Featured

ಮಂಗಳೂರು ಪ್ರಚೋದನಾಕಾರಿ ಗೋಡೆ ಬರಹ : ಬಿಜೆಪಿ ಆಡಳಿತದಲ್ಲಿ ಜಿಲ್ಲೆಯ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸಾಕ್ಷಿ: ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ  -Vishwanews24

ಮಂಗಳೂರು ಪ್ರಚೋದನಾಕಾರಿ ಗೋಡೆ ಬರಹ : ಬಿಜೆಪಿ ಆಡಳಿತದಲ್ಲಿ ಜಿಲ್ಲೆಯ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸಾಕ್ಷಿ: ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ  -Vishwanews24

ಮಂಗಳೂರು: ಬಿಜೆಪಿಗರು ಕೇವಲ ಬಾಯಿ ಮಾತಿನಲ್ಲಿ ಪ್ರಚೋದನಾಕಾರಿ ಗೋಡೆ ಬರಹ ಬರೆದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳುವುದನ್ನು ಬಿಟ್ಟು ಕೂಡಲೇ ಆರೋಪಿಗಳನ್ನು ಬಂಧಿಸುವ ಕೆಲಸವನ್ನು ಮಾಡಬೇಕಾಗಿದೆ ಎಂದು ದಕ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಆಗ್ರಹಿಸಿದ್ದಾರೆ.

ನಗರದ ಪ್ರಮುಖ ಗೋಡೆಗಳಲ್ಲಿ ಒಂದು ವಾರದ ಅವಧಿಯಲ್ಲಿ ಎರಡು ಕಡೆಗಳಲ್ಲಿ ಪ್ರಚೋದನಾಕಾರಿ ಬರಹಗಳು ಕಂಡುಬಂದಿದ್ದು, ಇದು ವರೆಗೆ ಯಾರನ್ನೂ ಕೂಡ ಬಂಧಿಸುವ ಕೆಲಸ ಪೊಲೀಸ್ ಇಲಾಖೆಯಿಂದ ನಡೆದಿಲ್ಲ. ಈ ನಡುವೆ ಕೆಲವೊಂದು ಸಂಘಟನೆಗಳು ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸದ್ಯ ಬಿಜೆಪಿ ನೇತೃತ್ವದ ಸರಕಾರ ಇರುವಾಗ ಹಿಂದೂ ಸಂಘಟನೆಗಳು ಯಾರ ವಿರುದ್ದ ಪ್ರತಿಭಟನೆ ಮಾಡಿದ್ದು ಎನ್ನುವುದು ಪ್ರಶ್ನೆಯಾಗಿದೆ.

ಹಿಂದೆಲ್ಲಾ ಎಲ್ಲಾ ಸರಕಾರಗಳು ಇರುವಾಗ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎನ್ನುವ ಬಿಜೆಪಿಗರಿಗೆ ಈಗ ಜಿಲ್ಲೆಯಲ್ಲಿ ಪ್ರತಿನಿತ್ಯ ಕೊಲೆಗಳು, ಪ್ರಚೋದನಾಕಾರಿ ಬರಹಗಳು ಕಂಡುಬರುತ್ತಿರುವ ಸಂದರ್ಭದಲ್ಲಿ ಜಿಲ್ಲೆಯಲ್ಲಿರುವ 7 ಬಿಜೆಪಿ ಶಾಸಕರು, ಸಂಸದರು ಯಾಕ ಮೌನವಾಗಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ಕೊಲೆಯಾಗಿದರೂ ಓಡಿ ಬರುವ ಸಂಸದ ಶೋಭಾ ಕರಂದ್ಲಾಜೆ ಅವರಿಗೆ ಈಗ ಜಿಲ್ಲೆಯಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆಯ ಅರಿವಿಲ್ಲದಿರುವುದು ಖೇದಕರ ಸಂಗತಿ. ಅವರದೇ ಬಿಜೆಪಿ ಸರಕಾರ ಇರುವಾಗ ಆರೋಪಿಗಳನ್ನು ಬಂಧಿಸಲು ಶೋಭಾ ಅವರು ಇತ್ತೀಚೆಗೆ ಉಡುಪಿಯಲ್ಲಿ ಮಾಧ್ಯಮಗಳ ಮುಂದೆ ಆಗ್ರಹಿಸಿದ್ದು ಹಾಸ್ಯಾಸ್ಪದ. ಅವರು ಆಗ್ರಹಿಸುವ ಬದಲು ಕಾರ್ಯಾಚರಣೆ ನಡೆಸಿ ಬಂಧಿಸಲು ಆದೇಶ ಮಾಡುವುದು ಅವರ ಜವಾಬ್ದಾರಿ.

ಪೊಲೀಸ್ ಇಲಾಖೆ ಗೋಡೆ ಬರಹದ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕಾಗಿದ್ದು ಇಲ್ಲವಾದರೆ ಮುಂದೆ ಇಂತಹ ಪ್ರಚೋದನಾಕಾರಿ ಬರಹಗಳು ಜಿಲ್ಲೆಯ ಶಾಂತಿ ಸುವ್ಯವಸ್ಥೆ ಕದಡುವ ಆತಂಕವಿದ್ದು ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಇಲ್ಲವಾದರೆ ಸರಕಾರದ ಅವ್ಯವಸ್ಥೆ ವಿರುದ್ಧ ಉಗ್ರ ಪ್ರತಿಭಟನೆ ಮಾಡಬೇಕಾದಿತು ಎಂದು ಅವರು ಎಚ್ಚರಿಕೆ ನೀಡಿದ್ದಾರೆ

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

18 hours ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

23 hours ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

23 hours ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

24 hours ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

24 hours ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

24 hours ago