ಮಂಗಳೂರು (Vishwanews24): ದಕ್ಷಿಣ ಭಾರತದ ರಾಜ್ಯಗಳನ್ನೊಳಗೊಂಡ ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿರುವ ಸಂಸದ ಡಿ.ಕೆ. ಸುರೇಶ್ ವಿರುದ್ಧ ನೀಡಲಾಗಿದ್ದ ದೂರನ್ನು ಮಂಗಳೂರಿನ 2ನೇ ಜೆಎಂಎಫ್ಸಿ ನ್ಯಾಯಾಲಯ ಸ್ವೀಕರಿಸಿದ್ದು, ವಿಚಾರಣೆಯನ್ನು ಫೆ. 12ಕ್ಕೆ ಮುಂದೂಡಿದೆ.
ಸುರೇಶ್ ವಿರುದ್ಧ ಎಫ್ಐಆರ್ ದಾಖಲಿಸಲು ಪೊಲೀಸರಿಗೆ ನಿರ್ದೇಶಿಸುವಂತೆ ದೂರುದಾರ, ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅವರ ಪರವಾಗಿ ವಕೀಲ ಮೋಹನ್ ರಾಜ್ ಕೆ.ಆರ್. ಬುಧವಾರ ವಾದ ಮಂಡಿಸಿದ್ದರು.
ಸುರೇಶ್ ಸಂಸದರಾಗಿರುವ ಕಾರಣ ಪ್ರಸ್ತುತ ನ್ಯಾಯಾಲಯದ ವ್ಯಾಪ್ತಿ ಬಗ್ಗೆ ಮುಂದಿನ ದಿನಾಂಕದಲ್ಲಿ ವಿಚಾರಣೆ ಸಾಧ್ಯತೆ ಇದೆ. ಸೆಕ್ಷನ್ 124 ಎ ಅಡಿ ಕ್ರಮ ಕೈಗೊಳ್ಳುವಂತೆ ದೂರು ಅರ್ಜಿ ಸಲ್ಲಿಸಿದ್ದರು. ಅಲ್ಲದೆ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ಮಂಗಳೂರು ಉತ್ತರ ಠಾಣೆಯ ಠಾಣಾಧಿಕಾರಿಗೆ ಆದೇಶಿಸುವಂತೆ ಮನವಿ ಮಾಡಿ ಮಾಡಿದ್ದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…