ಮಂಗಳೂರು: ಒಂದು ದಿನವೂ ತಪ್ಪದೇ ಪ್ರತಿ ದಿನ ಮೂಕ ಪ್ರಾಣಿಗಳ ಸಂರಕ್ಷಣೆ ಮಾಡುತ್ತಿರುವ ಮಂಗಳೂರಿನ ಈ ಮಹಾತಾಯಿಯ ಹೆಸರು ರಜನಿ ಶೆಟ್ಟಿ. ಆಪತ್ತಿಗೊಳಗಾದ ಪ್ರಾಣಿಗಳ ರಕ್ಷಣೆ ಮಾಡುವ, ಬೀದಿ ನಾಯಿಗಳಿಗೆ ಪ್ರತೀ ದಿನ ಆಹಾರ ನೀಡುವ ಮಂಗಳೂರಿನ ರಜನಿ ಅವರ ಸೇವೆಯನ್ನು ಕ್ರಿಕೆಟಿಗ ವಿ.ವಿ.ಎಸ್. ಲಕ್ಷ್ಮಣ್ ಅವರು ಪ್ರಸಂಶಿಸಿದ್ದಾರೆ.
ತಾನು ಬಾಡಿಗೆ ಮನೆಯಲ್ಲಿದ್ದು ಸಂಕಷ್ಟದ ಜೀವನ ಮಾಡುತ್ತಿದ್ದರೂ, ಪ್ರತಿದಿನ 600 ಬೀದಿನಾಯಿಗಳಿಗೆ ಅನ್ನ ಬಡಿಸುತ್ತಾರೆ. ಈಕೆಯ ವಾಹನದ ಸದ್ದು ಕೇಳಿದರೆ ಸಾಕು ಆಕಳು ಹಸಿವಿನಿಂದ ಹಾಲಿಗಾಗಿ ತಾಯಿಯ ಬಳಿ ಓಡಿ ಬರುವಂತೆ ಎಲ್ಲಾ ಶ್ವಾನಗಳು ಬಂದು ಆಕೆಯನ್ನು ಸುತ್ತುವರಿಯುತ್ತವೆ.
ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ರಜನಿ ಶೆಟ್ಟಿ ಅವರ ಫೋಟೊ ಸಹಿತ ಪೋಸ್ಟ್ ಮಾಡಿರುವ ಲಕ್ಷ್ಮಣ್ ಅವರು, ಮಂಗಳೂರಿನ ರಜನಿ ಅವರು ನೂರಾರು ಬೀದಿನಾಯಿಗಳಿಗೆ ಆಹಾರ ನೀಡುತ್ತಿದ್ದಾರೆ.
ಪ್ರಾಣಿಗಳು ಒಂದು ವೇಳೆ ಆಪತ್ತಿಗೆ ಒಳಗಾದರೆ ಅವುಗಳ ರಕ್ಷಣೆಗೂ ಅವರು ಧಾವಿಸುತ್ತಾರೆ.ಪ್ರಾಣಿಗಳು ಒಂದೊಮ್ಮೆ ಬಾವಿಗೆ ಬಿದ್ದರೆ ಬಾವಿಗಳಿದು ಪ್ರಾಣಿಗಳ ರಕ್ಷಣೆ ಮಾಡುತ್ತಿದ್ದಾರೆ. ಅವರ ಸೇವೆಗೆ ಭೇಷ್ ಎನ್ನಲೇಬೇಕುಎಂದು ಟ್ವೀಟ್ ಮಾಡಿದ್ದಾರೆ.
ತಾನು ಊಟ ಮಾಡದಿದ್ದರೂ ಶ್ವಾನಗಳು ಹಸಿವಿನಿಂದ ಇರದ ಹಾಗೆ ರಜನಿ ಶೆಟ್ಟಿ ನೋಡಿಕೊಂಡಿದ್ದಾರೆ. ಹುಷಾರಿಲ್ಲದ ಸಂದರ್ಭದಲ್ಲೂ ತನ್ನ ಶ್ವಾನ ಸೇವೆಯನ್ನು ರಜನಿ ಶೆಟ್ಟಿ ಬಿಟ್ಟಿಲ್ಲ. ಒಂದು ದಿನ ಹೋಗದಿದ್ದರೆ ಶ್ವಾನಗಳು ದಾರಿ ಕಾಯುತ್ತಿರುತ್ತವೆ ಅಂತಾ ಹೇಳುತ್ತಾರೆ ರಜನಿ ಶೆಟ್ಟಿ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…