ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೀಡಾದ ಯುವಕನ ಕುಟುಂಬದ ಸ್ವಂತ ಮನೆಯ ಕಾಮಗಾರಿಯೂಏ.15ರೊಳಗೆ ಪೂರ್ಣಗೊಳ್ಳಲಿದೆ ಎಂದು ವರದಿಯಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ, ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಪಕ್ಷದ ವತಿಯಿಂದಲೇ ಮನೆ ನಿರ್ಮಿಸಿಕೊಡುವ ಭರವಸೆಯನ್ನು ನೀಡಿದ್ದರು.ನ.2ರಂದು ಮನೆಗೆ ಶಂಕುಸ್ಥಾಪನೆ ನೆರವೇರಿತ್ತು. ಸುಮಾರು 50 ಲಕ್ಷ ರು. ವೆಚ್ಚದ, 2,700 ಚದರ ಅಡಿ ವಿಸ್ತೀರ್ಣದ ಮನೆಯ ವಿನ್ಯಾಸ ಹಾಗೂ ಗುತ್ತಿಗೆಯನ್ನು ಮಂಗಳೂರಿನ ಮುಗೆರೋಡಿ ಕನ್ಸ್ಟ್ರಕ್ಷನ್ ವಹಿಸಿದೆ. ಈಗಾಗಲೇ ಭರದಿಂದ ಮನೆ ಕಾಮಗಾರಿ ನಡೆಸಲಾಗುತ್ತಿದ್ದು, ಜೂನ್ ಮಳೆಗಾಲದೊಳಗೆ ಮನೆಯ ಪ್ರವೇಶೋತ್ಸವನ್ನು ಮಾಡಲಿದ್ದಾರೆ.
ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಒಬ್ಬನೆ ಮಗನಾಗಿದ್ದನು. ಈತನೆ ಮನೆಗೆ ಆಧಾರ ಸ್ಥಂಭವಾಗಿದ್ದು, ಮನೆ ಕಟ್ಟುವ ನಿರೀಕ್ಷೆಯನ್ನು ಹೊಂದಿದ್ದರು, ಮನೆ ಕಟ್ಟಲು ಪ್ಲಾನ್ ಮಾಡುತ್ತಿದ್ದಂತೆ ಮನೆಯ ಮಗನೇ ಹತ್ಯೆಗೀಡಾದನು. ಈತ ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದನು. ಈತನ ಕೊಲೆಗೆ ರಾಜ್ಯದ ಜನರೇ ಬೇಸರಗೊಂಡಿದ್ದರು.
ಸ್ವಂತ ಸೂರು ಕನಸಾಗಿತ್ತು
ಪ್ರವೀಣ್ ನೆಟ್ಟಾರು ಹೆತ್ತವರಿಗೆ ಏಕೈಕ ಪುತ್ರ, ಮನೆಯ ಆಧಾರಸ್ತಂಭವಾಗಿದ್ದರು. ಸ್ವಂತ ಮನೆ ಕನಸು ಹೊಂದಿದ್ದರು. ಮನೆ ನಿರ್ಮಾಣಕ್ಕೆ ಮುಹೂರ್ತವನ್ನೂ ನಿಗದಿಗೊಳಿಸಿದ್ದರೂ, ಅದಕ್ಕೂ ಮೊದಲೇ ಹತ್ಯೆಗೀಡಾದರು. ಪ್ರವೀಣ್ ಕನಸು ನನಸು ಮಾಡಲು ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ, ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಪಕ್ಷದ ವತಿಯಿಂದಲೇ ಮನೆ ನಿರ್ಮಿಸಿಕೊಡುವ ಭರವಸೆ ನೀಡಿದ್ದರು. ನ.2ರಂದು ಮನೆಗೆ ಶಂಕುಸ್ಥಾಪನೆ ನೆರವೇರಿತ್ತು. ಸುಮಾರು 50 ಲಕ್ಷ ರು. ವೆಚ್ಚದ, 2,700 ಚದರ ಅಡಿ ವಿಸ್ತೀರ್ಣದ ಮನೆಯ ವಿನ್ಯಾಸ ಹಾಗೂ ಗುತ್ತಿಗೆಯನ್ನು ಮಂಗಳೂರಿನ ಮುಗೆರೋಡಿ ಕನ್ಸ್ಟ್ರಕ್ಷನ್ ವಹಿಸಿಕೊಂಡಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…