ಮಂಗಳೂರು: ಜಿಲ್ಲೆಯ ಆರು ಬಿಜೆಪಿ ಶಾಸಕರೊಂದಿಗೆ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಪೂರ್ಣ ಬಹುಮತ ಪಡೆದಿರುವ ಕಾಂಗ್ರೆಸ್ ಸಮಸ್ಯೆಗೆ ಪರಿಹಾರ ಮಾಡುವ ಬದಲು ಅಧಿಕಾರ ಹಂಚಿಕೆಯ ಚರ್ಚೆಯಲ್ಲಿದೆ. ಐದು ಉಚಿತ ಯೋಜನೆಗಳನ್ನು 20 ದಿನಗಳಾದರೂ ಹಂಚಿಕೆ ಮಾಡಿಲ್ಲ ಎಂದು ಆರೋಪಿಸಿದರು.
ಇದರಿಂದಾಗಿ ಸರ್ಕಾರಿ ನೌಕರರು ಏಟು ತಿನ್ನುವ ಪರಿಸ್ಥಿತಿ ಬಂದಿದೆ. ವಿದ್ಯುತ್ ಬಿಲ್ ಕಲೆಕ್ಟ್ ಮಾಡಲು ಹೋದವರಿಗೆ ಏಟು ಬೀಳುತ್ತಿದೆ. ಕಾಂಗ್ರೆಸ್ ವಿಜಯೋತ್ಸವದಲ್ಲೇ ಗಲಭೆ ಮಾಡಿದ್ದು, ದ್ವೇಷದ ರಾಜಕಾರಣ ಮಾಡುತ್ತಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್ಐಆರ್ ಹಾಕಲಾಗಿದೆ.
ಕಾಂಗ್ರೆಸ್ ದ್ವೇಷ ಸಾಧನೆ ಮೂಲಕ ಬಿಜೆಪಿ ಯನ್ನು ಕಟ್ಟಿಹಾಕುವ ಪ್ರಯತ್ನ ಮಾಡುತ್ತಿದೆ. ಕಾಂಗ್ರೆಸ್ ನಲ್ಲಿ ತಾಕತ್ ಇದ್ರೆ ಪಾಕ್ ಪರ ಜೈಕಾರ ಕೂಗಿದವರನ್ನು ಬಂಧಿಸಿ ಎಂದು ನಳಿನ್ ಸವಾಲಯ ಹಾಕಿದರು. ಪ್ರವೀಣ್ ನೆಟ್ಟಾರ್ ಪತ್ನಿಗೆ ನೀಡಿದ್ದ ಉದ್ಯೋಗ ವನ್ನು ಕಾಂಗ್ರೆಸ್ ಕಿತ್ತುಕೊಂಡಿದೆ. ಆದರೆ ನೀವು ಉದ್ಯೋಗ ನೀಡದಿದ್ದರೂ ಎನ್ಎಂಪಿಟಿಯಲ್ಲಿ ಉದ್ಯೋಗ ನೀಡುತ್ತೇವೆ ಎಂದು ಭರವಸೆ ನೀಡಿದರು.
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. ದ್ವೇಷದ ರಾಜಕಾರಣವನ್ನು ವಿರೋಧಿಸಿ ಪ್ರತಿಭಟಿಸುತ್ತೇವೆ. ತಿಂಗಳ ಒಳಗೆ ಎಲ್ಲವೂ ಸರಿಯಾಗದಿದ್ದರೆ ಹೋರಾಟ ಎಂದು ಹೇಳಿದರು. ಬಿಜೆಪಿ ಸರ್ಕಾರದ ಮೇಲೆ ಮಾಡಿದ ಆರೋಪಗಳ ಪೂರ್ಣ ತನಿಖೆ ನಡೆಯಲಿ. ಸಿದ್ಧರಾಮಯ್ಯ ಮೇಲಿರುವ ಲೋಕಾಯುಕ್ತ ಕೇಸ್ ಅನ್ನೂ ತನಿಖೆ ಮಾಡಲಿ. ಕರಾವಳಿ ಜಿಲ್ಲೆಗೆ ಒಂದೂ ಮಂತ್ರಿ ಪಟ್ಟ ಇಲ್ಲದಿರುವ ಬಗ್ಗೆ ದುಃಖವಿದೆ ಎಂದು ನಳಿನ್ ಹೇಳಿದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…