ಮಂಗಳೂರು: ಪ್ರಥಮ ವಿದ್ಯಾರ್ಥಿ ತುಳು ಸಮ್ಮೇಳನದ ಲಾಂಛನವನ್ನು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ನಗರದ ವಿಶ್ವವಿದ್ಯಾಲಯದ ಕಾಲೇಜು ಸಭಾಂಗಣದಲ್ಲಿ ಗುರುವಾರ ಅನಾವರಣಗೊಳಿಸಿದರು.
ಬಳಿಕ ಮಾತನಾಡಿದ ಅವರು, ‘ಸಮ್ಮೇಳನಗಳನ್ನು ಹೆಚ್ಚಾಗಿ ವಿದ್ವಾಂಸರು, ಸಂಶೋಧಕರು, ಹಿರಿಯರನ್ನು ಉದ್ದೇಶಿಸಿ ಮಾಡುತ್ತಾರೆ. ಆದರೆ, ವಿದ್ಯಾರ್ಥಿಗಳನ್ನು ಕೇಂದ್ರೀಕರಿಸಿಕೊಂಡು ಸಮ್ಮೇಳನ ಆಯೋಜಿಸಿರುವುದು ಅಭಿನಂದನಾರ್ಹ. ವಿದ್ಯಾರ್ಥಿಗಳೇ ಭವಿಷ್ಯದ ಸಂಶೋಧಕರು, ಬರಹಗಾರರು, ಸಾಧಕರಾಗಿದ್ದಾರೆ. ಅವರಿಗೆ ನಾವು ಪ್ರೇರಣೆ ನೀಡಬೇಕು’ ಎಂದು ಶ್ಲಾಘಿಸಿದರು.
‘ಸಮ್ಮೇಳನ ಲಾಂಛನದ ಪರಿಕಲ್ಪನೆಯೂ ಮೌಲ್ಯಯುತವಾಗಿದ್ದು, ಚೆನ್ನಾಗಿ ವಿನ್ಯಾಸ ಮಾಡಿದ್ದಾರೆ. ಲಾಂಛನದಲ್ಲಿರುವ ಭೂತಕೋಲ, ಯಕ್ಷಗಾನ, ಪರಿಸರ ಪ್ರೇಮ, ಕಹಳೆ, ಹುಲಿವೇಷವೆಲ್ಲವೂ ತುಳು ಸಂಸ್ಕೃತಿಯನ್ನು ಸಮಗ್ರವಾಗಿ ಬಿಂಬಿಸಿವೆ. ತುಳು ಸಂಸ್ಕೃತಿ, ಅಸ್ಮಿತೆಯ ಉಳಿವಿನ ನಿಟ್ಟಿನಲ್ಲಿ ಸಮ್ಮೇಳನವು ಅರ್ಥಪೂರ್ಣ ಹಾಗೂ ಚಾರಿತ್ರಿಕವಾಗಲಿದೆ’ ಎಂದರು.
‘ವಿದ್ಯಾರ್ಥಿ ಸಮ್ಮೇಳನವು ವಿಶ್ವ ಸಮ್ಮೇಳನದ ದಿಶೆಯನ್ನು ತೋರಿಸಬೇಕು. ನಾನೂ, ಮಂಗಳೂರು ವಿಶ್ವವಿದ್ಯಾಲಯದ ಮೊದಲ ತೌಳವ ಕುಲಪತಿ, ಹೀಗಾಗಿ ನನಗೂ ಜವಾಬ್ದಾರಿ ಹೆಚ್ಚಿದ್ದು, ನಿಷ್ಠೆಯಿಂದ ನಿಭಾಯಿಸುತ್ತೇನೆ’ ಎಂದು ಭರವಸೆ ನೀಡಿದರು.
ತುಳು ಪರಿಷತ್ ವತಿಯಿಂದ ಮಂಗಳೂರು ವಿಶ್ವವಿದ್ಯಾಲಯದ ಸಹಭಾಗಿತ್ವದಲ್ಲಿ 2020ರ ಜನವರಿ 16ರಂದು ನಗರದಲ್ಲಿ ಸಮ್ಮೇಳನ ನಡೆಯಲಿದೆ. ಲಾಂಛನವನ್ನು ಮಂಗಳೂರಿನ ಸ್ವಾತಿ ಕುಮಾರ್ ರೂಪಿಸಿದ್ದಾರೆ.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯರಾದ ಮಮತಾ ಗಟ್ಟಿ, ವಿಶ್ವವಿದ್ಯಾಲಯ ಕಾಲೇಜಿನ ಪ್ರಾಂಶುಪಾಲ ಡಾ.ಉದಯಕುಮಾರ್ ಇರ್ವತ್ತೂರು, ತುಳು ವಿಭಾಗದ ಸಂಚಾಲಕ ಡಾ. ಮಾಧವ, ತುಳು ಪರಿಷತ್ ವಿದ್ಯಾರ್ಥಿ ಸಮ್ಮೇಳನದ ಗೌರವಾಧ್ಯಕ್ಷ ಸ್ವರ್ಣ ಸುಂದರ, ಅಧ್ಯಕ್ಷ ಡಾ. ಪ್ರಭಾಕರ ನೀರುಮಾರ್ಗ, ಪ್ರಮುಖರಾದ ಶಿವಾನಂದ ಕರ್ಕೇರ, ಸುಭೋದಯ ಆಳ್ವಾ, ತಾರನಾಥ ಕಾಪಿಕಾಡ್, ಡಾ.ವಾಸುದೇವ ಬೆಳ್ಳೆ ಇದ್ದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…