ಮಂಗಳೂರು: ಒಂದು ದಿನವೂ ತಪ್ಪದೇ ಪ್ರತಿ ದಿನ ಮೂಕ ಪ್ರಾಣಿಗಳ ಸಂರಕ್ಷಣೆ ಮಾಡುತ್ತಿರುವ ಮಂಗಳೂರಿನ ಈ ಮಹಾತಾಯಿಯ ಹೆಸರು ರಜನಿ ಶೆಟ್ಟಿ. ಆಪತ್ತಿಗೊಳಗಾದ ಪ್ರಾಣಿಗಳ ರಕ್ಷಣೆ ಮಾಡುವ, ಬೀದಿ ನಾಯಿಗಳಿಗೆ ಪ್ರತೀ ದಿನ ಆಹಾರ ನೀಡುವ ಮಂಗಳೂರಿನ ರಜನಿ ಅವರ ಸೇವೆಯನ್ನು ಕ್ರಿಕೆಟಿಗ ವಿ.ವಿ.ಎಸ್. ಲಕ್ಷ್ಮಣ್ ಅವರು ಪ್ರಸಂಶಿಸಿದ್ದಾರೆ.
ತಾನು ಬಾಡಿಗೆ ಮನೆಯಲ್ಲಿದ್ದು ಸಂಕಷ್ಟದ ಜೀವನ ಮಾಡುತ್ತಿದ್ದರೂ, ಪ್ರತಿದಿನ 600 ಬೀದಿನಾಯಿಗಳಿಗೆ ಅನ್ನ ಬಡಿಸುತ್ತಾರೆ. ಈಕೆಯ ವಾಹನದ ಸದ್ದು ಕೇಳಿದರೆ ಸಾಕು ಆಕಳು ಹಸಿವಿನಿಂದ ಹಾಲಿಗಾಗಿ ತಾಯಿಯ ಬಳಿ ಓಡಿ ಬರುವಂತೆ ಎಲ್ಲಾ ಶ್ವಾನಗಳು ಬಂದು ಆಕೆಯನ್ನು ಸುತ್ತುವರಿಯುತ್ತವೆ.
ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ರಜನಿ ಶೆಟ್ಟಿ ಅವರ ಫೋಟೊ ಸಹಿತ ಪೋಸ್ಟ್ ಮಾಡಿರುವ ಲಕ್ಷ್ಮಣ್ ಅವರು, ಮಂಗಳೂರಿನ ರಜನಿ ಅವರು ನೂರಾರು ಬೀದಿನಾಯಿಗಳಿಗೆ ಆಹಾರ ನೀಡುತ್ತಿದ್ದಾರೆ.
ಪ್ರಾಣಿಗಳು ಒಂದು ವೇಳೆ ಆಪತ್ತಿಗೆ ಒಳಗಾದರೆ ಅವುಗಳ ರಕ್ಷಣೆಗೂ ಅವರು ಧಾವಿಸುತ್ತಾರೆ.ಪ್ರಾಣಿಗಳು ಒಂದೊಮ್ಮೆ ಬಾವಿಗೆ ಬಿದ್ದರೆ ಬಾವಿಗಳಿದು ಪ್ರಾಣಿಗಳ ರಕ್ಷಣೆ ಮಾಡುತ್ತಿದ್ದಾರೆ. ಅವರ ಸೇವೆಗೆ ಭೇಷ್ ಎನ್ನಲೇಬೇಕುಎಂದು ಟ್ವೀಟ್ ಮಾಡಿದ್ದಾರೆ.
ತಾನು ಊಟ ಮಾಡದಿದ್ದರೂ ಶ್ವಾನಗಳು ಹಸಿವಿನಿಂದ ಇರದ ಹಾಗೆ ರಜನಿ ಶೆಟ್ಟಿ ನೋಡಿಕೊಂಡಿದ್ದಾರೆ. ಹುಷಾರಿಲ್ಲದ ಸಂದರ್ಭದಲ್ಲೂ ತನ್ನ ಶ್ವಾನ ಸೇವೆಯನ್ನು ರಜನಿ ಶೆಟ್ಟಿ ಬಿಟ್ಟಿಲ್ಲ. ಒಂದು ದಿನ ಹೋಗದಿದ್ದರೆ ಶ್ವಾನಗಳು ದಾರಿ ಕಾಯುತ್ತಿರುತ್ತವೆ ಅಂತಾ ಹೇಳುತ್ತಾರೆ ರಜನಿ ಶೆಟ್ಟಿ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…