BREAKING _ ಮಂಗಳೂರು : ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ : ಇಬ್ಬರು ಆರೋಪಿಗಳ ಬಂಧನ – Vishwanews24
ಪ್ರವೀಣ್ ಹತ್ಯೆಗೆ ಸ್ಕೆಚ್ಚ್ ಹಾಕಿದ್ದ ಶಫೀಕ್ ಬೆಳ್ಳಾರೆ , ಝಾಕೀರ್
ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಬಂಧನವಾಗಿದೆ.
ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ನೆಟ್ಟಾರು ದುಷ್ಕರ್ಮಿಗಳ ಕೈಯಲ್ಲಿ ಭೀಕರವಾಗಿ ಹತ್ಯೆಯಾಗಿದ್ದರು. ಬಳಿಕ ಕರಾವಳಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆ ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ನಡೆಸಿ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಸವಣೂರು ಮೂಲದ ಝಕೀರ್ ಮತ್ತು ಶಫೀಕ್ ಬೆಳ್ಳಾರೆ ಬಂಧಿತ ಆರೋಪಿಗಳು.
ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಸವಣೂರು ಮೂಲದ ಝಕೀರ್ ಮತ್ತು ಶಫೀಕ್ ಬೆಳ್ಳಾರೆಯನ್ನು ಬಂಧಿಸಲಾಗಿದೆ. ಪ್ರಕರಣದ ಬಗ್ಗೆ ಇನ್ನಷ್ಟು ತನಿಖೆ ನಡೆಸಬೇಕಾಗಿದೆ. ಆರೋಪಿಗಳನ್ನು ಇಂದೇ ನ್ಯಾಯಾಲಯಕ್ಕೆ ಹಾಜರು ಮಾಡುತ್ತೇವೆ ಎಂದು ದಕ್ಷಿಣಕನ್ನಡ ಎಸ್ಪಿ ಹೃಷಿಕೇಶ್ ಸೋನಾವಣೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
