ಮಂಗಳೂರು: ಬಿಜೆಪಿ ಯುವ ಮುಖಂಡ, ಬೆಳ್ಳಾರೆ ನಿವಾಸಿ ಪ್ರವೀಣ್ ನೆಟ್ಟಾರು ಅವರ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ನಾಲ್ವರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕಾರ್ಯಕರ್ತರನ್ನು ಪತ್ತೆಹಚ್ಚಲು ಸಹಾಯ ನೀಡುವವರಿಗೆ ರಾಷ್ಟ್ರೀಯ ತನಿಖಾ ಏಜೆನ್ಸಿ (ಎನ್ಐಎ) ನಗದು ಬಹುಮಾನ ಘೋಷಿಸಿದೆ.
ಸುಳ್ಯ ಬುದು ಹೌಸ್ನ ಎಸ್. ಮುಹಮ್ಮದ್ ಮುಸ್ತಫ ಯಾನೆ ಮುಸ್ತಫ ಪೈಚಾರ್ ಮತ್ತು ಮಡಿಕೇರಿಯ ಎಂ.ಎಚ್. ತೌಫಲ್ ಕುರಿತು ಮಾಹಿತಿ ನೀಡುವವರಿಗೆ ತಲಾ 5 ಲಕ್ಷ ರೂ. ನೀಡಲಾಗುವುದು.
ದಕ್ಷಿಣ ಕನ್ನಡದ ಕಲ್ಲುಮುಟ್ಟಲು ವೀಟಿಲ್ ಎಂ.ಆರ್. ಉಮ್ಮರ್ ಫಾರೂಕ್ ಯಾನೆ ಉಮ್ಮರ್, ಸಿದ್ದಿಕ್ ಯಾನೆ ಪೈಂಟರ್ ಸಿದ್ದಿಕ್ ಯಾನೆ ಗುಜರಿ ಸಿದ್ದಿಕ್ ಕುರಿತು ಮಾಹಿತಿ ನೀಡುವವರಿಗೆ ತಲಾ 2 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ನೊಟೀಸ್ನಲ್ಲಿ ತಿಳಿಸಿದೆ.
ಆರೋಪಿಗಳು ಕೇರಳದಲ್ಲಿ ತಲೆಮರೆಸಿಕೊಂಡಿರುವ ಶಂಕೆಯ ಹಿನ್ನೆಲೆಯಲ್ಲಿ ನೊಟೀಸಿನ ಪ್ರತಿಗಳನ್ನು ಕಲ್ಲಿಕೋಟೆ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಲಗತ್ತಿಸಲಾಗಿದೆ.
ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ 31 ವರ್ಷದ ಪ್ರವೀಣ್ ಕುಮಾರ್ ನೆಟ್ಟಾರು ಅವರನ್ನು ಜುಲೈ 26 ರಂದು ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…