Featured

ಮಂಗಳೂರು: ಪ್ರತಿದಿನ 600 ಬೀದಿ ನಾಯಿಗಳನ್ನು ಪೋಷಿಸುವ ರಜನಿ ಶೆಟ್ಟಿಯ ಪ್ರಾಣಿ ಸೇವೆಗೆ ಮಾಜಿ ಕ್ರಿಕೆಟಿಗ ಲಕ್ಷ್ಮಣ್ ಮೆಚ್ಚುಗೆ  – Vishwanews24

ಮಂಗಳೂರು: ಪ್ರತಿದಿನ 600 ಬೀದಿ ನಾಯಿಗಳನ್ನು ಪೋಷಿಸುವ ರಜನಿ ಶೆಟ್ಟಿಪ್ರಾಣಿ ಸೇವೆಗೆ ಮಾಜಿ ಕ್ರಿಕೆಟಿಗ ಲಕ್ಷ್ಮಣ್ ಮೆಚ್ಚುಗೆ  – Vishwanews24

ಮಂಗಳೂರು: ಒಂದು ದಿನವೂ ತಪ್ಪದೇ ಪ್ರತಿ ದಿನ ಮೂಕ ಪ್ರಾಣಿಗಳ ಸಂರಕ್ಷಣೆ ಮಾಡುತ್ತಿರುವ ಮಂಗಳೂರಿನ ಈ ಮಹಾತಾಯಿಯ ಹೆಸರು ರಜನಿ ಶೆಟ್ಟಿ. ಆಪತ್ತಿಗೊಳಗಾದ ಪ್ರಾಣಿಗಳ ರಕ್ಷಣೆ ಮಾಡುವ, ಬೀದಿ ನಾಯಿಗಳಿಗೆ ಪ್ರತೀ ದಿನ ಆಹಾರ ನೀಡುವ ಮಂಗಳೂರಿನ ರಜನಿ ಅವರ ಸೇವೆಯನ್ನು ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಅವರು ಪ್ರಸಂಶಿಸಿದ್ದಾರೆ.

ತಾನು ಬಾಡಿಗೆ ಮನೆಯಲ್ಲಿದ್ದು ಸಂಕಷ್ಟದ ಜೀವನ ಮಾಡುತ್ತಿದ್ದರೂ, ಪ್ರತಿದಿನ 600 ಬೀದಿನಾಯಿಗಳಿಗೆ ಅನ್ನ ಬಡಿಸುತ್ತಾರೆ. ಈಕೆಯ ವಾಹನದ ಸದ್ದು ಕೇಳಿದರೆ ಸಾಕು ಆಕಳು ಹಸಿವಿನಿಂದ ಹಾಲಿಗಾಗಿ ತಾಯಿಯ ಬಳಿ ಓಡಿ ಬರುವಂತೆ ಎಲ್ಲಾ ಶ್ವಾನಗಳು ಬಂದು ಆಕೆಯನ್ನು ಸುತ್ತುವರಿಯುತ್ತವೆ.

ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಮೆಚ್ಚುಗೆ

ರಜನಿ ಶೆಟ್ಟಿಯವರ ಈ ಸಾಧನೆಗೆ ಮತ್ತು ಮಾತೃ ಹೃದಯಕ್ಕೆ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಜನಿ ಶೆಟ್ಟಿಯವರ ಸಾಧನೆಗಾಥೆಯನ್ನು ಟ್ವಿಟ್ಟರ್‌ನಲ್ಲಿ ಶೇರ್ ಮಾಡಿದ ಲಕ್ಷ್ಮಣ್, ಮಂಗಳೂರು ಮೂಲದ ರಜನಿ ಶೆಟ್ಟಿ ಪ್ರತಿ ದಿನ ಸ್ವತಃ ಅಡಿಗೆ ಮಾಡಿ ನೂರಾರು ಪ್ರಾಣಿಗಳಿಗೆ ಆಹಾರ ನೀಡುತ್ತಾರೆ. ಬಾವಿಗಳಿಗೆ ಪ್ರಾಣಿಗಳು ಬಿದ್ದರೆ ಬಾವಿಗಿಳಿದು ರಕ್ಷಣೆ ಮಾಡುತ್ತಾರೆ. ಅನಾರೋಗ್ಯ ಹೊಂದಿದ, ಗಾಯಗೊಂಡ ಬೀದಿ ನಾಯಿಗಳಿಗೆ ಆರೈಕೆ ಮಾಡುತ್ತಾರೆ. ರಜನಿ ಶೆಟ್ಟಿಯವರ ಅದ್ಭುತ ಸೇವೆಗೆ ತಲೆ ಬಾಗುತ್ತೇನೆ ಎಂದು ವಿವಿಎಸ್ ಲಕ್ಷ್ಮಣ್ ಟ್ವೀಟ್ ಮಾಡಿದ್ದಾರೆ.

ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ರಜನಿ ಶೆಟ್ಟಿ ಅವರ ಫೋಟೊ ಸಹಿತ ಪೋಸ್ಟ್‌ ಮಾಡಿರುವ ಲಕ್ಷ್ಮಣ್‌ ಅವರು, ಮಂಗಳೂರಿನ ರಜನಿ ಅವರು ನೂರಾರು ಬೀದಿನಾಯಿಗಳಿಗೆ ಆಹಾರ ನೀಡುತ್ತಿದ್ದಾರೆ.

ಪ್ರಾಣಿಗಳು ಒಂದು ವೇಳೆ ಆಪತ್ತಿಗೆ ಒಳಗಾದರೆ ಅವುಗಳ ರಕ್ಷಣೆಗೂ ಅವರು ಧಾವಿಸುತ್ತಾರೆ.ಪ್ರಾಣಿಗಳು ಒಂದೊಮ್ಮೆ ಬಾವಿಗೆ ಬಿದ್ದರೆ ಬಾವಿಗಳಿದು ಪ್ರಾಣಿಗಳ ರಕ್ಷಣೆ ಮಾಡುತ್ತಿದ್ದಾರೆ. ಅವರ ಸೇವೆಗೆ ಭೇಷ್‌ ಎನ್ನಲೇಬೇಕುಎಂದು ಟ್ವೀಟ್‌ ಮಾಡಿದ್ದಾರೆ.

ತಾನು ಊಟ ಮಾಡದಿದ್ದರೂ ಶ್ವಾನಗಳು ಹಸಿವಿನಿಂದ ಇರದ ಹಾಗೆ ರಜನಿ ಶೆಟ್ಟಿ ನೋಡಿಕೊಂಡಿದ್ದಾರೆ. ಹುಷಾರಿಲ್ಲದ ಸಂದರ್ಭದಲ್ಲೂ ತನ್ನ ಶ್ವಾನ ಸೇವೆಯನ್ನು ರಜನಿ ಶೆಟ್ಟಿ ಬಿಟ್ಟಿಲ್ಲ. ಒಂದು ದಿನ ಹೋಗದಿದ್ದರೆ ಶ್ವಾನಗಳು ದಾರಿ ಕಾಯುತ್ತಿರುತ್ತವೆ ಅಂತಾ ಹೇಳುತ್ತಾರೆ ರಜನಿ ಶೆಟ್ಟಿ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

6 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

6 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

7 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

10 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

10 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

10 hours ago