ಮಂಗಳೂರು: ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಐವರು ಆರೋಪಿಗಳನ್ನು ಗುರುವಾರ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದೆ.
ಪ್ರಕರಣದಲ್ಲಿ ನೌಫಲ್(28), ಸೈನುಲ್ ಅಬಿದ್(22), ಮೊಹಮ್ಮದ್ ಸೈಯದ್(32), ಅಬ್ದುಲ್ ಬಶೀರ್(29) ಮತ್ತು ರಿಯಾಜ್(27) ಎಂಬುವರನ್ನು ಎನ್ಐಎ ಆರು ದಿನಗಳ (ಆ.23ರವರೆಗೆ) ವಶಕ್ಕೆ ಪಡೆದುಕೊಂಡಿದೆ.
ಜುಲೈ 27ರಂದು ಪ್ರವೀಣ್ ನೆಟ್ಟಾರ್ ಅವರನ್ನು ನಡು ರಸ್ತೆಯಲ್ಲಿ ಭೀಕರವಾಗಿ ಹತ್ಯೆಗೈಯಲಾಗಿತ್ತು. ಈ ಸಂಬಂಧ ಕಾನೂನು ಬಾಹಿರ ಚಟುಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಬೆಳ್ಳಾರೆ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಪ್ರಕರಣವನ್ನು ಎನ್ಐಎಗೆ ವರ್ಗಾವಣೆ ಮಾಡಲಾಗಿತ್ತು.
ಈ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಿರುವ ಎನ್ಐಎ ಅಧಿಕಾರಿಗಳು ಗುರುವಾರ ಐವರು ಆರೋಪಿಗಳನ್ನು ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡು ವಿಚಾರಣೆ ಆರಂಭಿಸಿದ್ದಾರೆ. ಸದ್ಯ ಐವರು ಆರೋಪಿಗಳು ಮಂಗಳೂರು ಜೈಲಿನಲ್ಲಿದ್ದು, ಅಲ್ಲಿಯೇ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಿದ್ದಾರೆಂದು ಮೂಲಗಳು ತಿಳಿಸಿವೆ.
ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…
ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ ಮಣಿಪಾಲ: ಪರ್ಕಳದ ಕೆಳಪರ್ಕಕಳ ಹೆದ್ದಾರಿಯಲ್ಲಿ ಕೆನರಾ ಬ್ಯಾಂಕಿನ ತಿರುವಿನಲ್ಲಿ ಕಂಟೇನರ್…
ಉಡುಪಿ: ಮೂವರು ರೌಡಿ ಶೀಟರ್ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್…
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…