Featured

ಮಂಗಳೂರು: ಪ್ರತಿದಿನ 600 ಬೀದಿ ನಾಯಿಗಳನ್ನು ಪೋಷಿಸುವ ರಜನಿ ಶೆಟ್ಟಿಯ ಪ್ರಾಣಿ ಸೇವೆಗೆ ಮಾಜಿ ಕ್ರಿಕೆಟಿಗ ಲಕ್ಷ್ಮಣ್ ಮೆಚ್ಚುಗೆ  – Vishwanews24

ಮಂಗಳೂರು: ಪ್ರತಿದಿನ 600 ಬೀದಿ ನಾಯಿಗಳನ್ನು ಪೋಷಿಸುವ ರಜನಿ ಶೆಟ್ಟಿಪ್ರಾಣಿ ಸೇವೆಗೆ ಮಾಜಿ ಕ್ರಿಕೆಟಿಗ ಲಕ್ಷ್ಮಣ್ ಮೆಚ್ಚುಗೆ  – Vishwanews24

ಮಂಗಳೂರು: ಒಂದು ದಿನವೂ ತಪ್ಪದೇ ಪ್ರತಿ ದಿನ ಮೂಕ ಪ್ರಾಣಿಗಳ ಸಂರಕ್ಷಣೆ ಮಾಡುತ್ತಿರುವ ಮಂಗಳೂರಿನ ಈ ಮಹಾತಾಯಿಯ ಹೆಸರು ರಜನಿ ಶೆಟ್ಟಿ. ಆಪತ್ತಿಗೊಳಗಾದ ಪ್ರಾಣಿಗಳ ರಕ್ಷಣೆ ಮಾಡುವ, ಬೀದಿ ನಾಯಿಗಳಿಗೆ ಪ್ರತೀ ದಿನ ಆಹಾರ ನೀಡುವ ಮಂಗಳೂರಿನ ರಜನಿ ಅವರ ಸೇವೆಯನ್ನು ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಅವರು ಪ್ರಸಂಶಿಸಿದ್ದಾರೆ.

ತಾನು ಬಾಡಿಗೆ ಮನೆಯಲ್ಲಿದ್ದು ಸಂಕಷ್ಟದ ಜೀವನ ಮಾಡುತ್ತಿದ್ದರೂ, ಪ್ರತಿದಿನ 600 ಬೀದಿನಾಯಿಗಳಿಗೆ ಅನ್ನ ಬಡಿಸುತ್ತಾರೆ. ಈಕೆಯ ವಾಹನದ ಸದ್ದು ಕೇಳಿದರೆ ಸಾಕು ಆಕಳು ಹಸಿವಿನಿಂದ ಹಾಲಿಗಾಗಿ ತಾಯಿಯ ಬಳಿ ಓಡಿ ಬರುವಂತೆ ಎಲ್ಲಾ ಶ್ವಾನಗಳು ಬಂದು ಆಕೆಯನ್ನು ಸುತ್ತುವರಿಯುತ್ತವೆ.

ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಮೆಚ್ಚುಗೆ

ರಜನಿ ಶೆಟ್ಟಿಯವರ ಈ ಸಾಧನೆಗೆ ಮತ್ತು ಮಾತೃ ಹೃದಯಕ್ಕೆ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಜನಿ ಶೆಟ್ಟಿಯವರ ಸಾಧನೆಗಾಥೆಯನ್ನು ಟ್ವಿಟ್ಟರ್‌ನಲ್ಲಿ ಶೇರ್ ಮಾಡಿದ ಲಕ್ಷ್ಮಣ್, ಮಂಗಳೂರು ಮೂಲದ ರಜನಿ ಶೆಟ್ಟಿ ಪ್ರತಿ ದಿನ ಸ್ವತಃ ಅಡಿಗೆ ಮಾಡಿ ನೂರಾರು ಪ್ರಾಣಿಗಳಿಗೆ ಆಹಾರ ನೀಡುತ್ತಾರೆ. ಬಾವಿಗಳಿಗೆ ಪ್ರಾಣಿಗಳು ಬಿದ್ದರೆ ಬಾವಿಗಿಳಿದು ರಕ್ಷಣೆ ಮಾಡುತ್ತಾರೆ. ಅನಾರೋಗ್ಯ ಹೊಂದಿದ, ಗಾಯಗೊಂಡ ಬೀದಿ ನಾಯಿಗಳಿಗೆ ಆರೈಕೆ ಮಾಡುತ್ತಾರೆ. ರಜನಿ ಶೆಟ್ಟಿಯವರ ಅದ್ಭುತ ಸೇವೆಗೆ ತಲೆ ಬಾಗುತ್ತೇನೆ ಎಂದು ವಿವಿಎಸ್ ಲಕ್ಷ್ಮಣ್ ಟ್ವೀಟ್ ಮಾಡಿದ್ದಾರೆ.

ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ರಜನಿ ಶೆಟ್ಟಿ ಅವರ ಫೋಟೊ ಸಹಿತ ಪೋಸ್ಟ್‌ ಮಾಡಿರುವ ಲಕ್ಷ್ಮಣ್‌ ಅವರು, ಮಂಗಳೂರಿನ ರಜನಿ ಅವರು ನೂರಾರು ಬೀದಿನಾಯಿಗಳಿಗೆ ಆಹಾರ ನೀಡುತ್ತಿದ್ದಾರೆ.

ಪ್ರಾಣಿಗಳು ಒಂದು ವೇಳೆ ಆಪತ್ತಿಗೆ ಒಳಗಾದರೆ ಅವುಗಳ ರಕ್ಷಣೆಗೂ ಅವರು ಧಾವಿಸುತ್ತಾರೆ.ಪ್ರಾಣಿಗಳು ಒಂದೊಮ್ಮೆ ಬಾವಿಗೆ ಬಿದ್ದರೆ ಬಾವಿಗಳಿದು ಪ್ರಾಣಿಗಳ ರಕ್ಷಣೆ ಮಾಡುತ್ತಿದ್ದಾರೆ. ಅವರ ಸೇವೆಗೆ ಭೇಷ್‌ ಎನ್ನಲೇಬೇಕುಎಂದು ಟ್ವೀಟ್‌ ಮಾಡಿದ್ದಾರೆ.

ತಾನು ಊಟ ಮಾಡದಿದ್ದರೂ ಶ್ವಾನಗಳು ಹಸಿವಿನಿಂದ ಇರದ ಹಾಗೆ ರಜನಿ ಶೆಟ್ಟಿ ನೋಡಿಕೊಂಡಿದ್ದಾರೆ. ಹುಷಾರಿಲ್ಲದ ಸಂದರ್ಭದಲ್ಲೂ ತನ್ನ ಶ್ವಾನ ಸೇವೆಯನ್ನು ರಜನಿ ಶೆಟ್ಟಿ ಬಿಟ್ಟಿಲ್ಲ. ಒಂದು ದಿನ ಹೋಗದಿದ್ದರೆ ಶ್ವಾನಗಳು ದಾರಿ ಕಾಯುತ್ತಿರುತ್ತವೆ ಅಂತಾ ಹೇಳುತ್ತಾರೆ ರಜನಿ ಶೆಟ್ಟಿ.

Vishwa News 24

Recent Posts

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು -vishwanews24

ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…

17 hours ago

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

19 hours ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

19 hours ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

20 hours ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

20 hours ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

20 hours ago