Featured

ಮಂಗಳೂರು : ಪ್ರಥಮ ವಿದ್ಯಾರ್ಥಿ ತುಳು ಸಮ್ಮೇಳನದ ಲಾಂಛನ ಅನಾವರಣ -Vishwanews24

ಮಂಗಳೂರು: ಪ್ರಥಮ ವಿದ್ಯಾರ್ಥಿ ತುಳು ಸಮ್ಮೇಳನದ ಲಾಂಛನವನ್ನು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ನಗರದ ವಿಶ್ವವಿದ್ಯಾಲಯದ ಕಾಲೇಜು ಸಭಾಂಗಣದಲ್ಲಿ ಗುರುವಾರ ಅನಾವರಣಗೊಳಿಸಿದರು.

ಬಳಿಕ ಮಾತನಾಡಿದ ಅವರು, ‘ಸಮ್ಮೇಳನಗಳನ್ನು ಹೆಚ್ಚಾಗಿ ವಿದ್ವಾಂಸರು, ಸಂಶೋಧಕರು, ಹಿರಿಯರನ್ನು ಉದ್ದೇಶಿಸಿ ಮಾಡುತ್ತಾರೆ. ಆದರೆ, ವಿದ್ಯಾರ್ಥಿಗಳನ್ನು ಕೇಂದ್ರೀಕರಿಸಿಕೊಂಡು ಸಮ್ಮೇಳನ ಆಯೋಜಿಸಿರುವುದು ಅಭಿನಂದನಾರ್ಹ. ವಿದ್ಯಾರ್ಥಿಗಳೇ ಭವಿಷ್ಯದ ಸಂಶೋಧಕರು, ಬರಹಗಾರರು, ಸಾಧಕರಾಗಿದ್ದಾರೆ. ಅವರಿಗೆ ನಾವು ಪ್ರೇರಣೆ ನೀಡಬೇಕು’ ಎಂದು ಶ್ಲಾಘಿಸಿದರು.

‘ಸಮ್ಮೇಳನ ಲಾಂಛನದ ಪರಿಕಲ್ಪನೆಯೂ ಮೌಲ್ಯಯುತವಾಗಿದ್ದು, ಚೆನ್ನಾಗಿ ವಿನ್ಯಾಸ ಮಾಡಿದ್ದಾರೆ. ಲಾಂಛನದಲ್ಲಿರುವ ಭೂತಕೋಲ, ಯಕ್ಷಗಾನ, ಪರಿಸರ ಪ್ರೇಮ, ಕಹಳೆ, ಹುಲಿವೇಷವೆಲ್ಲವೂ ತುಳು ಸಂಸ್ಕೃತಿಯನ್ನು ಸಮಗ್ರವಾಗಿ ಬಿಂಬಿಸಿವೆ. ತುಳು ಸಂಸ್ಕೃತಿ, ಅಸ್ಮಿತೆಯ ಉಳಿವಿನ ನಿಟ್ಟಿನಲ್ಲಿ ಸಮ್ಮೇಳನವು ಅರ್ಥಪೂರ್ಣ ಹಾಗೂ ಚಾರಿತ್ರಿಕವಾಗಲಿದೆ’ ಎಂದರು.

‘ವಿದ್ಯಾರ್ಥಿ ಸಮ್ಮೇಳನವು ವಿಶ್ವ ಸಮ್ಮೇಳನದ ದಿಶೆಯನ್ನು ತೋರಿಸಬೇಕು. ನಾನೂ, ಮಂಗಳೂರು ವಿಶ್ವವಿದ್ಯಾಲಯದ ಮೊದಲ ತೌಳವ ಕುಲಪತಿ, ಹೀಗಾಗಿ ನನಗೂ ಜವಾಬ್ದಾರಿ ಹೆಚ್ಚಿದ್ದು, ನಿಷ್ಠೆಯಿಂದ ನಿಭಾಯಿಸುತ್ತೇನೆ’ ಎಂದು ಭರವಸೆ ನೀಡಿದರು.

ತುಳು ಪರಿಷತ್ ವತಿಯಿಂದ ಮಂಗಳೂರು ವಿಶ್ವವಿದ್ಯಾಲಯದ ಸಹಭಾಗಿತ್ವದಲ್ಲಿ 2020ರ ಜನವರಿ 16ರಂದು ನಗರದಲ್ಲಿ ಸಮ್ಮೇಳನ ನಡೆಯಲಿದೆ. ಲಾಂಛನವನ್ನು ಮಂಗಳೂರಿನ ಸ್ವಾತಿ ಕುಮಾರ್ ರೂಪಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯರಾದ ಮಮತಾ ಗಟ್ಟಿ, ವಿಶ್ವವಿದ್ಯಾಲಯ ಕಾಲೇಜಿನ ಪ್ರಾಂಶುಪಾಲ ಡಾ.ಉದಯಕುಮಾರ್ ಇರ್ವತ್ತೂರು, ತುಳು ವಿಭಾಗದ ಸಂಚಾಲಕ ಡಾ. ಮಾಧವ, ತುಳು ಪರಿಷತ್ ವಿದ್ಯಾರ್ಥಿ ಸಮ್ಮೇಳನದ ಗೌರವಾಧ್ಯಕ್ಷ ಸ್ವರ್ಣ ಸುಂದರ, ಅಧ್ಯಕ್ಷ ಡಾ. ಪ್ರಭಾಕರ ನೀರುಮಾರ್ಗ, ಪ್ರಮುಖರಾದ ಶಿವಾನಂದ ಕರ್ಕೇರ, ಸುಭೋದಯ ಆಳ್ವಾ, ತಾರನಾಥ ಕಾಪಿಕಾಡ್, ಡಾ.ವಾಸುದೇವ ಬೆಳ್ಳೆ ಇದ್ದರು.

Vishwa News 24

Recent Posts

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…

8 minutes ago

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು – vishwanews24

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…

1 hour ago

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

22 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

22 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

23 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

24 hours ago