ಮಂಗಳೂರು: ಪ್ರಥಮ ವಿದ್ಯಾರ್ಥಿ ತುಳು ಸಮ್ಮೇಳನದ ಲಾಂಛನವನ್ನು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ನಗರದ ವಿಶ್ವವಿದ್ಯಾಲಯದ ಕಾಲೇಜು ಸಭಾಂಗಣದಲ್ಲಿ ಗುರುವಾರ ಅನಾವರಣಗೊಳಿಸಿದರು.
ಬಳಿಕ ಮಾತನಾಡಿದ ಅವರು, ‘ಸಮ್ಮೇಳನಗಳನ್ನು ಹೆಚ್ಚಾಗಿ ವಿದ್ವಾಂಸರು, ಸಂಶೋಧಕರು, ಹಿರಿಯರನ್ನು ಉದ್ದೇಶಿಸಿ ಮಾಡುತ್ತಾರೆ. ಆದರೆ, ವಿದ್ಯಾರ್ಥಿಗಳನ್ನು ಕೇಂದ್ರೀಕರಿಸಿಕೊಂಡು ಸಮ್ಮೇಳನ ಆಯೋಜಿಸಿರುವುದು ಅಭಿನಂದನಾರ್ಹ. ವಿದ್ಯಾರ್ಥಿಗಳೇ ಭವಿಷ್ಯದ ಸಂಶೋಧಕರು, ಬರಹಗಾರರು, ಸಾಧಕರಾಗಿದ್ದಾರೆ. ಅವರಿಗೆ ನಾವು ಪ್ರೇರಣೆ ನೀಡಬೇಕು’ ಎಂದು ಶ್ಲಾಘಿಸಿದರು.
‘ಸಮ್ಮೇಳನ ಲಾಂಛನದ ಪರಿಕಲ್ಪನೆಯೂ ಮೌಲ್ಯಯುತವಾಗಿದ್ದು, ಚೆನ್ನಾಗಿ ವಿನ್ಯಾಸ ಮಾಡಿದ್ದಾರೆ. ಲಾಂಛನದಲ್ಲಿರುವ ಭೂತಕೋಲ, ಯಕ್ಷಗಾನ, ಪರಿಸರ ಪ್ರೇಮ, ಕಹಳೆ, ಹುಲಿವೇಷವೆಲ್ಲವೂ ತುಳು ಸಂಸ್ಕೃತಿಯನ್ನು ಸಮಗ್ರವಾಗಿ ಬಿಂಬಿಸಿವೆ. ತುಳು ಸಂಸ್ಕೃತಿ, ಅಸ್ಮಿತೆಯ ಉಳಿವಿನ ನಿಟ್ಟಿನಲ್ಲಿ ಸಮ್ಮೇಳನವು ಅರ್ಥಪೂರ್ಣ ಹಾಗೂ ಚಾರಿತ್ರಿಕವಾಗಲಿದೆ’ ಎಂದರು.
‘ವಿದ್ಯಾರ್ಥಿ ಸಮ್ಮೇಳನವು ವಿಶ್ವ ಸಮ್ಮೇಳನದ ದಿಶೆಯನ್ನು ತೋರಿಸಬೇಕು. ನಾನೂ, ಮಂಗಳೂರು ವಿಶ್ವವಿದ್ಯಾಲಯದ ಮೊದಲ ತೌಳವ ಕುಲಪತಿ, ಹೀಗಾಗಿ ನನಗೂ ಜವಾಬ್ದಾರಿ ಹೆಚ್ಚಿದ್ದು, ನಿಷ್ಠೆಯಿಂದ ನಿಭಾಯಿಸುತ್ತೇನೆ’ ಎಂದು ಭರವಸೆ ನೀಡಿದರು.
ತುಳು ಪರಿಷತ್ ವತಿಯಿಂದ ಮಂಗಳೂರು ವಿಶ್ವವಿದ್ಯಾಲಯದ ಸಹಭಾಗಿತ್ವದಲ್ಲಿ 2020ರ ಜನವರಿ 16ರಂದು ನಗರದಲ್ಲಿ ಸಮ್ಮೇಳನ ನಡೆಯಲಿದೆ. ಲಾಂಛನವನ್ನು ಮಂಗಳೂರಿನ ಸ್ವಾತಿ ಕುಮಾರ್ ರೂಪಿಸಿದ್ದಾರೆ.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯರಾದ ಮಮತಾ ಗಟ್ಟಿ, ವಿಶ್ವವಿದ್ಯಾಲಯ ಕಾಲೇಜಿನ ಪ್ರಾಂಶುಪಾಲ ಡಾ.ಉದಯಕುಮಾರ್ ಇರ್ವತ್ತೂರು, ತುಳು ವಿಭಾಗದ ಸಂಚಾಲಕ ಡಾ. ಮಾಧವ, ತುಳು ಪರಿಷತ್ ವಿದ್ಯಾರ್ಥಿ ಸಮ್ಮೇಳನದ ಗೌರವಾಧ್ಯಕ್ಷ ಸ್ವರ್ಣ ಸುಂದರ, ಅಧ್ಯಕ್ಷ ಡಾ. ಪ್ರಭಾಕರ ನೀರುಮಾರ್ಗ, ಪ್ರಮುಖರಾದ ಶಿವಾನಂದ ಕರ್ಕೇರ, ಸುಭೋದಯ ಆಳ್ವಾ, ತಾರನಾಥ ಕಾಪಿಕಾಡ್, ಡಾ.ವಾಸುದೇವ ಬೆಳ್ಳೆ ಇದ್ದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…