ಮಂಗಳೂರು : ಪ್ರಸಿದ್ದಿ ಪಡೆಯಬೇಕೆಂಬ ಉದ್ದೇಶದಿಂದ ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಬೆದರಿಕೆ ಕರೆ ಮಾಡಿದ್ದ ಆರೋಪಿ -Vishwanews24

ಮಂಗಳೂರು : ಪ್ರಸಿದ್ದಿ ಪಡೆಯಬೇಕೆಂಬ ಉದ್ದೇಶದಿಂದ ವಿಮಾನ ನಿಲ್ದಾಣಕ್ಕೆ ಹುಸಿಬಾಂಬ್ ಬೆದರಿಕೆ ಕರೆ ಮಾಡಿದ್ದ ಆರೋಪಿ -Vishwanews24

ಮಂಗಳೂರು : ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟಿದ್ದ ಆರೋಪಿ ಆದಿತ್ಯ ರಾವ್ ನಂತೆ ಪ್ರಸಿದ್ದಿ ಪಡೆಯಬೇಕು ಎಂಬ ಉದ್ದೇಶದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದೇನೆ ಎಂದು ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿ ಬಂಧಿತನಾಗಿದ್ದ ಆರೋಪಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು ಏರ್ ಪೋರ್ಟ್ ಗೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದ ಉಡುಪಿಯ ಕಾರ್ಕಳ ತಾಲೂಕು ಮುದ್ರಾಡಿಯ ವಸಂತ ಕೃಷ್ಣ ಶೇರಿಗಾರ (33) ಈಗಾಗಲೇ ಬಂಧಿಸಲಾಗಿದ್ದು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆತನನ್ನು ಕೋವಿಡ್ ಸೋಂಕು ಪರೀಕ್ಷೆ ನಡೆಸಬೇಕಾಗಿರುವುದರಿಂದ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಪರೀಕ್ಷಾ ವರದಿ ನೆಗೆಟಿವ್‌ ಬಂದರೆ ನ್ಯಾಯಾಲಯಕ್ಕೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗೆ ಪೊಲೀಸ್‌ ಕಸ್ಟಡಿಗೆ ಪಡೆಯಲು ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗುವುದು” ಎಂದು ಹೇಳಿದ್ದಾರೆ.

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಮಾಡಿದ ವ್ಯಕ್ತಿ ಕೇವಲ ಪ್ರಚಾರಕ್ಕಾಗಿ ತಾನು ಈ ಕೃತ್ಯ ಎಸಗಿರುವುದಾಗಿ ಪೋಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ.

ಪ್ರಚಾರ ಗಳಿಸುವ ಉದ್ದೇಶದಿಂದ ಈ ಕೃತ್ಯ ಎಸಗಿರುವುದಾಗಿ ಹೇಳಿಕೊಂಡಿದ್ದಾನೆ. ಜನವರಿ ತಿಂಗಳಿನಲ್ಲಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆದಿತ್ಯ ರಾವ್ ಎನ್ನುವ ವ್ಯಕ್ತಿ ಸ್ಪೋಟಕವೊಂದನ್ನು ಇರಿಸಿ ದೇಶ ಹಾಗೂ ವಿದೇಶಗಳಲ್ಲಿ ಒಂದೇ ದಿನದಲ್ಲಿ ಪ್ರಚಾರ ಗಿಟ್ಟಿಸಿಕೊಂಡಿದ್ದ. ಇದನ್ನೇ ರೋಲ್ ಮಾಡಲ್ ಆಗಿ ತೆಗೆದುಕೊಂಡ ಆರೋಪಿ ವಸಂತ್ ಗೂಗಲ್ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ನಂಬರ್ ಹುಡುಕಿದ್ದಾನೆ. ಕೇವಲ 8 ನೇ ತರಗತಿ ಕಲಿತಿರುವ ಈತನಿಗೆ ಗೂಗಲ್ ನಲ್ಲಿ ವಿಮಾನ ನಿಲ್ದಾಣದ ಮಾಜಿ ನಿರ್ದೇಶಕರಾದ ವಾಸುದೇವ್ ರಾವ್ ನಂಬರ್ ಸಿಕ್ಕಿದೆ. ಅವರನ್ನೇ ನಿಲ್ದಾಣದ ನಿರ್ದೇಶಕರು ಎಂದು ತಿಳಿದು ಆತ ಬೆದರಿಕೆಯ ಕರೆ ಮಾಡಿದ್ದಾನೆ.

ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ, ಹಾಗೂ ಇತರ ಸೆಕ್ಷನ್ ಮೂಲಕ ಆರೋಪಿಯನ್ನು ಮಂಗಳೂರು ಪೋಲೀಸರು ಬಂಧಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago