Featured

ಮಂಗಳೂರು : ಪ್ರವೀಣ್ ನೆಟ್ಟಾರು ಕನಸಿನ ಮನೆ : ಏ.15ರೊಳಗೆ ಕಾಮಗಾರಿ ಪೂರ್ಣ  – Vishwanews24

ಮಂಗಳೂರು :ಪ್ರವೀಣ್ ನೆಟ್ಟಾರು ಕನಸಿನ ಮನೆ : ಏ.15ರೊಳಗೆ ಕಾಮಗಾರಿ ಪೂರ್ಣ

ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು  ಹತ್ಯೆಗೀಡಾದ ಯುವಕನ ಕುಟುಂಬದ ಸ್ವಂತ ಮನೆಯ ಕಾಮಗಾರಿಯೂಏ.15ರೊಳಗೆ ಪೂರ್ಣಗೊಳ್ಳಲಿದೆ ಎಂದು ವರದಿಯಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ, ದ.ಕ. ಸಂಸದ ನಳಿನ್‌ ಕುಮಾರ್‌ ಕಟೀಲ್‌ ಪಕ್ಷದ ವತಿಯಿಂದಲೇ ಮನೆ ನಿರ್ಮಿಸಿಕೊಡುವ ಭರವಸೆಯನ್ನು ನೀಡಿದ್ದರು.ನ.2ರಂದು ಮನೆಗೆ ಶಂಕುಸ್ಥಾಪನೆ ನೆರವೇರಿತ್ತು. ಸುಮಾರು 50 ಲಕ್ಷ ರು. ವೆಚ್ಚದ, 2,700 ಚದರ ಅಡಿ ವಿಸ್ತೀರ್ಣದ ಮನೆಯ ವಿನ್ಯಾಸ ಹಾಗೂ ಗುತ್ತಿಗೆಯನ್ನು ಮಂಗಳೂರಿನ ಮುಗೆರೋಡಿ ಕನ್‌ಸ್ಟ್ರಕ್ಷನ್‌ ವಹಿಸಿದೆ. ಈಗಾಗಲೇ ಭರದಿಂದ ಮನೆ ಕಾಮಗಾರಿ ನಡೆಸಲಾಗುತ್ತಿದ್ದು, ಜೂನ್‌ ಮಳೆಗಾಲದೊಳಗೆ ಮನೆಯ ಪ್ರವೇಶೋತ್ಸವನ್ನು ಮಾಡಲಿದ್ದಾರೆ.

ಪ್ರವೀಣ್‌ ನೆಟ್ಟಾರು ಕುಟುಂಬಕ್ಕೆ ಒಬ್ಬನೆ ಮಗನಾಗಿದ್ದನು. ಈತನೆ ಮನೆಗೆ ಆಧಾರ ಸ್ಥಂಭವಾಗಿದ್ದು, ಮನೆ ಕಟ್ಟುವ ನಿರೀಕ್ಷೆಯನ್ನು ಹೊಂದಿದ್ದರು, ಮನೆ ಕಟ್ಟಲು ಪ್ಲಾನ್‌ ಮಾಡುತ್ತಿದ್ದಂತೆ ಮನೆಯ ಮಗನೇ ಹತ್ಯೆಗೀಡಾದನು. ಈತ ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದನು. ಈತನ ಕೊಲೆಗೆ ರಾಜ್ಯದ ಜನರೇ ಬೇಸರಗೊಂಡಿದ್ದರು.

ಸ್ವಂತ ಸೂರು ಕನಸಾಗಿತ್ತು

ಪ್ರವೀಣ್‌ ನೆಟ್ಟಾರು ಹೆತ್ತವರಿಗೆ ಏಕೈಕ ಪುತ್ರ, ಮನೆಯ ಆಧಾರಸ್ತಂಭವಾಗಿದ್ದರು. ಸ್ವಂತ ಮನೆ ಕನಸು ಹೊಂದಿದ್ದರು. ಮನೆ ನಿರ್ಮಾಣಕ್ಕೆ ಮುಹೂರ್ತವನ್ನೂ ನಿಗದಿಗೊಳಿಸಿದ್ದರೂ, ಅದಕ್ಕೂ ಮೊದಲೇ ಹತ್ಯೆಗೀಡಾದರು. ಪ್ರವೀಣ್‌ ಕನಸು ನನಸು ಮಾಡಲು ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ, ದ.ಕ. ಸಂಸದ ನಳಿನ್‌ ಕುಮಾರ್‌ ಕಟೀಲ್‌ ಪಕ್ಷದ ವತಿಯಿಂದಲೇ ಮನೆ ನಿರ್ಮಿಸಿಕೊಡುವ ಭರವಸೆ ನೀಡಿದ್ದರು. ನ.2ರಂದು ಮನೆಗೆ ಶಂಕುಸ್ಥಾಪನೆ ನೆರವೇರಿತ್ತು. ಸುಮಾರು 50 ಲಕ್ಷ ರು. ವೆಚ್ಚದ, 2,700 ಚದರ ಅಡಿ ವಿಸ್ತೀರ್ಣದ ಮನೆಯ ವಿನ್ಯಾಸ ಹಾಗೂ ಗುತ್ತಿಗೆಯನ್ನು ಮಂಗಳೂರಿನ ಮುಗೆರೋಡಿ ಕನ್‌ಸ್ಟ್ರಕ್ಷನ್‌ ವಹಿಸಿಕೊಂಡಿದೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

14 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

15 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

15 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

15 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago