ಮಂಗಳೂರು : ಪ್ರವೀಣ್ ನೆಟ್ಟಾರು ಕನಸಿನ ಮನೆ : ಏ.15ರೊಳಗೆ ಕಾಮಗಾರಿ ಪೂರ್ಣ  – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು :ಪ್ರವೀಣ್ ನೆಟ್ಟಾರು ಕನಸಿನ ಮನೆ : ಏ.15ರೊಳಗೆ ಕಾಮಗಾರಿ ಪೂರ್ಣ 

ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು  ಹತ್ಯೆಗೀಡಾದ ಯುವಕನ ಕುಟುಂಬದ ಸ್ವಂತ ಮನೆಯ ಕಾಮಗಾರಿಯೂಏ.15ರೊಳಗೆ ಪೂರ್ಣಗೊಳ್ಳಲಿದೆ ಎಂದು ವರದಿಯಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ, ದ.ಕ. ಸಂಸದ ನಳಿನ್‌ ಕುಮಾರ್‌ ಕಟೀಲ್‌ ಪಕ್ಷದ ವತಿಯಿಂದಲೇ ಮನೆ ನಿರ್ಮಿಸಿಕೊಡುವ ಭರವಸೆಯನ್ನು ನೀಡಿದ್ದರು.ನ.2ರಂದು ಮನೆಗೆ ಶಂಕುಸ್ಥಾಪನೆ ನೆರವೇರಿತ್ತು. ಸುಮಾರು 50 ಲಕ್ಷ ರು. ವೆಚ್ಚದ, 2,700 ಚದರ ಅಡಿ ವಿಸ್ತೀರ್ಣದ ಮನೆಯ ವಿನ್ಯಾಸ ಹಾಗೂ ಗುತ್ತಿಗೆಯನ್ನು ಮಂಗಳೂರಿನ ಮುಗೆರೋಡಿ ಕನ್‌ಸ್ಟ್ರಕ್ಷನ್‌ ವಹಿಸಿದೆ. ಈಗಾಗಲೇ ಭರದಿಂದ ಮನೆ ಕಾಮಗಾರಿ ನಡೆಸಲಾಗುತ್ತಿದ್ದು, ಜೂನ್‌ ಮಳೆಗಾಲದೊಳಗೆ ಮನೆಯ ಪ್ರವೇಶೋತ್ಸವನ್ನು ಮಾಡಲಿದ್ದಾರೆ.

ಕಾಂಗ್ರೆಸ್ ನಿಂದ 3ನೇ ಗ್ಯಾರಂಟಿ ಘೋಷಣೆ: ಪ್ರತಿ ತಿಂಗಳು ಬಡ ಕುಟುಂಬದ ಸದಸ್ಯರಿಗೆ 10 ಕೆಜಿ ಅಕ್ಕಿ ಉಚಿತ – Vishwanews24

ಪ್ರವೀಣ್‌ ನೆಟ್ಟಾರು ಕುಟುಂಬಕ್ಕೆ ಒಬ್ಬನೆ ಮಗನಾಗಿದ್ದನು. ಈತನೆ ಮನೆಗೆ ಆಧಾರ ಸ್ಥಂಭವಾಗಿದ್ದು, ಮನೆ ಕಟ್ಟುವ ನಿರೀಕ್ಷೆಯನ್ನು ಹೊಂದಿದ್ದರು, ಮನೆ ಕಟ್ಟಲು ಪ್ಲಾನ್‌ ಮಾಡುತ್ತಿದ್ದಂತೆ ಮನೆಯ ಮಗನೇ ಹತ್ಯೆಗೀಡಾದನು. ಈತ ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದನು. ಈತನ ಕೊಲೆಗೆ ರಾಜ್ಯದ ಜನರೇ ಬೇಸರಗೊಂಡಿದ್ದರು.

ಸ್ವಂತ ಸೂರು ಕನಸಾಗಿತ್ತು

ಪ್ರವೀಣ್‌ ನೆಟ್ಟಾರು ಹೆತ್ತವರಿಗೆ ಏಕೈಕ ಪುತ್ರ, ಮನೆಯ ಆಧಾರಸ್ತಂಭವಾಗಿದ್ದರು. ಸ್ವಂತ ಮನೆ ಕನಸು ಹೊಂದಿದ್ದರು. ಮನೆ ನಿರ್ಮಾಣಕ್ಕೆ ಮುಹೂರ್ತವನ್ನೂ ನಿಗದಿಗೊಳಿಸಿದ್ದರೂ, ಅದಕ್ಕೂ ಮೊದಲೇ ಹತ್ಯೆಗೀಡಾದರು. ಪ್ರವೀಣ್‌ ಕನಸು ನನಸು ಮಾಡಲು ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ, ದ.ಕ. ಸಂಸದ ನಳಿನ್‌ ಕುಮಾರ್‌ ಕಟೀಲ್‌ ಪಕ್ಷದ ವತಿಯಿಂದಲೇ ಮನೆ ನಿರ್ಮಿಸಿಕೊಡುವ ಭರವಸೆ ನೀಡಿದ್ದರು. ನ.2ರಂದು ಮನೆಗೆ ಶಂಕುಸ್ಥಾಪನೆ ನೆರವೇರಿತ್ತು. ಸುಮಾರು 50 ಲಕ್ಷ ರು. ವೆಚ್ಚದ, 2,700 ಚದರ ಅಡಿ ವಿಸ್ತೀರ್ಣದ ಮನೆಯ ವಿನ್ಯಾಸ ಹಾಗೂ ಗುತ್ತಿಗೆಯನ್ನು ಮಂಗಳೂರಿನ ಮುಗೆರೋಡಿ ಕನ್‌ಸ್ಟ್ರಕ್ಷನ್‌ ವಹಿಸಿಕೊಂಡಿದೆ.

ಉತ್ತಮ ಪ್ರಜಾಕೀಯ ಪಕ್ಷಕ್ಕೆ `ಆಟೋ ರಿಕ್ಷಾ’ ಚಿಹ್ನೆ : ಸಂತಸ ಹಂಚಿಕೊಂಡ ಉಪೇಂದ್ರ – Vishwanews24

Leave a Reply