ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೀಡಾದ ಯುವಕನ ಕುಟುಂಬದ ಸ್ವಂತ ಮನೆಯ ಕಾಮಗಾರಿಯೂಏ.15ರೊಳಗೆ ಪೂರ್ಣಗೊಳ್ಳಲಿದೆ ಎಂದು ವರದಿಯಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ, ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಪಕ್ಷದ ವತಿಯಿಂದಲೇ ಮನೆ ನಿರ್ಮಿಸಿಕೊಡುವ ಭರವಸೆಯನ್ನು ನೀಡಿದ್ದರು.ನ.2ರಂದು ಮನೆಗೆ ಶಂಕುಸ್ಥಾಪನೆ ನೆರವೇರಿತ್ತು. ಸುಮಾರು 50 ಲಕ್ಷ ರು. ವೆಚ್ಚದ, 2,700 ಚದರ ಅಡಿ ವಿಸ್ತೀರ್ಣದ ಮನೆಯ ವಿನ್ಯಾಸ ಹಾಗೂ ಗುತ್ತಿಗೆಯನ್ನು ಮಂಗಳೂರಿನ ಮುಗೆರೋಡಿ ಕನ್ಸ್ಟ್ರಕ್ಷನ್ ವಹಿಸಿದೆ. ಈಗಾಗಲೇ ಭರದಿಂದ ಮನೆ ಕಾಮಗಾರಿ ನಡೆಸಲಾಗುತ್ತಿದ್ದು, ಜೂನ್ ಮಳೆಗಾಲದೊಳಗೆ ಮನೆಯ ಪ್ರವೇಶೋತ್ಸವನ್ನು ಮಾಡಲಿದ್ದಾರೆ.
ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಒಬ್ಬನೆ ಮಗನಾಗಿದ್ದನು. ಈತನೆ ಮನೆಗೆ ಆಧಾರ ಸ್ಥಂಭವಾಗಿದ್ದು, ಮನೆ ಕಟ್ಟುವ ನಿರೀಕ್ಷೆಯನ್ನು ಹೊಂದಿದ್ದರು, ಮನೆ ಕಟ್ಟಲು ಪ್ಲಾನ್ ಮಾಡುತ್ತಿದ್ದಂತೆ ಮನೆಯ ಮಗನೇ ಹತ್ಯೆಗೀಡಾದನು. ಈತ ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದನು. ಈತನ ಕೊಲೆಗೆ ರಾಜ್ಯದ ಜನರೇ ಬೇಸರಗೊಂಡಿದ್ದರು.
ಸ್ವಂತ ಸೂರು ಕನಸಾಗಿತ್ತು
ಪ್ರವೀಣ್ ನೆಟ್ಟಾರು ಹೆತ್ತವರಿಗೆ ಏಕೈಕ ಪುತ್ರ, ಮನೆಯ ಆಧಾರಸ್ತಂಭವಾಗಿದ್ದರು. ಸ್ವಂತ ಮನೆ ಕನಸು ಹೊಂದಿದ್ದರು. ಮನೆ ನಿರ್ಮಾಣಕ್ಕೆ ಮುಹೂರ್ತವನ್ನೂ ನಿಗದಿಗೊಳಿಸಿದ್ದರೂ, ಅದಕ್ಕೂ ಮೊದಲೇ ಹತ್ಯೆಗೀಡಾದರು. ಪ್ರವೀಣ್ ಕನಸು ನನಸು ಮಾಡಲು ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ, ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಪಕ್ಷದ ವತಿಯಿಂದಲೇ ಮನೆ ನಿರ್ಮಿಸಿಕೊಡುವ ಭರವಸೆ ನೀಡಿದ್ದರು. ನ.2ರಂದು ಮನೆಗೆ ಶಂಕುಸ್ಥಾಪನೆ ನೆರವೇರಿತ್ತು. ಸುಮಾರು 50 ಲಕ್ಷ ರು. ವೆಚ್ಚದ, 2,700 ಚದರ ಅಡಿ ವಿಸ್ತೀರ್ಣದ ಮನೆಯ ವಿನ್ಯಾಸ ಹಾಗೂ ಗುತ್ತಿಗೆಯನ್ನು ಮಂಗಳೂರಿನ ಮುಗೆರೋಡಿ ಕನ್ಸ್ಟ್ರಕ್ಷನ್ ವಹಿಸಿಕೊಂಡಿದೆ.
ಎಸ್ಎಸ್ಎಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್ಎಸ್ಎಲ್ಸಿ…
ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…