ಮಂಗಳೂರು :ದೇಶದ ಪ್ರಧಾನಿಯ ಜವಾಬ್ದಾರಿಯುತ ಸ್ಥಾನದಲ್ಲಿರುವ ನರೇಂದ್ರ ಮೋದಿಯವರು ವಿದೇಶಕ್ಕೆ ಪ್ರವಾಸ ಹೋಗಬೇಡಿ, ಚಿನ್ನ ಖರೀದಿಸಬೇಡಿ, ವಾಹನಗಳಲ್ಲಿ ನಿಯಮಿತವಾಗಿ ಓಡಾಡಿ ಎಂದು ಹೇಳಿಕೆ ನೀಡಿರುವುದು ಬಾಲಿಶತನದ್ದು. ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಟೀಕಿಸಿದ್ದಾರೆ.
ದೇಶದಲ್ಲಿ ವಾಣಿಜ್ಯ ಗ್ಯಾಸ್ ಬೆಲೆ ಭಾರೀ ಏರಿಕೆಯಾಗಿದೆ. ಉದ್ಯಮ ವಲಯವೂ ದರ ಏರಿಕೆಯಿಂದ ಕಂಗಾಲಾಗಿದೆ. ರಸಗೊಬ್ಬರ ಕೊರತೆಯ ಮುನ್ಸೂಚನೆ ಸಿಕ್ಕಿದೆ. ಇಂತಹ ಸಂದರ್ಭ ಪ್ರಧಾನಿಯವರು ಈ ರೀತಿ ಹೇಳಿಕೆ ನೀಡಿರುವುದು ಜನರನ್ನು, ಉದ್ಯಮ ವಲಯವನ್ನು ಮತ್ತಷ್ಟು ಸಂಕಷ್ಟ ವಲಯಕ್ಕೆ ದೂಡಿದಂತಾಗಿದೆ ಎಂದರು.
ಇದನ್ನೂ ಓದಿ:
ಚಿನ್ನ ದರ ಏರಿಕೆಯಿಂದ ವ್ಯವಹಾರಕ್ಕೆ ಹೊಡೆತ ಬಿದ್ದು ಸ್ವರ್ಣೋದ್ಯಮ ಕಂಗಾಲಾಗಿದೆ. ಖಾದ್ಯ ಎಣ್ಣೆಗಳ ದರವೂ ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಿಸುವಲ್ಲಿ ದೇಶದಲ್ಲಿ ಆಡಳಿತ ನಡೆಸುತ್ತಿರುವ ಮೋದಿ ಸರಕಾರ ವಿಫಲವಾಗಿದೆ. ಸರಕಾರಿ ವೆಚ್ಚದಲ್ಲಿ ಪದೇ ಪದೇ ವಿದೇಶ ಪ್ರವಾಸ ಮಾಡಿ ಸುದ್ದಿಯಲ್ಲಿರುವ ಮೋದಿ ದೇಶದ ಜನರನ್ನು ವಿದೇಶ ಪ್ರವಾಸ ಮಾಡಬೇಡಿ ಎಂದು ಹೇಳುತ್ತಿದ್ದಾರೆ. ಇದು ಕೇಂದ್ರದ ಮೋದಿ ಸರಕಾರದ ಆಡಳಿತ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ ಎಂದು ಕಿಡಿಕಾರಿದ್ದಾರೆ.
ಜಾಗತಿಕ ತಲ್ಲಣ, ಆರ್ಥಿಕ ವ್ಯವಸ್ಥೆಯಲ್ಲಿ ಏರು-ಪೇರಾದಾಗ ದೇಶದ ಜನರಲ್ಲಿ ಭರವಸೆ ಮಾತುಗಳಿಂದ ಸ್ಥೈರ್ಯ ತುಂಬುವುದು ಕೇಂದ್ರ ಸರಕಾರದ ಜವಾಬ್ದಾರಿ. ಅದನ್ನು ಹೊರತು ಈ ರೀತಿ ಜನರಲ್ಲಿ ಗೊಂದಲ, ಆತಂಕವನ್ನು ಸೃಷ್ಟಿ ಮಾಡುವುದು ಸರಿಯಲ್ಲ. ದರ ಏರಿಕೆಯಿಂದ ಈಗಾಗಲೇ ಸ್ವರ್ಣೋದ್ಯಮ ನಷ್ಟದಲ್ಲಿದ್ದು, ಪ್ರಧಾನಿ ಹೇಳಿಕೆ ಮತ್ತಷ್ಟು ಆತಂಕಕ್ಕೆ ಕಾರಣವಾಗಲಿದೆ ಎಂದರು.
ಇದನ್ನೂ ಓದಿ:
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…
ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…