Featured

ಮಂಗಳೂರು : ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಐವರು ಆರೋಪಿಗಳನ್ನು ಕಸ್ಟಡಿಗೆ ಪಡೆದ ಎನ್‌ಐಎ ತಂಡ – Vishwanews24

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ: ಐವರು ಆರೋಪಿಗಳನ್ನು ಕಸ್ಟಡಿಗೆ ಪಡೆದ ಎನ್‌ಐಎ ತಂಡ

ಮಂಗಳೂರು: ಹಿಂದೂ ಮುಖಂಡ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಐವರು ಆರೋಪಿಗಳನ್ನು ಗುರುವಾರ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಪೊಲೀಸ್‌ ಕಸ್ಟಡಿಗೆ ಪಡೆದುಕೊಂಡಿದೆ.

ಪ್ರಕರಣದಲ್ಲಿ ನೌಫ‌ಲ್‌(28), ಸೈನುಲ್‌ ಅಬಿದ್‌(22), ಮೊಹಮ್ಮದ್‌ ಸೈಯದ್‌(32), ಅಬ್ದುಲ್‌ ಬಶೀರ್‌(29) ಮತ್ತು ರಿಯಾಜ್‌(27) ಎಂಬುವರನ್ನು ಎನ್‌ಐಎ ಆರು ದಿನಗಳ (ಆ.23ರವರೆಗೆ) ವಶಕ್ಕೆ ಪಡೆದುಕೊಂಡಿದೆ.

ಜುಲೈ 27ರಂದು ಪ್ರವೀಣ್‌ ನೆಟ್ಟಾರ್‌ ಅವರನ್ನು ನಡು ರಸ್ತೆಯಲ್ಲಿ ಭೀಕರವಾಗಿ ಹತ್ಯೆಗೈಯಲಾಗಿತ್ತು. ಈ ಸಂಬಂಧ ಕಾನೂನು ಬಾಹಿರ ಚಟುಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಬೆಳ್ಳಾರೆ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಪ್ರಕರಣವನ್ನು ಎನ್‌ಐಎಗೆ ವರ್ಗಾವಣೆ ಮಾಡಲಾಗಿತ್ತು.

ಲಯನ್ಸ್ ಕ್ಲಬ್ ಬಂಟಕಲ್ಲು ಬಿ ಸಿ ರೋಡ್ , ಕಥೋಲಿಕ್ ಸಭಾ, ಮತ್ತು ಐಸಿವೈಎಂ.. ಸಹಭಾಗಿತ್ವದಲ್ಲಿ ನಡೆದ ಶಿಸ್ತಿನ ವಾಹನ ಜಾಥಾ..

ಈ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಳಿಸಿರುವ ಎನ್‌ಐಎ ಅಧಿಕಾರಿಗಳು ಗುರುವಾರ ಐವರು ಆರೋಪಿಗಳನ್ನು ಆರು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಪಡೆದುಕೊಂಡು ವಿಚಾರಣೆ ಆರಂಭಿಸಿದ್ದಾರೆ. ಸದ್ಯ ಐವರು ಆರೋಪಿಗಳು ಮಂಗಳೂರು ಜೈಲಿನಲ್ಲಿದ್ದು, ಅಲ್ಲಿಯೇ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಿದ್ದಾರೆಂದು ಮೂಲಗಳು ತಿಳಿಸಿವೆ.

Vishwa News 24

Recent Posts

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

10 hours ago

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

20 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

20 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

20 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

1 day ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 day ago