ಮಂಗಳೂರು: ಪ್ರವೀಣ್ ನೆಟ್ಟಾರು ಕೊಲೆ ಆರೋಪಿಗೆ ಎಸ್ ಡಿಪಿಐ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಶಾಫಿ ಬೆಳ್ಳಾರೆ ಜೈಲಿನಲ್ಲಿ ಇರೋ ವ್ಯಕ್ತಿ, ಅಂಥವನಿಗೆ ಎಸ್ ಡಿಪಿಐ ಟಿಕೆಟ್ ಕೊಟ್ಟಿದೆ. ಕ್ರಿಮಿನಲ್ ಹಿನ್ನೆಲೆ ವ್ಯಕ್ತಿಯನ್ನು ಅಭ್ಯರ್ಥಿ ಮಾಡಿರುವುದು ಸರಿಯಲ್ಲ. ಪಿಎಫ್ಐ ಸದಸ್ಯನನ್ನು ಎಸ್ ಡಿಪಿಐ ಅಭ್ಯರ್ಥಿ ಮಾಡಿರೋದು ಸರಿಯಲ್ಲ ಎಂದಿದ್ದಾರೆ.
ಎಸ್ ಡಿಪಿಐ ಪಿಎಫ್ಐ ನ ಮತ್ತೊಂದು ಮುಖ ಎನ್ನುವುದನ್ನ ಇದರಿಂದ ಸ್ಪಷ್ಟಗೊಂಡಿದೆ. ಈ ಬಗ್ಗೆ ತನಿಖೆ ಆಗಬೇಕು, ಇವರು ಅವರ ಇನ್ನೊಂದು ಮುಖವಾಗಿದೆ. ಕಾಂಗ್ರೆಸ್ ಇದರ ಬಗ್ಗೆ ಏನ್ ಹೇಳ್ತಾರೆ ಅನ್ನೋದನ್ನ ಕೇಳಬೇಕು ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.
ನಾವು ಇದನ್ನ ಗೃಹ ಸಚಿವಾಲಯಗಳಿಗೆ ತಿಳಿಸ್ತೇವೆ. ಪಿಎಫ್ಐ ನಿಷೇಧಿತ ಸಂಘಟನೆಯಾಗಿದೆ. ಎಸ್ ಡಿಪಿಐ ರಾಜಕೀಯ ಸಂಘಟನೆ. ಹೀಗಿರುವಾಗ ಅವರ ಸದಸ್ಯನಿಗೆ ಇವರು ಟಿಕೆಟ್ ಕೊಡೋದು ಅಂದ್ರೆ ಏನರ್ಥ? ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರು: ಏರ್ಪೋರ್ಟ್ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್ಪೋರ್ಟ್ನಲ್ಲಿ 1.37…
ಬಾರ್, ಪಬ್ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ ಬೆಂಗಳೂರು : ಬಾರ್,…
ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…
ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…
ಉಡುಪಿ: ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…