ಮಂಗಳೂರು: ಸುಳ್ಳನ್ನು ಸತ್ಯ ಮಾಡಿಸುವುದೇ ಆರ್ಎಸ್ಎಸ್ ತರಬೇತಿಯಾಗಿದೆ. ಪ್ರಚೋದನೆ, ದಂಗೆ ಮಾಡಿಸುವುದು ಸಂಘಪರಿವಾದ ತರಬೇತಿಯಾಗಿದೆ. ಕಾಂಗ್ರೆಸ್ ಬಿಜೆಪಿಯ ಕುತಂತ್ರಕ್ಕೆ ಹೆದರೋದೆ ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರದಲ್ಲಿ ನ್ಯಾಯಾಧೀಶರು ತೀರ್ಮಾನ ಮಾಡುತ್ತಾರೆ. ರಾಜ್ಯಪಾಲರ ಪಕ್ಷಪಾತದ ಬಗ್ಗೆ ಇಡೀ ರಾಜ್ಯಕ್ಕೆ ಗೊತ್ತಾಗಿದೆ. ಅತೀ ಶೀಘ್ರದಲ್ಲಿ ಅನುಮತಿ ನೀಡಿರುವುದು ದಾಖಲೆಯಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ದುರುಪಯೋಗ, ಭ್ರಷ್ಟಚಾರವನ್ನು ಮಾಡಿಲ್ಲ. ಬಿಜೆಪಿಯವರು ಸುಳ್ಳನ್ನು ಸತ್ಯವಾಗಿಸಲು ಹೊರಟಿದ್ದಾರೆ. ಸಿಎಂ ಸಿದ್ಧರಾಮಯ್ಯನವರದ್ದು ಬಹಳ ಸ್ಪಷ್ಟವಾದ ನಡೆ ಎಂದು ತಿಳಿಸಿದರು.
ಮುಂದುವರೆದು ಮಾತನಾಡಿದ ಅವರು, ಆಹಾರ ಸುರಕ್ಷತಾ ಇಲಾಖೆ ಇದೆಯೆಂದೇ ಜನರಿಗೆ ಗೊತ್ತಿರಲಿಲ್ಲ. ನಮ್ಮ ಸರ್ಕಾರ ಬಂದ ಬಳಿಕ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಆಹಾರ ಸುರಕ್ಷತೆಯ ಬಗ್ಗೆ ತಪಾಸಣೆ ನಡೆಸಲು ಸೂಚಿಸಿದ್ದೇವೆ. ಹೋಟೆಲ್, ರೆಸ್ಟೋರೆಂಟ್, ಉತ್ಪಾದನಾ ಕೇಂದ್ರಗಳಲ್ಲೂ ತಪಾಸಣೆ ನಡೆಸಲಾಗುತ್ತಿದೆ. ಮಾಂಸದ ಅಂಗಡಿಗಳಲ್ಲೂ ತಪಾಸಣೆಗಾಗಿ ಡ್ರೈವ್ ಆರಂಭಿಸಿದ್ದೇವೆ. ಪ್ರತಿ ತಿಂಗಳೂ ಮಾಧ್ಯಮಗಳಿಗೆ ವರದಿ ನೀಡಲು ಸೂಚಿಸಿದ್ದೇವೆ ಎಂದು ಮಾಹಿತಿ ನೀಡಿದರು.
ಕಲಬೆರಕೆ, ಅಸುರಕ್ಷತಾ ಆಹಾರಗಳ ಬಗ್ಗೆ ಜನರಿಗೆ ತಿಳಿಯಬೇಕಿದೆ. ಕೇಕ್, ಕೋವಾದಂಹ ವಸ್ತುಗಳ ಬಗ್ಗೆ ತಪಾಸಣೆ ನಡೆಸಿದ್ದೇವೆ. ಕೇಕ್, ಬೇಕರಿ ತಿನಿಸುಗಳ ಮೇಲೆ ತಪಾಸಣಾ ವರದಿ ಬಂದ ಬಳಿಕ ಆರೋಗ್ಯ ಇಲಾಖೆ ಕ್ರಮ ತೆಗೆದುಕೊಳ್ಳಲಿದೆ. ಈಗಾಗಲೇ 4 ಆಹಾರ ಉದ್ಯಮದಾರರ ಲೈಸೆನ್ಸ್ ರದ್ದುಗೊಳಿಸಿದ್ದೇವೆ. ಜನರಿಗೆ ಜಾಗೃತಿ ಮೂಡಿಸುತ್ತಾ, ಕ್ರಮ ಕೈಗೊಳ್ಳುತ್ತಿದ್ದೇವೆ. ನಮ್ಮ ಆಹಾರಕ್ಕೂ ಆರೋಗ್ಯಕ್ಕೆ ನೇರವಾದ ಸಂಬಂಧವಿದೆ ಎಂದರು.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…