಿಕಾರವಿಲ್ಲ ಎಂದು ದಿನೇಶ್ ಗುಂಡೂರಾವ್‌ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅವೈಜ್ಞಾನಿಕ ಕಾಮಗಾರಿಗಳಿಂದ ಗುಡ್ಡ ಕುಸಿತ ವಿಚಾರಕ್ಕೆ ಮಾತನಾಡಿದ ಅವರು, ಜನರು ಅಭಿವೃದ್ಧಿ ಮಾಡುವಾಗ ಪ್ರಕೃತಿ ಜೊತೆ ಎಚ್ಚರಿಕೆಯಿಂದ ಇರುವುದಿಲ್ಲ. ಇದು ಸರಕಾರದ ಸಾರ್ವಜನಿಕರ ಜವಾಬ್ದಾರಿ. ಅಪಾಯಕಾರಿ ಸ್ಥಳಗಳನ್ನು ಗುರುತು ಮಾಡಿ ಎಚ್ಚರಿಕೆ ನೀಡಿರುತ್ತೇವೆ. ಆದರೆ ಅವರನ್ನು ಶಿಫ್ಟ್ ಮಾಡುವುದಕ್ಕೆ ಅವರ ಒಪ್ಪಿಗೆ ಬೇಕು. ನಿರ್ದಿಷ್ಟವಾಗಿ ಯಾವ ಗುಡ್ಡ ಕುಸಿಯುತ್ತದೆ ಎಂದು ಹೇಳಲು ಆಗುವುದಿಲ್ಲ. ಹೀಗಿದ್ದಾಗ ಯಾರನ್ನ ಎಲ್ಲಿಗೆ ಎಂದು ಸ್ಥಳಾಂತರ ಮಾಡುವುದು. ಗುಡ್ಡ ಕುಸಿತ ಬಗ್ಗೆ ಅಷ್ಟು ಸ್ಪಷ್ಟತೆ ಇರುವುದಿಲ್ಲ. ಪರಿಹಾರ ವಂಚಿತರಿಗೆ ಮಾನದಂಡಗಳ ಆಧಾರದ ಮೇಲೆ ಶೀಘ್ರ ಪರಿಹಾರ ನೀಡುತ್ತೇವೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

14 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

14 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

15 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

15 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

15 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

16 hours ago