ಮಂಗಳೂರು: ಒಂದು ದಿನವೂ ತಪ್ಪದೇ ಪ್ರತಿ ದಿನ ಮೂಕ ಪ್ರಾಣಿಗಳ ಸಂರಕ್ಷಣೆ ಮಾಡುತ್ತಿರುವ ಮಂಗಳೂರಿನ ಈ ಮಹಾತಾಯಿಯ ಹೆಸರು ರಜನಿ ಶೆಟ್ಟಿ. ಆಪತ್ತಿಗೊಳಗಾದ ಪ್ರಾಣಿಗಳ ರಕ್ಷಣೆ ಮಾಡುವ, ಬೀದಿ ನಾಯಿಗಳಿಗೆ ಪ್ರತೀ ದಿನ ಆಹಾರ ನೀಡುವ ಮಂಗಳೂರಿನ ರಜನಿ ಅವರ ಸೇವೆಯನ್ನು ಕ್ರಿಕೆಟಿಗ ವಿ.ವಿ.ಎಸ್. ಲಕ್ಷ್ಮಣ್ ಅವರು ಪ್ರಸಂಶಿಸಿದ್ದಾರೆ.
ತಾನು ಬಾಡಿಗೆ ಮನೆಯಲ್ಲಿದ್ದು ಸಂಕಷ್ಟದ ಜೀವನ ಮಾಡುತ್ತಿದ್ದರೂ, ಪ್ರತಿದಿನ 600 ಬೀದಿನಾಯಿಗಳಿಗೆ ಅನ್ನ ಬಡಿಸುತ್ತಾರೆ. ಈಕೆಯ ವಾಹನದ ಸದ್ದು ಕೇಳಿದರೆ ಸಾಕು ಆಕಳು ಹಸಿವಿನಿಂದ ಹಾಲಿಗಾಗಿ ತಾಯಿಯ ಬಳಿ ಓಡಿ ಬರುವಂತೆ ಎಲ್ಲಾ ಶ್ವಾನಗಳು ಬಂದು ಆಕೆಯನ್ನು ಸುತ್ತುವರಿಯುತ್ತವೆ.
ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ರಜನಿ ಶೆಟ್ಟಿ ಅವರ ಫೋಟೊ ಸಹಿತ ಪೋಸ್ಟ್ ಮಾಡಿರುವ ಲಕ್ಷ್ಮಣ್ ಅವರು, ಮಂಗಳೂರಿನ ರಜನಿ ಅವರು ನೂರಾರು ಬೀದಿನಾಯಿಗಳಿಗೆ ಆಹಾರ ನೀಡುತ್ತಿದ್ದಾರೆ.
ಪ್ರಾಣಿಗಳು ಒಂದು ವೇಳೆ ಆಪತ್ತಿಗೆ ಒಳಗಾದರೆ ಅವುಗಳ ರಕ್ಷಣೆಗೂ ಅವರು ಧಾವಿಸುತ್ತಾರೆ.ಪ್ರಾಣಿಗಳು ಒಂದೊಮ್ಮೆ ಬಾವಿಗೆ ಬಿದ್ದರೆ ಬಾವಿಗಳಿದು ಪ್ರಾಣಿಗಳ ರಕ್ಷಣೆ ಮಾಡುತ್ತಿದ್ದಾರೆ. ಅವರ ಸೇವೆಗೆ ಭೇಷ್ ಎನ್ನಲೇಬೇಕುಎಂದು ಟ್ವೀಟ್ ಮಾಡಿದ್ದಾರೆ.
ತಾನು ಊಟ ಮಾಡದಿದ್ದರೂ ಶ್ವಾನಗಳು ಹಸಿವಿನಿಂದ ಇರದ ಹಾಗೆ ರಜನಿ ಶೆಟ್ಟಿ ನೋಡಿಕೊಂಡಿದ್ದಾರೆ. ಹುಷಾರಿಲ್ಲದ ಸಂದರ್ಭದಲ್ಲೂ ತನ್ನ ಶ್ವಾನ ಸೇವೆಯನ್ನು ರಜನಿ ಶೆಟ್ಟಿ ಬಿಟ್ಟಿಲ್ಲ. ಒಂದು ದಿನ ಹೋಗದಿದ್ದರೆ ಶ್ವಾನಗಳು ದಾರಿ ಕಾಯುತ್ತಿರುತ್ತವೆ ಅಂತಾ ಹೇಳುತ್ತಾರೆ ರಜನಿ ಶೆಟ್ಟಿ.
ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…
ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…
ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…
ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…
ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…
ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…