ಮಂಗಳೂರು: ಜಿಲ್ಲೆಯ ಆರು ಬಿಜೆಪಿ ಶಾಸಕರೊಂದಿಗೆ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಪೂರ್ಣ ಬಹುಮತ ಪಡೆದಿರುವ ಕಾಂಗ್ರೆಸ್ ಸಮಸ್ಯೆಗೆ ಪರಿಹಾರ ಮಾಡುವ ಬದಲು ಅಧಿಕಾರ ಹಂಚಿಕೆಯ ಚರ್ಚೆಯಲ್ಲಿದೆ. ಐದು ಉಚಿತ ಯೋಜನೆಗಳನ್ನು 20 ದಿನಗಳಾದರೂ ಹಂಚಿಕೆ ಮಾಡಿಲ್ಲ ಎಂದು ಆರೋಪಿಸಿದರು.
ಇದರಿಂದಾಗಿ ಸರ್ಕಾರಿ ನೌಕರರು ಏಟು ತಿನ್ನುವ ಪರಿಸ್ಥಿತಿ ಬಂದಿದೆ. ವಿದ್ಯುತ್ ಬಿಲ್ ಕಲೆಕ್ಟ್ ಮಾಡಲು ಹೋದವರಿಗೆ ಏಟು ಬೀಳುತ್ತಿದೆ. ಕಾಂಗ್ರೆಸ್ ವಿಜಯೋತ್ಸವದಲ್ಲೇ ಗಲಭೆ ಮಾಡಿದ್ದು, ದ್ವೇಷದ ರಾಜಕಾರಣ ಮಾಡುತ್ತಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್ಐಆರ್ ಹಾಕಲಾಗಿದೆ.
ಕಾಂಗ್ರೆಸ್ ದ್ವೇಷ ಸಾಧನೆ ಮೂಲಕ ಬಿಜೆಪಿ ಯನ್ನು ಕಟ್ಟಿಹಾಕುವ ಪ್ರಯತ್ನ ಮಾಡುತ್ತಿದೆ. ಕಾಂಗ್ರೆಸ್ ನಲ್ಲಿ ತಾಕತ್ ಇದ್ರೆ ಪಾಕ್ ಪರ ಜೈಕಾರ ಕೂಗಿದವರನ್ನು ಬಂಧಿಸಿ ಎಂದು ನಳಿನ್ ಸವಾಲಯ ಹಾಕಿದರು. ಪ್ರವೀಣ್ ನೆಟ್ಟಾರ್ ಪತ್ನಿಗೆ ನೀಡಿದ್ದ ಉದ್ಯೋಗ ವನ್ನು ಕಾಂಗ್ರೆಸ್ ಕಿತ್ತುಕೊಂಡಿದೆ. ಆದರೆ ನೀವು ಉದ್ಯೋಗ ನೀಡದಿದ್ದರೂ ಎನ್ಎಂಪಿಟಿಯಲ್ಲಿ ಉದ್ಯೋಗ ನೀಡುತ್ತೇವೆ ಎಂದು ಭರವಸೆ ನೀಡಿದರು.
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. ದ್ವೇಷದ ರಾಜಕಾರಣವನ್ನು ವಿರೋಧಿಸಿ ಪ್ರತಿಭಟಿಸುತ್ತೇವೆ. ತಿಂಗಳ ಒಳಗೆ ಎಲ್ಲವೂ ಸರಿಯಾಗದಿದ್ದರೆ ಹೋರಾಟ ಎಂದು ಹೇಳಿದರು. ಬಿಜೆಪಿ ಸರ್ಕಾರದ ಮೇಲೆ ಮಾಡಿದ ಆರೋಪಗಳ ಪೂರ್ಣ ತನಿಖೆ ನಡೆಯಲಿ. ಸಿದ್ಧರಾಮಯ್ಯ ಮೇಲಿರುವ ಲೋಕಾಯುಕ್ತ ಕೇಸ್ ಅನ್ನೂ ತನಿಖೆ ಮಾಡಲಿ. ಕರಾವಳಿ ಜಿಲ್ಲೆಗೆ ಒಂದೂ ಮಂತ್ರಿ ಪಟ್ಟ ಇಲ್ಲದಿರುವ ಬಗ್ಗೆ ದುಃಖವಿದೆ ಎಂದು ನಳಿನ್ ಹೇಳಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…